ಬೆಳಗಾವಿ : ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿದ್ದಕ್ಕೆ ಮುನಿಸಿಕೊಂಡಿರುವ ಕತ್ತಿ ಸಹೋದರರೊಂದಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ.
ಶಾಸಕ ಉಮೇಶ್ ಕತ್ತಿ ಮಾಲೀಕತ್ವದ ಬೆಳಗಾವಿಯ ಹೋಟೆಲ್ನಲ್ಲಿ ಚಿಕ್ಕೋಡಿ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಯಡಿಯೂರಪ್ಪ ಗೌಪ್ಯವಾಗಿ ಸುದೀರ್ಘ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಟಿಕೆಟ್ ವಿಷಯವಾಗಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಟಿಕೆಟ್ ವಂಚಿತ ರಮೇಶ್ ಕತ್ತಿ ಅವರಿಗೆ ಪಕ್ಷ ಸೂಕ್ತ ಸಮಯದಲ್ಲಿ ಸೂಕ್ತ ಹುದ್ದೆ ನೀಡಲಿದೆ'', ಎಂದು ಭರವಸೆ ನೀಡಿದರು.
ಅಲ್ಲದೆ, ಏ.3ರಂದು ಚಿಕ್ಕೋಡಿಯಲ್ಲಿ ಅಣ್ಣಾಸಾಹೇಬ್ ಜೊಲ್ಲೆ ನಾಮಪತ್ರ ಸಲ್ಲಿಸಲಿದ್ದಾರೆ. ಅದೇ ದಿನ ಮಧ್ಯಾಹ್ನ ಕ್ಷೇತ್ರದಲ್ಲಿ ಪಕ್ಷದ ಸಮಾವೇಶ ನಡೆಯಲಿದೆ. ಅದರಲ್ಲಿ ತಾವೂ ಪಾಲ್ಗೊಳ್ಳುತ್ತಿದ್ದು, ಉಮೇಶ್ ಕತ್ತಿ, ರಮೇಶ್ ಕತ್ತಿ ಸೇರಿ ಜಿಲ್ಲೆಯ ಹಾಲಿ, ಮಾಜಿ ಶಾಸಕ, ಸಂಸದರು ಹಾಜರಿರುವರು ಎಂದರು.
ಬಂಡಾಯವಿಲ್ಲ: ರಮೇಶ್ ಕತ್ತಿ ಮಾತನಾಡಿ, ''ಟಿಕೆಟ್ ತಪ್ಪಿದ್ದಕ್ಕೆ ಬಂಡಾಯ ಇಲ್ಲ. ಲೋಕಸಭೆ ಕ್ಷೇತ್ರ ಎನ್ನುವುದು ದೇಶದ ಆಸ್ತಿ. ಮೊದಲು ದೇಶ, ನಂತರ ಮೋದಿ, ಯಡಿಯೂರಪ್ಪ. ಇವರ ಮುಂದೆ ಉಳಿದೆಲ್ಲವೂ ಗೌಣ. ಕಾಂಗ್ರೆಸ್ನಲ್ಲೂ ಸ್ನೇಹಿತರಿದ್ದಾರೆ. ಟಿಕೆಚ್ ತಪ್ಪಿದ್ದಕ್ಕೆ ಫೋನ್ ಮಾಡಿ ಮಾತನಾಡಿದ್ದಾರೆ. ಆದರೆ, ಯಾವುದೇ ಆಫರ್ ಕೊಟ್ಟಿಲ್ಲ. ನಮ್ಮ ವರಿಷ್ಠರ ಬಳಿಯೂ ಯಾವ ಬೇಡಿಕೆ ಇಟ್ಟಿಲ್ಲ. ಅವರೂ ಆಫರ್ ಕೊಟ್ಟಿಲ್ಲ. ಟಿಕೆಟ್ ತಪ್ಪಿದ್ದಕ್ಕೆ ಬೇಸರಗೊಂಡಿರುವ ಅಭಿಮಾನಿಗಳನ್ನು ಸಂತೈಸುತ್ತೇನೆ. ಎಲ್ಲರೂ ಸೇರಿ ಚುನಾವಣೆ ಎದುರಿಸುತ್ತೇವೆ. ವಿಧಾನಪರಿಷತ್ ಸದಸ್ಯ ಆಗುವುದಿಲ್ಲ'', ಎಂದು ಸ್ಪಷ್ಟಪಡಿಸಿದರು.
ಅಣ್ಣಾಸಾಹೇಬ್ ಜೊಲ್ಲೆ, ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕ ಉಮೇಶ್ ಕತ್ತಿ, ಬೆಳಗಾವಿ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ, ಮಾಜಿ ಸಚಿವ ಲಕ್ಷ್ಮಣ ಸವದಿ, ಶಾಸಕರಾದ ಮಹಾದೇವಪ್ಪ ಯಾದವಾಡ, ದುರ್ಯೋಧನ ಐಹೊಳೆ, ಮಹಾಂತೇಶ ದೊಡಗೌಡರ, ಆನಂದ ಮಾಮನಿ, ಅನಿಲ ಬೆನಕೆ, ಶಶಿಕಲಾ ಜೊಲ್ಲೆ, ಪಿ.ರಾಜೀವ್ ಸೇರಿದಂತೆ ಬಿಜೆಪಿ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾಹುಲ್ಗೆ ಬಿಎಸ್ವೈ ಸವಾಲು :
''ನಾನು ಎಲ್.ಕೆ. ಆಡ್ವಾಣಿ ಮತ್ತು ಇತರರಿಗೆ ಹಣ ಕೊಟ್ಟಿದ್ದೇನೆ ಎಂದು ದೂರಿರುವ ರಾಹುಲ್ ಗಾಂಧಿ ಆರೋಪ ಸಾಬೀತು ಮಾಡಿದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ. ಇಲ್ಲದಿದ್ದರೆ, ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು'', ಎಂದು ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ರಾಹುಲ್ ಗಾಂಧಿಗೆ ಸ್ವಲ್ಪನಾದರೂ ಮೆಚ್ಯುರಿಟಿ, ಜವಾಬ್ದಾರಿ ಇದೆ ಎಂದುಕೊಂಡಿದ್ದೆ. ಅವರು ಕಾಂಗ್ರೆಸ್ ಅಧ್ಯಕ್ಷ ಎನ್ನುವುದನ್ನು ಮರೆತು ಬೇಜವಾಬ್ದಾರಿ ಹೇಳಿಕೆ ಕೊಡುತ್ತಿದ್ದಾರೆ'', ಎಂದು ವಾಗ್ದಾಳಿ ನಡೆಸಿದರು. ''ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂದು ಜೆಡಿಎಸ್ಗೆ ಬೆಂಬಲ ಕೊಟ್ಟ ಕಾಂಗ್ರೆಸ್ ಈಗ ಪಶ್ಚಾತ್ತಾಪ ಪಡುತ್ತಿದೆ. ಮೈತ್ರಿ ಸರಕಾರದಲ್ಲಿ ಅಸಮಾಧಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. 20ಕ್ಕೂ ಹೆಚ್ಚು ಶಾಸಕರು ಕುಮಾರಸ್ವಾಮಿ ತಮ್ಮ ಸಿಎಂ ಎಂದು ಒಪ್ಪುತ್ತಿಲ್ಲ. ಇದರ ಪರಿಣಾಮವಾಗಿ ಲೋಕಸಭೆ ಚುನಾವಣೆ ನಂತರ ಮೈತ್ರಿ ಸರಕಾರ ಉಳಿಯಲ್ಲ'', ಎಂದು ಭವಿಷ್ಯ ನುಡಿದರು.
ಶಾಸಕ ಉಮೇಶ್ ಕತ್ತಿ ಮಾಲೀಕತ್ವದ ಬೆಳಗಾವಿಯ ಹೋಟೆಲ್ನಲ್ಲಿ ಚಿಕ್ಕೋಡಿ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಯಡಿಯೂರಪ್ಪ ಗೌಪ್ಯವಾಗಿ ಸುದೀರ್ಘ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಟಿಕೆಟ್ ವಿಷಯವಾಗಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಟಿಕೆಟ್ ವಂಚಿತ ರಮೇಶ್ ಕತ್ತಿ ಅವರಿಗೆ ಪಕ್ಷ ಸೂಕ್ತ ಸಮಯದಲ್ಲಿ ಸೂಕ್ತ ಹುದ್ದೆ ನೀಡಲಿದೆ'', ಎಂದು ಭರವಸೆ ನೀಡಿದರು.
ಅಲ್ಲದೆ, ಏ.3ರಂದು ಚಿಕ್ಕೋಡಿಯಲ್ಲಿ ಅಣ್ಣಾಸಾಹೇಬ್ ಜೊಲ್ಲೆ ನಾಮಪತ್ರ ಸಲ್ಲಿಸಲಿದ್ದಾರೆ. ಅದೇ ದಿನ ಮಧ್ಯಾಹ್ನ ಕ್ಷೇತ್ರದಲ್ಲಿ ಪಕ್ಷದ ಸಮಾವೇಶ ನಡೆಯಲಿದೆ. ಅದರಲ್ಲಿ ತಾವೂ ಪಾಲ್ಗೊಳ್ಳುತ್ತಿದ್ದು, ಉಮೇಶ್ ಕತ್ತಿ, ರಮೇಶ್ ಕತ್ತಿ ಸೇರಿ ಜಿಲ್ಲೆಯ ಹಾಲಿ, ಮಾಜಿ ಶಾಸಕ, ಸಂಸದರು ಹಾಜರಿರುವರು ಎಂದರು.
ಬಂಡಾಯವಿಲ್ಲ: ರಮೇಶ್ ಕತ್ತಿ ಮಾತನಾಡಿ, ''ಟಿಕೆಟ್ ತಪ್ಪಿದ್ದಕ್ಕೆ ಬಂಡಾಯ ಇಲ್ಲ. ಲೋಕಸಭೆ ಕ್ಷೇತ್ರ ಎನ್ನುವುದು ದೇಶದ ಆಸ್ತಿ. ಮೊದಲು ದೇಶ, ನಂತರ ಮೋದಿ, ಯಡಿಯೂರಪ್ಪ. ಇವರ ಮುಂದೆ ಉಳಿದೆಲ್ಲವೂ ಗೌಣ. ಕಾಂಗ್ರೆಸ್ನಲ್ಲೂ ಸ್ನೇಹಿತರಿದ್ದಾರೆ. ಟಿಕೆಚ್ ತಪ್ಪಿದ್ದಕ್ಕೆ ಫೋನ್ ಮಾಡಿ ಮಾತನಾಡಿದ್ದಾರೆ. ಆದರೆ, ಯಾವುದೇ ಆಫರ್ ಕೊಟ್ಟಿಲ್ಲ. ನಮ್ಮ ವರಿಷ್ಠರ ಬಳಿಯೂ ಯಾವ ಬೇಡಿಕೆ ಇಟ್ಟಿಲ್ಲ. ಅವರೂ ಆಫರ್ ಕೊಟ್ಟಿಲ್ಲ. ಟಿಕೆಟ್ ತಪ್ಪಿದ್ದಕ್ಕೆ ಬೇಸರಗೊಂಡಿರುವ ಅಭಿಮಾನಿಗಳನ್ನು ಸಂತೈಸುತ್ತೇನೆ. ಎಲ್ಲರೂ ಸೇರಿ ಚುನಾವಣೆ ಎದುರಿಸುತ್ತೇವೆ. ವಿಧಾನಪರಿಷತ್ ಸದಸ್ಯ ಆಗುವುದಿಲ್ಲ'', ಎಂದು ಸ್ಪಷ್ಟಪಡಿಸಿದರು.
ಅಣ್ಣಾಸಾಹೇಬ್ ಜೊಲ್ಲೆ, ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕ ಉಮೇಶ್ ಕತ್ತಿ, ಬೆಳಗಾವಿ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ, ಮಾಜಿ ಸಚಿವ ಲಕ್ಷ್ಮಣ ಸವದಿ, ಶಾಸಕರಾದ ಮಹಾದೇವಪ್ಪ ಯಾದವಾಡ, ದುರ್ಯೋಧನ ಐಹೊಳೆ, ಮಹಾಂತೇಶ ದೊಡಗೌಡರ, ಆನಂದ ಮಾಮನಿ, ಅನಿಲ ಬೆನಕೆ, ಶಶಿಕಲಾ ಜೊಲ್ಲೆ, ಪಿ.ರಾಜೀವ್ ಸೇರಿದಂತೆ ಬಿಜೆಪಿ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾಹುಲ್ಗೆ ಬಿಎಸ್ವೈ ಸವಾಲು :
''ನಾನು ಎಲ್.ಕೆ. ಆಡ್ವಾಣಿ ಮತ್ತು ಇತರರಿಗೆ ಹಣ ಕೊಟ್ಟಿದ್ದೇನೆ ಎಂದು ದೂರಿರುವ ರಾಹುಲ್ ಗಾಂಧಿ ಆರೋಪ ಸಾಬೀತು ಮಾಡಿದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ. ಇಲ್ಲದಿದ್ದರೆ, ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು'', ಎಂದು ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ರಾಹುಲ್ ಗಾಂಧಿಗೆ ಸ್ವಲ್ಪನಾದರೂ ಮೆಚ್ಯುರಿಟಿ, ಜವಾಬ್ದಾರಿ ಇದೆ ಎಂದುಕೊಂಡಿದ್ದೆ. ಅವರು ಕಾಂಗ್ರೆಸ್ ಅಧ್ಯಕ್ಷ ಎನ್ನುವುದನ್ನು ಮರೆತು ಬೇಜವಾಬ್ದಾರಿ ಹೇಳಿಕೆ ಕೊಡುತ್ತಿದ್ದಾರೆ'', ಎಂದು ವಾಗ್ದಾಳಿ ನಡೆಸಿದರು. ''ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂದು ಜೆಡಿಎಸ್ಗೆ ಬೆಂಬಲ ಕೊಟ್ಟ ಕಾಂಗ್ರೆಸ್ ಈಗ ಪಶ್ಚಾತ್ತಾಪ ಪಡುತ್ತಿದೆ. ಮೈತ್ರಿ ಸರಕಾರದಲ್ಲಿ ಅಸಮಾಧಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. 20ಕ್ಕೂ ಹೆಚ್ಚು ಶಾಸಕರು ಕುಮಾರಸ್ವಾಮಿ ತಮ್ಮ ಸಿಎಂ ಎಂದು ಒಪ್ಪುತ್ತಿಲ್ಲ. ಇದರ ಪರಿಣಾಮವಾಗಿ ಲೋಕಸಭೆ ಚುನಾವಣೆ ನಂತರ ಮೈತ್ರಿ ಸರಕಾರ ಉಳಿಯಲ್ಲ'', ಎಂದು ಭವಿಷ್ಯ ನುಡಿದರು.