ಆ್ಯಪ್ನಗರ

ಕನ್ನಡ ಧ್ವಜ ವಿವಾದದ ಕುರಿತು ಚರ್ಚಿಸಲು ಅವಕಾಶ ನೀಡುವಂತೆ ಎಂಇಎಸ್ ಮತ್ತು ಶಿವಸೇನೆ ಒತ್ತಾಯ

ಬೆಳಗಾವಿ ಗಡಿಯಲ್ಲಿ ಮಹಾರಾ‍ಷ್ಟ್ರ ಕ್ಯಾತೆ ತೆಗೆದಿರುವ ಬೆನ್ನಲ್ಲೇ ಅಲ್ಲಿನ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಕರ್ನಾಟಕದಲ್ಲಿ ಪಕ್ಷಾತೀತವಾಗಿ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ ವಿವಾದದ ಕುರಿತು ಚರ್ಚಿಸಲು ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ.

Vijaya Karnataka Web 21 Jan 2021, 3:15 pm
ಬೆಳಗಾವಿ: ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರು ನೆಟ್ಟಿದ್ದ ಕನ್ನಡ ಧ್ವಜ ವಿವಾದದ ಕುರಿತು ಚರ್ಚಿಸಲು ಅವಕಾಶ ನೀಡುವಂತೆ ಗುರುವಾರ ಎಂಇಎಸ್ ಮತ್ತು ಶಿವಸೇನೆ ಮುಖಂಡರು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು.
Vijaya Karnataka Web ಬೆಲಾ


ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜಸ್ತಂಭ ಸ್ಥಾಪನೆ ಮಾಡಿರುವ ಕಾನೂನು ಬಾಹಿರವಾಗಿದ್ದು, ಜಿಲ್ಲಾಡಳಿತ ಚರ್ಚಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಿದೆ. ಪಾಲಿಕೆ ಠರಾವು ಹಾಕಿ ಪಾಲಿಕೆಯ ಎದುರು ಭಗವಾ ಧ್ವಜ ಹಾಕಲಾಗಿತ್ತು. ಆದರೂ ಜಿಲ್ಲಾಡಳಿತದ ತೆರವುಗೊಳಿಸಿತ್ತು. ಈಗ ಯಾವುದೇ ಪರವಾನಿಗೆ ಇಲ್ಲದೇ ಕನ್ನಡ ಧ್ವಜಸ್ತಂಭ ಸ್ಥಾಪಿಸಲಾಗಿದೆ. ಜತೆಗೆ ಕರ್ನಾಟಕ‌ ಹೈಕೋರ್ಟ್ ಕೂಡ ಕನ್ನಡ ಧ್ವಜಕ್ಕೆ ಮಾನ್ಯತೆ ಇಲ್ಲ. ಹಾಗಾಗಿ ಕನ್ನಡ ಧ್ವಜ ಹಾಕದಂತೆ ಸೂಚಿಸಿತ್ತು. ಆದರೆ, ಈಗ ಕನ್ನಡ ಧ್ವಜ ಸ್ತಂಭ ‌ಕಾನೂನು ಬಾಹಿರವಾಗಿ ಹಾಕಲಾಗಿದೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಎಂಇಎಸ್, ಶಿವಸೇನೆ ಮುಖಂಡರೊಂದಿಗೆ ಕೆಲವು ಗೊಂದಲಗಳ ಕುರಿತು ಚರ್ಚಿಸಿ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕು ಎಂದರು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಜ.28 ಅಥವಾ 29 ರಂದು ಎಂಇಎಸ್ ಮತ್ತು ಶಿವಸೇನೆ ಮುಖಂಡರೊಂದಿಗೆ ಸಭೆ ನಡೆಸಿ ಚರ್ಚಿಸಲಾಗುವುದು. ಸದ್ಯ ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಹಂಚಿಕೆ ಹಾಗೂ ಕೆಡಿಪಿ ಸಭೆಯ ನಂತರ ಸಭೆ ನಡೆಸಲಾಗುವುದು. ಗಡಿಯಲ್ಲಿ ಯಾರೇ ಗಲಾಟೆ ಮಾಡಿದರೂ ಕಾನೂನು ರೀತಿ ಕ್ರಮಕೈಗೊಳ್ಳಲಾಗುವುದು ಎಂದರು.
ಎಂಇಎಸ್ ಮುಖಂಡರಾದ ದೀಪಕ‌ ದಳವಿ,‌ ಮನೋಹರ‌ ಕಿಣೇಕರ್, ವಿಕಾಸ ಕಲಘಟಗಿ, ಮದನ್ ಭಾಮನೆ, ಶುಭಂ ಶಳಕೆ, ನೇತಾಜಿ ಜಾಧವ, ಶಿವಸೇನೆ ಮುಖಂಡ ಪ್ರಕಾಶ ಶಿರೋಳಕರ್ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ