ಆ್ಯಪ್ನಗರ

ಅಂತಾರಾಜ್ಯ ಕಳುವು ಆರೋಪಿಗಳ ಬಂಧನ

ಚಿಕ್ಕೋಡಿ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಕಳುವು ಆರೋಪಿತರನ್ನು ಪೊಲೀಸರು ಬಂಧಿಸಿದ್ದಾರೆ...

Vijaya Karnataka 19 Jun 2019, 5:00 am
ಚಿಕ್ಕೋಡಿ : ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಕಳುವು ಆರೋಪಿತರನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web BEL-18CKD4


ನೆರೆಯ ಸಾಂಗ್ಲಿ ಜಿಲ್ಲೆಯ ಲಿಂಗನೂರ ಗ್ರಾಮದ ಲೋಕೇಶ್‌ ಸುತಾರ(25) ಸಂದೀಪ ಪಾಟೀಲ್‌(20) ಕದ್ದ ವಸ್ತು ಸ್ವೀಕರಿಸುತ್ತಿದ್ದ ಸಾಂಗ್ಲಿ ಜಿಲ್ಲೆಯ ಆಷ್ಟಾದ ಅಜಿಂಕ್ಯಾ ಮಾಳಗಾಂವಕರ್‌(26) ಬಂಧಿತರು.

ಬಂಧಿತರಿಂದ 116 ಗ್ರಾಂ ಚಿನ್ನ, 30 ಗ್ರಾಂ ಬೆಳ್ಳಿ, 3 ಬೈಕ್‌ ಸೇರಿದಂತೆ 5.80 ಲಕ್ಷ ರೂ. ಮೌಲ್ಯದ ಕದ್ದ ವಸ್ತುಗಳನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳಗಾವಿ ಜಿಲ್ಲಾ ಎಸ್‌ಪಿ ಸುಧೀರಕುಮಾರ ರೆಡ್ಡಿ, ಚಿಕ್ಕೋಡಿಯ ಎಎಸ್‌ಪಿ ಮಿಥುನ್‌ಕುಮಾರ ಜಿ.ಕೆ., ಸಿಪಿಐ ಬಸವರಾಜ ಮುಕರ್ತಿಹಾಳ ನೇತೃತ್ವದ ಪೊಲೀಸ್‌ ತಂಡ ಕಾರ್ಯಾಚರಣೆ ನಡೆಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ