ಆ್ಯಪ್ನಗರ

ಒಂಟೆ, ಗೋವುಗಳ ಅಕ್ರಮ ಸಾಗಣೆ ತಡೆಗೆ ಒತ್ತಾಯ

ಬೆಳಗಾವಿ: ಒಂಟೆ ಹಾಗೂ ಗೋವುಗಳ ಅಕ್ರಮ ಸಾಗಣೆ ತಡೆಗಟ್ಟುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್‌-ಬಜರಂಗ ದಳದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು...

Vijaya Karnataka 21 Aug 2018, 5:00 am
ಬೆಳಗಾವಿ: ಒಂಟೆ ಹಾಗೂ ಗೋವುಗಳ ಅಕ್ರಮ ಸಾಗಣೆ ತಡೆಗಟ್ಟುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್‌-ಬಜರಂಗ ದಳದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
Vijaya Karnataka Web BEL-20BGM1


ಬಕ್ರೀದ್‌ ಹಬ್ಬದ ದಿನದಂದು ಕೆಲವರು ವ್ಯಾಪಾರಕ್ಕಾಗಿ ಹಾಗೂ ಹಣದ ಆಸೆಗಾಗಿ ಕಾನೂನು ಬಾಹಿರವಾಗಿ ಪ್ರಾಣಿಗಳ ಸಾಗಣೆ, ವಧೆ ಮಾಡುವ ಸಂಭವವಿರುವುದರಿಂದ ಇವುಗಳನ್ನು ತಡೆಗಟ್ಟಲು ಜಿಲ್ಲಾಡಳಿತ ನಿಗಾವಹಿಸಬೇಕು. ಪ್ರಾಣಿಗಳ ಹತ್ಯೆ ಹಾಗೂ ಸಾಗಣೆ ತಡೆಗಟ್ಟುವ ಸಮಿತಿಯ ಸದಸ್ಯರಾಗಿರುವ ಜಿಲ್ಲಾಧಿಕಾರಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.

ಭಾವಕಣ್ಣ ಲೋಹಾರ, ವಿನೋದ ಪಾಟೀಲ, ಗಜಾನನ ಬಿರಾದಾರ, ಮಹೇಶ ಲೋಹಾರ, ಮಹೇಶ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ