ಆ್ಯಪ್ನಗರ

ಸಕಾಲದಲ್ಲಿ ದಾಖಲೆ ಸಲ್ಲಿಸಿದರೆ ತಕ್ಷಣ ನರೇಗಾ ಹಣ ಬಿಡುಗಡೆ: ಈಶ್ವರಪ್ಪ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದವರು ಸಕಾಲದಲ್ಲಿ ದಾಖಲೆಗಳನ್ನು ಸಲ್ಲಿಸಿದರೆ ಹಣ ತಕ್ಷಣ ಬಿಡುಗಡೆಯಾಗುತ್ತದೆ. ರಾಜ್ಯದ ಪ್ರವಾಹ ಪೀಡಿತ 103 ತಾಲೂಕುಗಳಿಗೆ 1500 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

Vijaya Karnataka Web 26 May 2020, 10:13 pm
ಚನ್ನಮ್ಮನ ಕಿತ್ತೂರು: ಸಮೀಪದ ಬಚ್ಚನಕೇರಿಗೆ ಮಂಗಳವಾರ ಭೇಟಿ ನೀಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಕಾರ್ಯ ವೈಖರಿಯನ್ನು ಪರಿಶೀಲನೆ ಮಾಡಿದರು.
Vijaya Karnataka Web KS eshwarappa
ಸಾಂದರ್ಭಿಕ ಚಿತ್ರ


''ನಾನು ಈ ಇಲಾಖೆಯ ಸಚಿವನಾಗಿ ಜವಾಬ್ದಾರಿ ವಹಿಸಿಕೊಂಡಾಗ, ಉದ್ಯೋಗ ಖಾತ್ರಿ ಯೋಜನೆಯಡಿ 2800 ಕೋಟಿ ರೂ. ಬಾಕಿ ಇತ್ತು. ಈಗ 200 ಕೋಟಿಗೆ ಇಳಿದಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದವರು ಸಕಾಲದಲ್ಲಿ ದಾಖಲೆಗಳನ್ನು ಸಲ್ಲಿಸಿದರೆ ಹಣ ತಕ್ಷಣ ಬಿಡುಗಡೆಯಾಗುತ್ತದೆ. ರಾಜ್ಯದ ಪ್ರವಾಹ ಪೀಡಿತ 103 ತಾಲೂಕುಗಳ ರಸ್ತೆ ಅಭಿವೃದ್ಧಿಗೆ 1500 ಕೋಟಿ ರೂ. ಹಣ ಈಗಾಗಲೇ ಬಿಡುಗಡೆ ಮಾಡಲಾಗಿದೆ'', ಎಂದು ಹೇಳಿದರು.

ಕೊರೊನಾ ಹಾವಳಿಯ ವಿಷಮ ಸ್ಥಿತಿಯಲ್ಲಿಸ್ಪಂದಿಸಿರುವ ಕೇಂದ್ರ ಸರಕಾರ ಗ್ರಾಮೀಣಾಭಿವೃದ್ಧಿ ಇಲಾಖೆಗೆ 40 ಸಾವಿರ ಕೋಟಿ ರೂ. ಕೊಟ್ಟಿದೆ. ಇದರಿಂದ ನರೇಗಾ ಯೋಜನೆಗೆ ಹೆಚ್ಚು ಒತ್ತು ಸಿಕ್ಕಂತಾಗಿದೆ. ನಿನ್ನೆ ಒಂದೇ ದಿನ 9 ಲಕ್ಷಕ್ಕೂ ಅಧಿಕ ಜನ ಯೋಜನೆಯ ಅಡಿಯಲ್ಲಿಕೆಲಸ ನಿರ್ವಹಿಸಿದ್ದಾರೆ. ಇಲ್ಲಿಯವರೆಗೆ ವರ್ಷದಲ್ಲಿ100 ದಿನಗಳ ಕೆಲಸ ನಡೆಯುತ್ತಿತ್ತು. ಅದು ಇನ್ನುಮುಂದೆ 150 ದಿನಗಳಿಗೆ ಏರಿಕೆಯಾಗುತ್ತದೆ ಎಂದರು.

ಮುಂದಿನ 24 ಗಂಟೆ ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

ಶಾಸಕ ಮಹಾಂತೇಶ ದೊಡಗೌಡರ, ಶಂಕರ ಚನ್ನಂಗಿ, ನಾಗೇಶ ದುರಗದ, ತಾಲೂಕಿನ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು, ಕಾರ್ಮಿಕರು, ಗ್ರಾಮಸ್ಥರು ಸೇರಿದಂತೆ ಇನ್ನೂ ಅನೇಕರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ