ಆ್ಯಪ್ನಗರ

ಬೆಳಗಾವಿಯಲ್ಲಿ ಬಹು ಭಾಷಾ ಸಾಮರಸ್ಯವಿದೆ: ರಮೇಶ್‌ ಜಾರಕಿಹೊಳಿ

ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿರುವ ಬೆಳಗಾವಿ ಸಂಸ್ಕೃತಿಯು ವಿಶಿಷ್ಟವಾಗಿದೆ. ಕನ್ನಡ, ಹಿಂದಿ, ಮರಾಠಿ ಸೇರಿದಂತೆ ಬಹು ಭಾಷಾ ಸಾಮರಸ್ಯ ಬೆಳಗಾವಿಯಲ್ಲಿದೆ ಎಂದು ರಮೇಶ್‌ ಜಾರಕಿಹೊಳಿ ಹೇಳಿದರು.

Vijaya Karnataka Web 1 Nov 2018, 12:44 pm
ಬೆಳಗಾವಿ:ಇಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಉಸ್ತುವಾರಿ ಸಚಿವ ರಮೇಶ್‌ ಜಾರಕಿಹೊಳಿ ಅವರು ರಾಷ್ಟ್ರ ಧ್ವಜದ ಧ್ವಜಾರೋಹಣ ಮಾಡಿದರು.
Vijaya Karnataka Web belgaum


ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿರುವ ಬೆಳಗಾವಿ ಸಂಸ್ಕೃತಿಯು ವಿಶಿಷ್ಟವಾಗಿದೆ. ಕನ್ನಡ, ಹಿಂದಿ, ಮರಾಠಿ ಸೇರಿದಂತೆ ಬಹು ಭಾಷಾ ಸಾಮರಸ್ಯ ಬೆಳಗಾವಿಯಲ್ಲಿದೆ ಎಂದರು. ನಂತರ, ಜಿಲ್ಲೆಯಲ್ಲಿ ಸರಕಾರ ನಡೆಸಿದ ಸಾಧನೆಗಳನ್ನು ರಮೇಶ್‌ ಜಾರಕಿಹೊಳಿ ತಮ್ಮ ಭಾಷಣದ ವೇಳೆ ವಿವರಿಸಿದರು.

ಧ್ವಜಾರೋಹಣ


ಈ ವೇಳೆ, ಪತ್ರಕರ್ತರು, ಕನ್ನಡ ಹೋರಾಟಗಾರರು ಮತ್ತು ಕನ್ನಡಕ್ಕಾಗಿ ದುಡಿದ ಪತ್ರಿಕೆಗಳ ಸಂಪಾದಕರಿಗೆ ಸನ್ಮಾನಿಸಲಾಯಿತು. ಅಲ್ಲದೆ, ಪೊಲೀಸ್ ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆದಿದ್ದು, ಬಳಿಕ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ನಡೆಸಿದರು. ಭರತೇಶ ಶಾಲೆಯ ಪ್ರಾಚಾರ್ಯೆ ಯೋಗಿತಾ ಎಸ್. ಪಾಟೀಲ ನೃತ್ಯ ಸಂಯೋಜನೆ ಮಾಡಿದ್ದರು.

ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಡಿಸಿ ಎಸ್.ಬಿ. ಬೊಮ್ಮನಳ್ಳಿ, ಸಂಸದರಾದ ಸುರೇಶ್‌ ಅಂಗಡಿ, ಪ್ರಕಾಶ್ ಹುಕ್ಕೇರಿ, ಶಾಸಕ ಅನಿಲ್ ಬೆನಕೆ, ಜಿ.ಪಂ ಉಪಾಧ್ಯಕ್ಷ ಅರುಣ ಕಟಾಂಬಳೆ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ