ಆ್ಯಪ್ನಗರ

ಅಪ್ರಾಪ್ತ ಬಾಲಕಿ ಅಪಹರಣ: ದೂರು ದಾಖಲು

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಮದುವೆಯಾಗುವುದಾಗಿ ಹೇಳಿ ನಿರಂತರ ದೈಹಿಕ ಸಂಪರ್ಕ ಬೆಳೆಸಿದ ಕುರಿತು ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ...

Vijaya Karnataka 6 Jun 2018, 5:00 am
ಹುಕ್ಕೇರಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಮದುವೆಯಾಗುವುದಾಗಿ ಹೇಳಿ ನಿರಂತರ ದೈಹಿಕ ಸಂಪರ್ಕ ಬೆಳೆಸಿದ ಕುರಿತು ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
Vijaya Karnataka Web kidnapping the girl complaint filed
ಅಪ್ರಾಪ್ತ ಬಾಲಕಿ ಅಪಹರಣ: ದೂರು ದಾಖಲು


ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಮೇ 1ರಂದು 16 ವಯಸ್ಸಿನ ತಮ್ಮ ಮಗಳನ್ನು ಯಾರೋ ಅಪಹರಿಸಿಕೊಂಡು ಹೋಗಿದ್ದಾರೆಂದು ಬಾಲಕಿ ತಂದೆ ಪ್ರಕರಣ ದಾಖಲಿಸಿದ್ದರು.

ಈ ಕುರಿತು ಪಿಎಸ್‌ಐ ಪ್ರಹ್ಲಾದ ಚೆನ್ನಗಿರಿ ತನಿಖೆ ಕೈಗೊಂಡಾಗ ಅದೇ ಗ್ರಾಮದ ಆರೋಪಿ ಶಂಕರ ಶಿವಪ್ಪಾ ಮಾಳಗೆ(20) ಬಾಲಕಿಯನ್ನು ಅಪಹರಿಸಿಕೊಂಡು ಮಹಾರಾಷ್ಟ್ರ ರಾಜ್ಯದ ಸಾವಳಾಜಿ ಗ್ರಾಮಕ್ಕೆ ಕರೆದುಕೊಂಡು ಹೋಗಿದ್ದು ಪತ್ತೆಯಾಗಿದೆ.

ಬಾಲಕಿಯೊಂದಿಗೆ ಮದುವೆಯಾಗುವುದಾಗಿ ಹೇಳಿದ ಆರೋಪಿ ಪದೇ ಪದೇ ದೈಹಿಕ ಸಂಪರ್ಕ ಬೆಳೆಸಿದ್ದಾಗಿ ವಿಚಾರಣೆ ಸಮಯದಲ್ಲಿ ಬಾಲಕಿ ಹೇಳಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ತನಿಖೆ ಮುಂದುವರಿದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ