ಆ್ಯಪ್ನಗರ

Karnataka Election 2023: ಅಮಿತ್ ಶಾಗೂ ಕರ್ನಾಟಕಕ್ಕೂ ಏನು ಸಂಬಂಧ? ಸಿದ್ದರಾಮಯ್ಯ ಪ್ರಶ್ನೆ

Karnataka Election 2023: ಅಮಿತ್‌ ಶಾ ಬಂದ್ರೆ ಜಗದೀಶ್ ಶೆಟ್ಟರ್ ಅವರಿಗೆ ಸೋಲಾಗುವುದಿಲ್ಲ. ಹುಬ್ಬಳ್ಳಿಯಲ್ಲಿ ಯಾವುದೇ ಸಭೆ ಮಾಡಿದರೂ, ಏನೂ ಆಗುವುದಿಲ್ಲ. ಕರ್ನಾಟಕಕ್ಕೂ, ಅಮಿತ್‌ ಶಾ ಗೂ ಏನು ಸಂಬಂಧ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ, ಕಾಗವಾಡ ಪ್ರಚಾರ ಕಾರ್ಯದಲ್ಲಿ ಪ್ರಶ್ನಿಸಿದರು.

Edited byಸೌಮ್ಯಶ್ರೀ ಮಾರ್ನಾಡ್ | Vijaya Karnataka Web 25 Apr 2023, 5:15 pm

ಹೈಲೈಟ್ಸ್‌:

  • ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭೆ ಕ್ಷೇತ್ರದ ಹೂಗಾರ ಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ ಪಕ್ಷದ ಅಭ್ಯರ್ಥಿ ರಾಜು ಕಾಗೆ ಅವರ ಪರ ಮತ ಯಾಚಿಸಿದರು.
  • ಹುಬ್ಬಳ್ಳಿಯಲ್ಲಿ ಅಮಿತ್ ಶಾ ಯಾವುದೇ ಸಭೆ ಮಾಡಿದರೂ ಏನೂ ಆಗುವುದಿಲ್ಲ. ಅಮಿತ್ ಶಾಗೂ, ಕರ್ನಾಟಕಕ್ಕೂ ಏನು ಸಂಬಂಧ ? ಆ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಅವರು ಒಳ್ಳೆಯ ಕಾರ್ಯ ಮಾಡಿದ್ದಾರೆ, 6 ಸಲ ಶಾಸಕರಾಗಿ ಸಾಕಷ್ಟು ಅಭಿವೃದ್ದಿ ಕೆಲಸವನ್ನು ಮಾಡಿದ್ದಾರೆ
  • ಅಮಿತ್ ಶಾ ಬಂದ್ರೆ ಶೆಟ್ಟರ್ ಅವರಿಗೆ ಸೋಲು ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Siddaramaiah
ಕಾಗವಾಡ : ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭೆ ಕ್ಷೇತ್ರದ ಹೂಗಾರ ಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ ಪಕ್ಷದ ಅಭ್ಯರ್ಥಿ ರಾಜು ಕಾಗೆ ಅವರ ಪರ ಮತ ಯಾಚಿಸಿದರು.
ಈ ವೇಳೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಅಮಿತ್ ಶಾ ಯಾವುದೇ ಸಭೆ ಮಾಡಿದರೂ ಏನೂ ಆಗುವುದಿಲ್ಲ. ಅಮಿತ್ ಶಾಗೂ, ಕರ್ನಾಟಕಕ್ಕೂ ಏನು ಸಂಬಂಧ ? ಆ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಅವರು ಒಳ್ಳೆಯ ಕಾರ್ಯ ಮಾಡಿದ್ದಾರೆ, ಆರು ಸಲ ಶಾಸಕರಾಗಿ ಸಾಕಷ್ಟು ಅಭಿವೃದ್ದಿ ಕೆಲಸವನ್ನು ಮಾಡಿದ್ದಾರೆ, ಇದರಿಂದ ಅಮಿತ್ ಶಾ ಬಂದ್ರೆ ಶೆಟ್ಟರ್ ಅವರಿಗೆ ಸೋಲು ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.

Congress Ticket in Belagavi: ಹೊಸಬರ ಕೈಹಿಡಿದ ಕಾಂಗ್ರೆಸ್‌- ಅಂತಿಮ ಪಟ್ಟಿಯ ಐವರಲ್ಲಿ ಮೂವರು ಹೊಸ ಮುಖಗಳು

ಶೆಟ್ಟರ್ ಸೋಲಿಸಲು ಸಭೆ?

ಹುಬ್ಬಳ್ಳಿಯಲ್ಲಿ ಬಿಜೆಪಿ ಸಾಲು ಸಾಲು ಸಭೆಗಳನ್ನು ನಡೆಸುತ್ತಿದ್ದು,ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆಯಾ ಎಂದು ಮಾದ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಏನೂ ಆಗೋದಿಲ್ಲ. ಅಮಿತ್ ಶಾ ಹೇಳಿದ ತಕ್ಷಣ ಜನ ಸೋಲಿಸುತ್ತಾರಾ?..ಅಮಿತ್ ಶಾ ಅವರಿಗೂ ಕರ್ನಾಟಕಕ್ಕೂ ಏನು ಸಂಬಂಧ ಎಂದರು. ಅಮಿತ್ ಶಾ, ಮೋದಿ ನೂರು ಸಾರಿ ಬಂದ್ರೂ ಏನೂ ಆಗುವುದಿಲ್ಲ. ಕರ್ನಾಟಕದ ಜನ ಕಾಂಗ್ರೆಸ್ ಗೆಲ್ಲಿಸಲು ತೀರ್ಮಾನಿಸಿದ್ದಾರೆ ಎಂದರು.

ಮಾದ್ಯಮ ಜೊತೆ ಮಾತನಾಡುತ್ತಾ ನಿನ್ನೆ ಬೆಳಗಾವಿ ಜಿಲ್ಲೆಯಲ್ಲಿ ಪ್ರಚಾರ ಮಾಡಿದ್ದೇನೆ, ಇವತ್ತು ಚಿಕ್ಕೋಡಿ ನಾಲ್ಕು ವಿಧಾನಸಭಾ ಕ್ಷೇತ್ರಗಳಾದ ಕಾಗವಾಡ, ಕುಡಚಿ, ನಿಪ್ಪಾಣಿ,ಯಮಕರಮಡಿ ಕ್ಷೇತ್ರದಲ್ಲಿ ಪ್ರಚಾರ ಮಾಡುತಿದ್ದೇನೆ ಎಂದು ತಿಳಿಸಿದರು.

ಕಿತ್ತೂರು ಮಾಜಿ ಶಾಸಕ ಡಿಬಿ ಇನಾಮಾದಾರ ಅವರ ಅಗಲಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪವನ್ನು ಸೂಚಿಸಿ ಮಾತನಾಡುತ್ತಾ, ಡಿ. ಬಿ ಇನಾಮಾದಾರ ಕಳೆದ ತಿಂಗಳು ನಮ್ಮ ಮನೆಗೆ ಎರಡು ಸಲ ಬಂದಿದ್ದರು. ನಾವು ಕಿತ್ತೂರಿನಲ್ಲಿ ಪ್ರಜಾದ್ವನಿ ಸಮಾವೇಶ ಮಾಡಿದಾಗ ಒಳ್ಳೆ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರು.

ಸಿದ್ದರಾಮಯ್ಯಗೆ ವರುಣಾದಲ್ಲಿ ಸೋಲುವ ಭಯ; ಅವರು ರಾಜ್ಯದ 224 ಕ್ಷೇತ್ರದಲ್ಲೂ ಸ್ಪರ್ಧಿಸಲಿ
ಇದ್ದಕ್ಕಿದ್ದಂತೆ ಶ್ವಾಸಕೋಶದ ಸಮಸ್ಯೆಯಾಗಿ ಈ ರೀತಿ ಆಗಿದೆ. ನಾನು ಕೂಡ ಮಣಿಪಾಲ ಆಸ್ಪತ್ರೆ ವೈದ್ಯರ ಜೊತೆ ಮಾತನಾಡಿದ್ದೆ. ಪಾಪ ಅಕಾಲಿಕ ಮರಣಕ್ಕೆ ತುತ್ತಾಗುತ್ತಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತೇನೆ. ನನ್ನ ಜೊತೆ ತುಂಬಾ ಆತ್ಮೀಯವಾಗಿ ಒಡನಾಟ ಇತ್ತು. ಜೊತೆಗೆ ಮಂತ್ರಿಗಳಾಗಿದ್ದೆವು. ಅವರು ಕಾಲವಾಗಿದ್ದಾರೆಂದರೆ ನಂಬಲು ಸಾಧ್ಯವಾಗುತ್ತಿಲ್ಲ ಎಂದರು. ಒಳ್ಳೆಯ ಸ್ನೇಹಿತ ಶುದ್ಧ ಹಸ್ತದ ರಾಜಕಾರಣಿಯನ್ನು ಕಳೆದುಕೊಂಡಿದ್ದು ತುಂಬಾ ನೋವಾಗಿದೆ ಎಂದರು‌.

ಪ್ರಚಾರ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಪ್ರಕಾಶ್ ರಾಥೋಡ್, ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಹಾಜರಿದ್ದರು.

ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಚಾಮುಂಡಿ ಬೆಟ್ಟದಲ್ಲಿ ಮಾತನಾಡಿ, ಪ್ರಿಯಾಂಕ, ಅಮಿತ್ ಶಾ ರಾಜ್ಯಕ್ಕೆ ಬಂದು ಪ್ರಚಾರ ಮಾಡುವುದರಿಂದ ಏನೂ ಅಪಯೋಗ ಇಲ್ಲ ಎಂದು ಕಿಡಿಕಾರಿದ್ದಾರೆ.
ಲೇಖಕರ ಬಗ್ಗೆ
ಸೌಮ್ಯಶ್ರೀ ಮಾರ್ನಾಡ್
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಡಿಜಿಟಲ್ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರರಾಗಿ 7 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ರಾಜಕೀಯ, ನಾಗರಿಕರ ಸಮಸ್ಯೆಗಳು, ಬೆಂಗಳೂರು ಸ್ಥಳೀಯ ಆಡಳಿತದ ಕುಂದುಕೊರತೆಗಳ ವರದಿ, ವಿಶೇಷ ವ್ಯಕ್ತಿಗಳ ಸಂದರ್ಶನಗಳನ್ನು ಮಾಡುತ್ತಿದ್ದಾರೆ. ರಂಗಭೂಮಿ ಹಾಗೂ ಯಕ್ಷಗಾನ ಇವರ ಇತರ ಆಸಕ್ತಿಕರ ಕ್ಷೇತ್ರಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ