ಆ್ಯಪ್ನಗರ

ಬೆಳಗಾವಿ ಯಾವತ್ತಿದ್ರೂ ಕರ್ನಾಟಕದ್ದೇ..! ಉದ್ಧವ್‌ ಠಾಕ್ರೆ ವಿರುದ್ಧ ಕರವೇ ಯುವ ಸೇನೆ ಆಕ್ರೋಶ

ಬೆಳಗಾವಿ ಸೇರಿ ಹಲವು ಪ್ರದೇಶಗಳನ್ನು ಕರ್ನಾಟಕ ಆಕ್ರಮಿತ ಪ್ರದೇಶ ಎಂದು ಘೋಷಿಸುತ್ತೇವೆ ಎನ್ನುವ ಮೂಲಕ ಗಡಿ ಕ್ಯಾತೆ ತೆಗೆದಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

Vijaya Karnataka Web 22 Jan 2021, 2:51 pm
ಬೆಳಗಾವಿ: ಮಹಾರಾಷ್ಟ್ರದ ಮುಖ್ಯಮಂತ್ರಿ‌ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆ (ಹರೀಶ್‌ಗೌಡ ಬಣದ) ಯುವ ಸೇನೆ ಕಾರ್ಯಕರ್ತರು ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
Vijaya Karnataka Web Belagavi protest
ಕರವೇ ಯುವಸೇನೆ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು


ಬೆಂಗಳೂರಿನಿಂದ ನೂರಕ್ಕೂ ಅಧಿಕ ಕರವೇ ಕಾರ್ಯಕರ್ತರು 30 ಹೆಚ್ಚು ವಾಹನಗಳಲ್ಲಿ ನಗರದ ಚನ್ನಮ್ಮ ವೃತ್ತಕ್ಕೆ ಆಗಮಿಸಿದರು. ಸಿಎಂ ಉದ್ಧವ ಠಾಕ್ರೆ ಮತ್ತು ಮಹಾರಾಷ್ಟ್ರ ಸರಕಾರದ ವಿರುದ್ಧ ಘೋಘಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಪ್ರತಿಭಟನೆಗೆ ಕೈಬಿಟ್ಟು ವಾಪಸ್ ತೆರಳುವಂತೆ ಸೂಚಿಸಿದರು. ಆದರೆ ಪ್ರತಿಭಟನೆ ಕೈಬಿಡಲು ಕಾರ್ಯಕರ್ತರು ನಿರಾಕರಿಸಿದರು.

ಪೊಲೀಸರು ಪ್ರತಿಭಟನಾ ನಿರತ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ವೇಳೆ ಮಾತನಾಡಿ ಕರವೇ ಮುಖಂಡರು, ಬೆಳಗಾವಿ ಯಾವತ್ತಿದ್ದರೂ ಕರ್ನಾಟಕದ್ದೇ ಸಿಎಂ ಉದ್ಧವ್ ಠಾಕ್ರೆ ವಿವಾದಾತ್ಮಕ ಹೇಳಿಕೆ ನೀಡುವುದನ್ನು‌ ನಿಲ್ಲಿಸಬೇಕು. ಗಡಿಯ ಒಂದಿಂಚೂ ಜಾಗ ಬಿಟ್ಟು ಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡದ ನೆಲದಲ್ಲಿ ನಿಂತು ದ್ರೋಹ ಬಗೆಯೋ ನಾಡದ್ರೋಹಿಗಳ ಬಾಯಿಗೆ ಬೀಗ ಹಾಕೋರು ಯಾರು?ಕೆಲ ದಿನಗಳ ಹಿಂದೆ ಸಿಎಂ ಉದ್ಧವ್‌ ಠಾಕ್ರೆ ಟ್ವೀಟ್‌ ಮಾಡುವ ಮೂಲಕ ಬೆಳಗಾವಿ ಸೇರಿ ಅನೇಕ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಿದವುಗಳಾಗಿದ್ದು, ಅವುಗಳನ್ನು ಕರ್ನಾಟಕ ಆಕ್ರಮಿತ ಪ್ರದೇಶಗಳೆಂದು ಘೋಷಣೆ ಮಾಡಲಾಗುವುದು ಎಂದು ಹೇಳಿದ್ದರು. ಅದಲ್ಲದೇ ಪ್ರಧಾನಿ ಮೋದಿಗೂ ಈ ಬಗ್ಗೆ ದೂರು ನೀಡಲು ಮಹಾರಾಷ್ಟ್ರ ಸಂಸದರು ಮುಂದಾಗಿದ್ದಾರೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ