ಆ್ಯಪ್ನಗರ

ಲಕ್ಷ್ಮಿ ಹೆಬ್ಬಾಳ್ಕರ್‌ ನೀಚ ರಾಜಕಾರಣ: ರಮೇಶ್‌ ಜಾರಕಿಹೊಳಿ

ಪಿಎಲ್ ಡಿ ಬ್ಯಾಂಕ್ ನಲ್ಲಿ ಶಾಸಕ ಸತೀಶ ಜಾರಕಿಹೊಳಿಗೆ ಅವಮಾನವಾದರೆ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ದ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ‌ ಹೇಳಿದರು.

Vijaya Karnataka Web 6 Sep 2018, 6:37 pm
ಬೆಳಗಾವಿ: ಪಿಎಲ್ ಡಿ ಬ್ಯಾಂಕ್ ನಲ್ಲಿ ಶಾಸಕ ಸತೀಶ ಜಾರಕಿಹೊಳಿಗೆ ಅವಮಾನವಾದರೆ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ದ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ‌ ಹೇಳಿದರು.
Vijaya Karnataka Web ramesh


ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಲಕ್ಷ್ಮೀ ಹೆಬ್ಬಾಳ್ಕರ 90 ಕೋಟಿ ರೂ. ನೀಡಿರುವ ಸುದ್ದಿ ಹರಿದಾಡುತ್ತಿರುವುದು ಭೀತಿ ಮೂಡಿಸಿದೆ. ಹೆಬ್ಬಾಳ್ಕರ ಬಗ್ಗೆ ಮಾತನಾಡುವುದು ಸರಿಯಲ್ಲ. ಈ ಮಟ್ಟಕ್ಕೆ ಅವರು ಇಳಿಯುತ್ತಾರೆ ಎಂದು ಊಹಿಸಿರಲಿಲ್ಲ. ಸತೀಶ ಜಾರಕಿಹೊಳಿ ಅವರೇ ಹೆಬ್ಬಾಳ್ಕರ್ ಗೆ ಜಿಲ್ಲಾಧ್ಯಕ್ಷ ಮಾಡಿದ್ದದರು. ಆಗ ಜಿಲ್ಲಾಧ್ಯಕ್ಷ ಮಾಡಲು ನಾನು ಒಪ್ಪಿರಲಿಲ್ಲ ಎಂದವರು ಹೇಳಿದರು.

2007-08 ರಲ್ಲಿ ಗಾಡ್ ಫಾದರ್ ಯಾರು ಇದ್ದಾರೋ ಗೊತ್ತಿಲ್ಲ. ಅವರ ತಂದೆಗೆ ಕ್ಯಾನ್ಸರ್ ಆದಾಗ ಹಣ ನೀಡಿದ್ದೆ. ಲಕ್ಷ್ಮೀ ಸಹೋದರ ಚನ್ನರಾಜ ಹಟ್ಟಿಹೊಳಿ ಹೈದ್ರಾಬಾದ್ ವಿವಿಯಿಂದ ಹಣ ಇಲ್ಲದೆ ಹೊರ ಹಾಕಿದ್ದರು. ಆಗಲೂ ಸಹಾಯ ಮಾಡಿದ್ದೆ. ಹೆಬ್ಬಾಳ್ಕರ್ ಪುತ್ರನ ಶೈಕ್ಷಣಿಕಕ್ಕೂ ಸಹಾಯ ಮಾಡಿದ್ದೇನೆ ಎಂದು ಹೇಳಿದರು.

ಖಾನಾಪುರದ ಲಕ್ಷ್ಮೀ ಹೆಬ್ಬಾಳಕರ ಗಂಡನ ಮನೆಯ ಮೇಲೂ ದಾಳಿಯಾಗಬೇಕಿತ್ತು‌. ಅವಾಗಲೂ ನಾನು ಸಹಾಯ ಮಾಡಿದ್ದೆ. ಬೊಮ್ಮಾಯಿ, ಉಮೇಶ ಕತ್ತಿ ರಾಜಕಾರಣದಲ್ಲೂ ಯಾರು ಇಷ್ಟೊಂದು ದ್ವೇಷದ ರಾಜಕಾರಣ ಮಾಡಿರಲಿಲ್ಲ. ಹೆಬ್ಬಾಳ್ಕರ್ ಇಷ್ಟೊಂದು ನೀಚ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಕಾನೂನಿನ ಅರಿವಿಲ್ಲ. ಆಕೆ ಜಾರಕಿಹೊಳಿ ಕುಟುಂಬಕ್ಕೆ ಹಣ ನೀಡುವ ಅವಶ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ