ಆ್ಯಪ್ನಗರ

ಝಾನ್ಸಿ ರಾಣಿ ಕರ್ಮಭೂಮಿ ನೋಡಿದ್ದೇ, ಈಗ ಚೆನ್ನಮ್ಮ ಕರ್ಮಭೂಮಿ ನೋಡಿ ಧನ್ಯತೆ ಮೂಡಿದೆ: ಥಾವರಚಂದ್ ಗೆಹ್ಲೋಟ್‌

ಜ್ಞಾನ ಗಳಿಸುವುದು ಶಿಕ್ಷಣದ ಮೂಲ ಉದ್ದೇಶವಾಗಿದೆ. ಶಿಕ್ಷಣದಿಂದ ಸರ್ವಾಂಗೀಣ ಪ್ರಗತಿಗೆ ದಾರಿ ದೊರಕುತ್ತದೆ. ಹೊಸ ಹೊಸ ಆವಿಷ್ಕಾರಗಳನ್ನು ಅರಿತುಕೊಳ್ಳಲು ಶಿಕ್ಷಣ ಅತ್ಯಗತ್ಯವಾಗಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ತಿಳಿಸಿದರು.

Vijaya Karnataka Web 9 Mar 2022, 5:44 pm
ಬೆಳಗಾವಿ: ಯುವ ಸಮುದಾಯವು ಸಂವಿಧಾನಾತ್ಮಕ ಕರ್ತವ್ಯಗಳನ್ನು ನಿಭಾಯಿಸಿ 'ಏಕ ಭಾರತ ಶ್ರೇಷ್ಠ ಭಾರತ' ನಿರ್ಮಿಸುವ ಗುರಿ ನಾವು ಹೊಂದಬೇಕಿದೆ. ಭಾರತಕ್ಕೆ ವಿಶ್ವಗುರುವಿನ ಗೌರವವನ್ನು ಮತ್ತೆ ದೊರಕಿಸಿಕೊಡುವ ನಿಟ್ಟಿನಲ್ಲಿ ‌ನಾವೆಲ್ಲರೂ ದೃಢಹೆಜ್ಜೆಯನ್ನು ಇಡಬೇಕಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಕರೆ ನೀಡಿದರು.
Vijaya Karnataka Web ಥಾವರ್‌ಚಂದ್‌ ಗೆಹ್ಲೋಟ್‌
ಥಾವರ್‌ಚಂದ್‌ ಗೆಹ್ಲೋಟ್‌


ಬೆಳಗಾವಿಯ ಸುವರ್ಣ ವಿಧಾನಸೌಧ ಸೆಂಟ್ರಲ್ ಸಭಾಂಗಣದಲ್ಲಿ ಬುಧವಾರ (ಮಾ.9) ನಡೆದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 9 ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬೆಳಗಾವಿಯಲ್ಲಿ ಮಕ್ಕಳೊಂದಿಗೆ ಮಗು ಆದ ಗವರ್ನರ್‌! ಮಕ್ಕಳಿಗೆ ವಿವಿಧ ಪ್ರಶ್ನೆ ಕೇಳಿದ ಥಾವರ್‌ ಚಂದ್‌ ಗೆಹ್ಲೋಟ್‌

ಸ್ವಯಂ ಉದ್ಯೋಗದ ಕಡೆಗೆ ಒಲವು ಬೆಳೆಸಿ ದೇಶದ ಪ್ರಗತಿಗೆ ಕೈಜೋಡಿಸಲು ಶಿಕ್ಷಣದ ಪಾತ್ರ ಪ್ರಮುಖವಾಗಿದೆ. ಸ್ವಾವಲಂಬಿ ಬದುಕು ಮತ್ತು ಸ್ವಾವಲಂಬಿ‌ ಭಾರತ ನಿರ್ಮಾಣದ ದಿಸೆಯಲ್ಲಿ ಶಿಕ್ಷಣ ಮಹತ್ತರವಾಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಬಳಿಕ ತಮ್ಮ ಸಮಾಜ ಮತ್ತು ದೇಶದ ಬಗ್ಗೆ ಗೌರವಾದರಗಳನ್ನು ಬೆಳೆಸಿಕೊಂಡು ಆತ್ಮ ಸಂತೃಪ್ತಿಯ ಜತೆಗೆ ಬದುಕು ರೂಪಿಸಿಕೊಳ್ಳಬೇಕು ಎಂದರು.

ಘಟಿಕೋತ್ಸವ ಸಮಾರಂಭದ ಹಿನ್ನಲೆಯು ಗುರುಕುಲದ ಕಾಲದಿಂದ ನಿರಂತರವಾಗಿ ನಡೆದುಬರುತ್ತಿದೆ. ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಇದೊಂದು ಖುಷಿ ಮತ್ತು ಭಾವನಾತ್ಮಕ ದಿನವಾಗಿದೆ. ರಾಣಿ ಚೆನ್ನಮ್ಮ ವಿವಿ ಧ್ಯೇಯ ವಾಕ್ಯವು ಕೂಡ ಜನರನ್ನು ವಿದ್ವಾನ್‌ರನ್ನಾಗಿಸುವುದಾಗಿದೆ ಎಂದು ರಾಜ್ಯಪಾಲರು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಚೆನ್ನಮ್ಮನ ಹೆಸರಿನ ವಿವಿಗೆ ಪ್ರೇರಣಾಶಕ್ತಿಯಾಗಲಿ. ಝಾನ್ಸಿ ರಾಣಿ ಲಕ್ಷ್ಮೀಬಾಯಿಯ ಕರ್ಮಭೂಮಿ ನೋಡಿದ್ದ ನನಗೆ ರಾಣಿ ಚೆನ್ನಮ್ಮ ಕರ್ಮಭೂಮಿಗೆ ಭೇಟಿ ನೀಡಿದ ಬಳಿಕ ಧನ್ಯತಾಭಾವನೆ ಮೂಡಿತು. ಸ್ವಾತಂತ್ರ್ಯ ಉಳಿಸಿಕೊಂಡು ಹೋಗಲು ರಾಣಿ ಚೆನ್ನಮ್ಮ ಮತ್ತಿತರ ತ್ಯಾಗ ಮತ್ತು ಹೋರಾಟ ‌ನಮಗೆ ಪ್ರೇರಣಾದಾಯಕವಾಗಿದೆ ಎಂದರು.

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಆದಷ್ಟು ಬೇಗ ನಿರ್ಮಿಸುವ ಮೂಲಕ ಎಲ್ಲ ಸೌಕರ್ಯಗಳು ವಿದ್ಯಾರ್ಥಿಗಳಿಗೆ ಲಭಿಸುವಂತಾಗಲಿ ಎಂದು ಘನತೆವೆತ್ತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್‌ ಆಶಿಸಿದರು.

ಮೂವರಿಗೆ ಗೌರವ ಡಾಕ್ಟರೇಟ್

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಮಹನೀಯರಮ್ನು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ಪದ್ಮಶ್ರೀ ಪುರಸ್ಕೃತರಾದ ಡಾ. ಎಚ್.ಸುದರ್ಶನ ಬಲ್ಲಾಳ ಇವರಿಗೆ ವೈದ್ಯಕೀಯ ಕ್ಷೇತ್ರದಲ್ಲಿ " ಡಾಕ್ಟರ್ ಆರ್ ಸೈನ್ಸ್ ", ವಾದಿರಾಜ ಬಿ.ದೇಶಪಾಂಡೆ ಇವರಿಗೆ ಸಾಹಿತ್ಯ ಕ್ಷೇತ್ರದಲ್ಲಿ " ಡಾಕ್ಟರ್ ಆರ್ ಲೆಟರ್ಸ್" ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಯಿತು.

ನಾವು ಪಬ್ಲಿಕ್‌ಗಾಗಿ, ಅವರು ಪಬ್ಲಿಸಿಟಿಗಾಗಿ: ಲಖನ್‌ ಜಾರಕಿಹೊಳಿ ಮಾತಿನ ಬಾಣ ಯಾರ ಕಡೆಗೆ?

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಪಂಡಿತ್ ರಾಜೀವ ತಾರಾನಾಥ ಇವರಿಗೆ ಭಾರತೀಯ ಸಂಗೀತ ಕ್ಷೇತ್ರದಲ್ಲಿ "ಡಾಕ್ಟರ್ ಆಪ್ ಲೆಟರ್ಸ್" ಪ್ರಕಟಿಸಲಾಗಿದ್ದು, ಅವರು ಅನುಪಸ್ಥಿತರಿದ್ದರು.

ಕುಲಸಚಿವ ಪ್ರೊ.ಬಸವರಾಜ ಪದ್ಮಶಾಲಿ ಅತಿಥಿಗಳನ್ನು ಪರಿಚಯಿಸಿದರು. ಕುಲಸಚಿವ (ಮೌಲ್ಯಮಾಪನ) ಪ್ರೊ.ವೀರನಗೌಡ ಪಾಟೀಲ, ಹಣಕಾಸು ಅಧಿಕಾರಿ ಪ್ರೊ.ಡಿ.ಎನ್.ಪಾಟೀಲ, ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ