ಆ್ಯಪ್ನಗರ

ಮಾಂಸ ಸಂಸ್ಕರಣಾ ಘಟಕಕ್ಕೆ ನ್ಯಾಯಾಧೀಶರ ಭೇಟಿ

ಬೆಳಗಾವಿ: ನಿಯಮ ಬಾಹೀರ ಚಟುವಟಿಕೆ ಹಿನ್ನೆಲೆಯಲ್ಲಿ ಜಪ್ತಿ ಮಾಡಿರುವ ಇಲ್ಲಿನ ಆಟೋ ನಗರದ ಮಾಂಸ್ಕ ಸಂಸ್ಕರಣಾ ಘಟಕಗಳಿಗೆ ಗುರುವಾರ 3ನೇ ಜೆಎಂಎಫ್‌ಸಿ ...

Vijaya Karnataka 28 Sep 2018, 5:00 am
ಬೆಳಗಾವಿ: ನಿಯಮ ಬಾಹೀರ ಚಟುವಟಿಕೆ ಹಿನ್ನೆಲೆಯಲ್ಲಿ ಜಪ್ತಿ ಮಾಡಿರುವ ಇಲ್ಲಿನ ಆಟೋ ನಗರದ ಮಾಂಸ್ಕ ಸಂಸ್ಕರಣಾ ಘಟಕಗಳಿಗೆ ಗುರುವಾರ 3ನೇ ಜೆಎಂಎಫ್‌ಸಿ ನ್ಯಾಯಾಧೀಶರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Vijaya Karnataka Web BLG-2709-2-52-27MAHESH5A


ಜಪ್ತಿ ಮಾಡಿರುವ ಸಂಸ್ಕರಣಾ ಘಟಕದಲ್ಲಿರುವ ಮಾಂಸ ನಿಗದಿತ ಸಮಯಕ್ಕಿಂತ ಹೆಚ್ಚು ಸಮಯ ಇಟ್ಟರೆ ಹಾಳಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮಾಂಸ ಮಾರಾಟಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮಾಂಸ್ಕ ಸಂಸ್ಕರಣಾ ಘಟಕಗಳ ಮಾಲೀಕರು ಹೈಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿದಾರರ ಮನವಿ ಹಿನ್ನೆಲೆಯಲ್ಲಿ ಹೈ ಕೋರ್ಟ್‌ ಕೆಳ ನ್ಯಾಯಾಲಯಕ್ಕೆ ಆದೇಶಿಸಿ ಸಂಸ್ಕರಣಾ ಘಟಕದಲ್ಲಿರುವ ಮಾಂಸದ ಗುಣಮಟ್ಟ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ 3ನೇ ಜೆಎಂಎಫ್‌ಸಿ ನ್ಯಾಯಾಧೀಶ ಸುಧೀರ ರೆಡ್ಡಿ ಮತ್ತು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಮಾಂಸ ಸಂಸ್ಕರಣಾ ಘಟಕದಲ್ಲಿ ಮಾಂಸ ಸಂಸ್ಕರಣೆ ಹೊರತಾಗಿ ನಿಯಮ ಬಾಹೀರವಾಗಿ ಜಾನುವಾರು ಹತ್ಯೆ ನಡೆಸಲಾಗುತ್ತಿದೆ ಎಂದು ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರು ದಾಖಲಿಸಿದ ದೂರಿನ ಹಿನ್ನೆಲೆಯಲ್ಲಿ ವಿಧಾನಸೌಧ ಚುನಾವಣೆಗೂ ಮುಂಚೆ ಆಟೋ ನಗರದ ಕೈಗಾರಿಕಾ ಪ್ರದೇಶದಲ್ಲಿ ಐದಕ್ಕೂ ಹೆಚ್ಚು ಮಾಂಸ ಸಂಸ್ಕರಣಾ ಘಟಕಗಳನ್ನು ಮಾಳ ಮಾರುತಿ ಠಾಣೆ ಪೊಲೀಸರು ಸೀಜ್‌ ಮಾಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ