ಆ್ಯಪ್ನಗರ

ಸಚಿವ ಸ್ಥಾನ ನೀಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ

ತಮಗೆ ಸಚಿವ ಸ್ಥಾನ ನೀಡುವುದು ಬಿಡುವುದು ...

Vijaya Karnataka 16 Dec 2019, 5:00 am
ಬೆಳಗಾವಿ: ತಮಗೆ ಸಚಿವ ಸ್ಥಾನ ನೀಡುವುದು ಬಿಡುವುದು ಸಿಎಂ ಬಿ.ಎಸ್‌. ಯಡಿಯೂರಪ್ಪ ಮತ್ತು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರವೆಂದು ಶಾಸಕ ಅಭಯ ಪಾಟೀಲ ಹೇಳಿದರು.
Vijaya Karnataka Web it is up to the high command to appoint a minister
ಸಚಿವ ಸ್ಥಾನ ನೀಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ


ನಗರದ ವ್ಯಾಕ್ಸಿನ್‌ ಡಿಪೋ ಆವರಣದಲ್ಲಿಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿಯ ಶಿಸ್ತಿನ ಶಿಪಾಯಿ, ಸಚಿವ ಸ್ಥಾನ ಕುರಿತು ಏನನ್ನೂ ಹೇಳಲು ಬಯಸುವುದಿಲ್ಲವೆಂದು ಸ್ಪಷ್ಟಪಡಿಸಿದರು.

ಸ್ಮಾರ್ಟ್‌ ಸಿಟಿ ಯೋಜನೆಗಳನ್ನು ಅತೀಯಾಗಿ ಟೀಕಿಸುವುದು ಸರಿಯಲ್ಲ. ಈಗ ಕೆಲಸಗಳು ನಡೆದಿರುವುದರಿಂದ ಜನರಿಗೆ ತೊಂದರೆ ಆಗುತ್ತಿರಬಹುದು. ಆದರೆ, ಪೂರ್ಣಗೊಂಡ ನಂತರ ಅನುಕೂಲ ಕಲ್ಪಿಸಲಿವೆ ಎಂದು ಸಮರ್ಥಿಸಿಕೊಂಡರು. ಶಿವಾಜಿ ಉದ್ಯಾನದಲ್ಲಿನಿರ್ಮಾಣಗೊಂಡಿರುವ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರೆ ಬಿಂಬಿಸುವ ಶಿವ ಚರಿತ್ರೆಯನ್ನು ಜನವರಿ ತಿಂಗಳಿನಲ್ಲಿಮುಖ್ಯಮಂತ್ರಿಗಳ ಕಡೆಯಿಂದ ಉದ್ಘಾಟಿಸುವುದಾಗಿ ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ