ಆ್ಯಪ್ನಗರ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿರೋಧಿಸಿ ಪ್ರತಿಭಟನೆ, ವಾಟಾಳ್‌ ನಾಗರಾಜ್‌ ಪೊಲೀಸ್‌ ವಶಕ್ಕೆ!

ಸದಾ ಹೋರಾಟಗಳಿದಂಲೇ ಸುದ್ದಿಯಾಗುವ ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಸ್‌ಎಸ್‌ಎಲ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಹಾಗೂ ಆನ್‌ಲೈನ್‌ ಶಿಕ್ಷಣ ವಿರೋಧಿಸಿ ಬೆಳಗಾವಿ ಸುವರ್ಣ ವಿಧಾನಸೌಧ ಮುಂದೆ ಪ್ರತಿಭಟನೆ ನಡೆಸಲು ಆಗಮಿಸುತ್ತಿದ್ದ ವೇಳೆ ವಾಟಾಳ್‌ ಅವರನ್ನ ವಶಕ್ಕೆ ಪಡೆಯಲಾಗಿದೆ.

Vijaya Karnataka Web 19 Jun 2020, 1:18 pm
ಬೆಳಗಾವಿ: ಎಸ್‌ಎಸ್‌ಎಲ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಹಾಗೂ ಆನ್‌ಲೈನ್‌ ಶಿಕ್ಷಣ ವಿರೋಧಿಸಿ ಬೆಳಗಾವಿ ಸುವರ್ಣ ವಿಧಾನಸೌಧ ಮುಂದೆ ಪ್ರತಿಭಟನೆ ನಡೆಸಲು ಆಗಮಿಸುತ್ತಿದ್ದ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್‌ ಅವರನ್ನು ಹಿರೇಬಾಗೇವಾಡಿ ಟೋಲ್‌ನಲ್ಲಿ ಹಿರೇಬಾಗೇವಾಡಿ ಪೊಲೀಸರು ಜೂ.19ರ ಶುಕ್ರವಾರ ಬಂಧಿಸಿದ್ದಾರೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ದೇಶದ ವಿವಿಧ ರಾಜ್ಯಗಳು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯನ್ನು ರದ್ದುಪಡಿಸಿ, ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಿವೆ.
Vijaya Karnataka Web AnyConv.com__Dtl3M8Kp


ಜತೆಗೆ ಮುಂಬೈನಲ್ಲಿ ಐಟಿಐ ಹಾಗೂ ಗೋವಾದಲ್ಲಿ ಅಂತಿಮ ವರ್ಷದ ಪದವಿ ಹೊರತುಪಡಿಸಿ, ಇನ್ನುಳಿದ ಎಲ್ಲ ಪದವಿ ಪರೀಕ್ಷೆಗಳನ್ನು ರದ್ದುಪಡಿಸಲಾಗಿದ್ದು ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ. ಹಾಗಾಗಿ ರಾಜ್ಯದಲ್ಲಿಯೂ ಕೂಡ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಪಾಸ್ ಮಾಡಬೇಕು. ಆನ್ಲೈನ್ ತರಗತಿ ನಡೆಸಲಾಗುತ್ತಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ನೆಟ್‌ವರ್ಕ್‌ ಸಮಸ್ಯೆಯಾಗುತ್ತಿದೆ.

ಅನೇಕ ವಿದ್ಯಾರ್ಥಿಗಳ ಬಳಿ ಸ್ಮಾರ್ಟ್ ಪೋನ್ ಕೂಡ ಇಲ್ಲ. ಇದು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹಾಗಾಗಿ ಆನ್ಲೈನ್ ತರಗತಿಯನ್ನು ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲು ಬೆಳಗಾವಿ ಸುವರ್ಣ ವಿಧಾನಸೌಧದ ಕಡೆಗೆ ಶುಕ್ರವಾರ ಬೆಳಗ್ಗೆ ವಾಟಾಳ್ ನಾಗರಾಜ್‌ ಆಗಮಿಸುತ್ತಿದ್ದರು. ಈ ವೇಳೆ ಹಿರೇಬಾಗೇವಾಡಿ ಪೊಲೀಸರು ಟೋಲ್ ಗೇಟ್ ಬಳಿ ತಡೆದು ವಶಕ್ಕೆ ಪಡೆದಿದ್ದಾರೆ.

ಘರ್ಷಣೆ ನಡೆದ 3 ದಿನಗಳ ನಂತರ 10 ಭಾರತೀಯ ಸೈನಿಕರನ್ನು ಬಿಡುಗಡೆ ಮಾಡಿದ ಚೀನಾ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂಬಂಧ ಮಕ್ಕಳು ಇತ್ತೀಚಿನ ವರೆಗೂ ಗೊಂದಲದಲ್ಲೇ ಇದ್ದರು. ಇನ್ನು ಪರೀಕ್ಷೆ ನಡೆಸುವಂತೆ ಆದೇಶ ನೀಡಲು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಕೂಡ ಸಲ್ಲಿಯಾಗಿತ್ತು. ಇದು ಎರಡು ದಿನಗಳ ಹಿಂದೆ ವಜಾಗೊಂಡಿತ್ತು. ದೇಶದ ಕೆಲ ರಾಜ್ಯಗಳು ಎಸ್‌ಎಸ್‌ಎಲ್‌ಸಿ ಪರೀಕ್ಚೆ ರದ್ದು ಪಡಿಸಿ ವಿದ್ಯಾರ್ಥಿಗಳನ್ನ ಪಾಸ್‌ ಮಾಡಿದ್ದವು. ಇದೀಗ ಕರ್ನಾಟಕ ಬಾಕಿ ಉಳಿದಿದ್ದ ಒಂದು ಪಿಯು ಪರೀಕ್ಷೆಯನ್ನ ನಡೆಸಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸಜ್ಜಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ