ಆ್ಯಪ್ನಗರ

ಮುಂಗಾರು ಬೆಳೆಗಳಿಗೆ ವಿಮೆಯ ರಕ್ಷಣೆ -ನಿಗದಿತ ಅವಧಿಯೊಳಗೆ ನೋಂದಣಿ ಮಾಡಿಕೊಳ್ಳಲು ರೈತರಿಗೆ ಜಿಲ್ಲಾಧಿಕಾರಿ ಸಲಹೆ

ಬೆಳಗಾವಿ: 2020-21ನೇ ಸಾಲಿನ ಮುಂಗಾರು ...

Vijaya Karnataka 22 Jun 2020, 5:00 am
ಬೆಳಗಾವಿ: 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ರೈತರು ಹೆಸರು ಬೆಳೆ ಇದ್ದರೆ ಜು.15 ಹಾಗೂ ಇನ್ನುಳಿದ ಅಧಿಸೂಚಿತ ಬೆಳೆಗಳಿದ್ದರೆ ಜು.31 ರೊಳಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್‌.ಬಿ.ಬೊಮ್ಮನಹಳ್ಳಿ ತಿಳಿಸಿದರು.
Vijaya Karnataka Web 21LBS5_53
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿಫಸಲ್‌ ಬಿಮಾ ಯೋಜನೆ ಅನುಷ್ಠಾನ ಕುರಿತು ಏರ್ಪಡಿಸಿದ್ದ ಸಭೆಯಲ್ಲಿಜಿಲ್ಲಾಧಿಕಾರಿ ಎಸ್‌.ಬಿ. ಬೊಮ್ಮನಹಳ್ಳಿ ಮಾತನಾಡಿದರು.


ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿಫಸಲ್‌ ಬಿಮಾ ಯೋಜನೆ ಅನುಷ್ಠಾನ ಕುರಿತು ಏರ್ಪಡಿಸಿದ್ದ ಸಭೆಯಲ್ಲಿಅವರು ಮಾತನಾಡಿದರು. ತಾಲೂಕಿನ ಪ್ರಮುಖ ಬೆಳೆಗಳನ್ನು ಗ್ರಾಮ ಪಂಚಾಯಿತಿ ಮಟ್ಟ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿಅಧಿಸೂಚಿಸಲಾಗಿದ್ದು, ಆಲಿಕಲ್ಲುಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಕೀಟ, ರೋಗ ಬಾಧೆಗಳಿಂದ ಅಧಿಸೂಚಿತ ಬೆಳೆ ವಿಫಲವಾದ ಸಂದರ್ಭದಲ್ಲಿವಿಮೆಯು ರಕ್ಷಣೆ ಒದಗಿಸಲಿದೆ ಎಂದರು.

ಬೆಳೆ ಸಾಲ ಮಂಜೂರಾದ ಎಲ್ಲರೈತರನ್ನು ಕಡ್ಡಾಯವಾಗಿ ಫಸಲ್‌ ಬಿಮಾ ಯೋಜನೆಯಡಿ ಒಳಪಡಿಸಬಹುದಾಗಿದೆ. ಆದರೆ, ಬೆಳೆಸಾಲ ಪಡೆದ ರೈತರು ಈ ಯೋಜನೆಯಲ್ಲಿಭಾಗವಹಿಸಲು ಇಚ್ಛಿಸದಿದ್ದರೆ ಈ ಕುರಿತು ಸಂಬಂಧಿಸಿದ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತವಾಗಿ ನಿಗದಿತ ನಮೂನೆಯಲ್ಲಿಮುಚ್ಚಳಿಕೆ ಪತ್ರವನ್ನು ನೀಡಬೇಕು. ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು ಎಂದು ಅವರು ಹೇಳಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಕಾಶಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ಹಕಾಟೆ ಹಾಗೂ ವಿಮಾ ಅಧಿಕಾರಿಗಳು ಉಪಸ್ಥಿತರಿದ್ದರು.

ರೈತರು ಸಮೀಪದ ಬ್ಯಾಂಕ್‌, ಸಹಕಾರಿ ಸಂಘ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿವಿಮೆ ಕಂತು ಪಾವತಿಸಿ ಬೆಳೆ ವಿಮೆ ನೋಂದಣಿ ಮಾಡಬಹುದು. ಹೆಚ್ಚಿನ ಮಾಹಿತಿಗೆ ಸಾಮಾನ್ಯ ಸೇವಾ ಕೇಂದ್ರದ ಸಹಾಯವಾಣಿ ಸಂಖ್ಯೆ 8105207118 ಸಂಪರ್ಕಿಸಬಹುದು.
-ಎಸ್‌.ಬಿ.ಬೊಮ್ಮನಹಳ್ಳಿ, ಜಿಲ್ಲಾಧಿಕಾರಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ