ಆ್ಯಪ್ನಗರ

ನೀರಿನ ಸಮಸ್ಯೆ ಇದ್ದರೆ ಸ್ಪಂದಿಸುವೆ: ತಾಪಂಇಒ ಸಮೀರ್‌ ಮುಲ್ಲಾ

ಬೈಲಹೊಂಗಲ : ತಾಲೂಕಿನ 10, ಕಿತ್ತೂರು ತಾಲೂಕಿನ 9 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ...

Vijaya Karnataka 16 Jun 2019, 5:00 am
ಬೈಲಹೊಂಗಲ: ತಾಲೂಕಿನ 10, ಕಿತ್ತೂರು ತಾಲೂಕಿನ 9 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ. ಈಗಾಗಲೇ ಅನೇಕ ಬಾರಿ ಟ್ಯಾಂಕರ್‌, ಬೋರ್‌ವೆಲ್‌ಗಳ ಮೂಲಕ ನೀರು ಸರಬರಾಜು ಮಾಡಲಾಗಿದೆ. ಮುಂದೆಯೂ ಸಮಸ್ಯೆ ಇದ್ದ ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗುವುದೆಂದು ತಾಪಂ ಇಒ ಸಮೀರ್‌ ಮುಲ್ಲಾ ಹೇಳಿದರು.
Vijaya Karnataka Web BEL-15HTP9


ಪಟ್ಟಣದ ತಾ.ಪಂ.ಸಭಾ ಭವನದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ನೇತೃತ್ವವಹಿಸಿ ಅವರು ಮಾತನಾಡಿದರು. ಸರಕಾರದಿಂದ ಶಾಲಾ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ಮಕ್ಕಳು ಬ್ಯಾಂಕ್‌ ಖಾತೆಗಳಿಗೆ ಆಧಾರ್‌ ಕಾರ್ಡ್‌, ಮೊಬೈಲ್‌ ನಂಬರ್‌ ಲಿಂಕ್‌ ಮಾಡಬೇಕು. ಬ್ಯಾಂಕ್‌ ಅಧಿಕಾರಿಗಳು, ಸಿಬ್ಬಂದಿ ವಿದ್ಯಾರ್ಥಿಗಳು ಬ್ಯಾಂಕ್‌ಗೆ ಬಂದರೆ ಕೆಲಸ ವಿಳಂಬ ಮಾಡದೇ ಕಾಳಜಿವಹಿಸಿ ಕೆಲಸ ಮಾಡಬೇಕೆಂದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕೆಲ ಪಾಲಕರು ಅನಕ್ಷ ರಸ್ಥರು ಇರುವುದರಿಂದ ಅವರಿಗೆ ತೊಂದರೆ ನೀಡಬಾರದೆಂದು ಕಿವಿಮಾತು ಹೇಳಿದರು.

ತಾಪಂ ಅಧ್ಯಕ್ಷೆ ನೀಲವ್ವ ಫಕೀರನವರ ಅಧ್ಯಕ್ಷ ತೆವಹಿಸಿದ್ದರು. ಉಪಾಧ್ಯಕ್ಷ ಮಲ್ಲನಾಯ್ಕ ಭಾವಿ, ತಾ.ಪಂ.ಸಹಾಯಕ ನಿರ್ದೇಶಕ ಸುಭಾಸ ಸಂಪಗಾಂವಿ, ಸಮಾಜ ಕಲ್ಯಾಣಾಧಿಕಾರಿ ಮಹೇಶ ಉಣ್ಣಿ, ಸಹಾಯಕ ಕೃಷಿ ನಿರ್ದೇಶಕ ಮಹಾಬಳೇಶ್ವರ ಹೊಸಮನಿ, ತಾಲೂಕಾ ವೈದ್ಯಾಧಿಕಾರಿ ಡಾ.ಎಸ್‌.ಎಸ್‌.ಸಿದ್ದನ್ನವರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು. ಇದೇ ವೇಳೆ ನೀಲವ್ವ ಫಕೀರನವರ, ಮಲ್ಲನಾಯ್ಕ ಭಾವಿ ಅವರನ್ನು ಸತ್ಕರಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ