ಆ್ಯಪ್ನಗರ

ಮರು ವಲಸೆ ಕಾರ್ಮಿಕರ ಮಾಹಿತಿ ಸಂಗ್ರಹ

ಬೆಳಗಾವಿ :ಜಿಲ್ಲೆಯ 4,000 ಕಾರ್ಮಿಕರು ಜಿಲ್ಲೆಗೆ ಮರಳಿದ್ದು, ಅವರ ...

Vijaya Karnataka 5 Jun 2020, 5:00 am
ಬೆಳಗಾವಿ: ಕೋವಿಡ್‌-19 ಹಿನ್ನೆಲೆಯಲ್ಲಿಹೊರರಾಜ್ಯಗಳಲ್ಲಿಕೆಲಸ ಮಾಡುತ್ತಿರುವ ಬೆಳಗಾವಿ ಜಿಲ್ಲೆಯ 4,000 ಕಾರ್ಮಿಕರು ಜಿಲ್ಲೆಗೆ ಮರಳಿದ್ದು, ಅವರ ವಿದ್ಯಾರ್ಹತೆ, ಕೌಶಲ, ಅನುಭವ ಇತ್ಯಾದಿ ವಿವರಗಳನ್ನು ಜಿಪಂ ಸಿಇಒ ಡಾ. ಕೆ.ವಿ. ರಾಜೇಂದ್ರ ಅವರು ಕ್ರೋಢೀಕರಿಸಲು ನಿರ್ಧರಿಸಿದ್ದಾರೆ. ಈ ಮೂಲಕ ಹೊರ ರಾಜ್ಯಗಳಿಂದ ಮರು ವಲಸೆ ಬಂದಿರುವ ಕಾರ್ಮಿಕರಿಗೆ ಉದ್ಯೋಗ ಕೊಡಲು ನಿರ್ಧರಿಸಲಾಗಿದೆ.
Vijaya Karnataka Web information collection of re migrated workers
ಮರು ವಲಸೆ ಕಾರ್ಮಿಕರ ಮಾಹಿತಿ ಸಂಗ್ರಹ


ಜಿಲ್ಲೆಯ ನಿರುದ್ಯೋಗಿ ಯುವಕ/ಯುವತಿಯರಿಗೆ ಕೌಶಲಾಭಿವೃದ್ಧಿ ಒದಗಿಸಿ, ಕೈಗಾರಿಕೆಗಳಲ್ಲಿಉದ್ಯೋಗ ದೊರಕಿಸಿಕೊಡಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಸೇತುವೆಯಾಗಿ ಕಾರ್ಯನಿರ್ವಹಿಸಲು ಸಿದ್ಧವಿದೆ. ಅಂತೆಯೇ ಜಿಲ್ಲೆಯಲ್ಲಿರುವ ಕೈಗಾರಿಕೆಗಳಿಗೆ ಅವಶ್ಯವಿರುವ ಕಾರ್ಮಿಕರ ಅಗತ್ಯತೆ ಕುರಿತ ಬೇಡಿಕೆಯನ್ನು ಬೆಳಗಾವಿಯ ಉದ್ಯಮಬಾಗದ ಜಿಲ್ಲಾಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಕಚೇರಿಯಲ್ಲಿನೀಡಬಹುದು ಎಂದು ಜಿಲ್ಲಾಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ ಪ್ರಕಟಣೆಯಲ್ಲಿತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ.9449224464.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ