ಆ್ಯಪ್ನಗರ

25ರಂದು ಕೆಎಲ್‌ಇ ವಿವಿ 9ನೇ ಘಟಿಕೋತ್ಸವ

ಚಿಕ್ಕೋಡಿ : ಬೆಳಗಾವಿಯಲ್ಲಿರುವ ಕೆಎಲ್‌ಇ ವಿಶ್ವ ವಿದ್ಯಾಲಯದ 9ನೇ ಘಟಿಕೋತ್ಸವ ಏ.25ರಂದು ...

Vijaya Karnataka 23 Apr 2019, 5:00 am
ಚಿಕ್ಕೋಡಿ : ಬೆಳಗಾವಿಯಲ್ಲಿರುವ ಕೆಎಲ್‌ಇ ವಿಶ್ವ ವಿದ್ಯಾಲಯದ 9ನೇ ಘಟಿಕೋತ್ಸವ ಏ.25ರಂದು ವಿಶ್ವವಿದ್ಯಾಲಯದ ಆವರಣದಲ್ಲಿ ಜರುಗಲಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಹೇಳಿದರು.
Vijaya Karnataka Web BEL-22CKD1


ಪಟ್ಟಣದ ಕೆಎಲ್‌ಇ ಆಸ್ಪತ್ರೆಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಾಜ್ಯಪಾಲ ವಜುಭಾಯಿ ವಾಲಾ ಆಗಮಿಸಲಿದ್ದಾರೆ. ಘಟಿಕೋತ್ಸದಂದು 26 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 10 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ, 10 ವಿದ್ಯಾರ್ಥಿಗಳಿಗೆ ಸೂಪರ್‌ ಮಾಸ್ಟರ್‌ ಪದವಿ ಪತ್ರ ಸೇರಿದಂತೆ ಒಟ್ಟು 900 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದರು.

ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌: ಕಾಲೇಜುಗಳಿಗೆ ದೊರೆಯುತ್ತಿದ್ದ ಸೀಟು ರದ್ದಾಗಿದೆ. ಸಂಸ್ಥೆಗೆ ದೊರೆಯುತ್ತಿದ್ದ ಸೀಟಿನಲ್ಲಿ ಬಡವರಿಗೂ ಆದ್ಯತೆ ನೀಡಲಾಗುತ್ತಿತ್ತು. ಆದರೆ, ಇದೀಗ ನೀತಿ ಬದಲಾಗಿದೆ. ಆದರೂ ಕೆಎಲ್‌ಇ ಸಂಸ್ಥೆಯಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಬಡವರೆಂದು ಕಂಡು ಬಂದರೆ ಅಂತಹ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯಿಂದ ಸ್ಕಾಲರ್‌ಶಿಪ್‌ ಹಾಗೂ ಪ್ರವೇಶ ಫೀಯಲ್ಲಿ ವಿನಾಯಿತಿ ನೀಡಲಾಗುತ್ತದೆ ಎಂದರು.

ವಿಧಾನ ಪರಿಷತ್‌ ಪ್ರತಿಪಕ್ಷ ದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ಜಗದೀಶ ಕವಟಗಿಮಠ ಉಪಸ್ಥಿತರಿದ್ದರು.

ಹೋಟೆಲ್‌ ಮ್ಯಾನೇಜ್‌ಮೆಂಟ್‌ ಕೋರ್ಸ್‌ :
ಕೆಎಲ್‌ಇ ಸಂಸ್ಥೆ ಹೊಸ ಚಿಂತನೆಗಳೊಂದಿಗೆ ಈ ಭಾಗದ ಶಿಕ್ಷ ಣ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದು, ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ಕೆಎಲ್‌ಇ ಸಂಸ್ಥೆ ಹೋಟೆಲ್‌ ಮ್ಯಾನೇಜ್‌ಮೆಂಟ್‌ ಕೋರ್ಸ್‌ ಆರಂಭಿಸಿತ್ತು. ಇದೀಗ ಉತ್ತರ ಕರ್ನಾಟಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಪ್ರಸಕ್ತ ವರ್ಷದಿಂದಲೇ ಬೆಳಗಾವಿಯಲ್ಲಿ ಹೋಟೆಲ್‌ ಮ್ಯಾನೇಜ್‌ಮೆಂಟ್‌ ಸ್ಕೂಲ್‌ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಡಾ.ಪ್ರಭಾಕರ ಕೋರೆ ಹೇಳಿದರು. ಹೋಟೆಲ್‌ ಮ್ಯಾನೇಜ್‌ಮೆಂಟ್‌ ತರಬೇತಿ ಪಡೆಯಲು ಈ ಭಾಗದ ವಿದ್ಯಾರ್ಥಿಗಳು ಬೆಂಗಳೂರಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಬೆಳಗಾವಿಯಲ್ಲಿ ಹೋಟೆಲ್‌ ಉದ್ದಿಮೆ ಬರಲಾರಂಭಿಸಿದ್ದು, ಇದಕ್ಕೆ ಪೂರಕವಾಗುವಂತೆ ಹೋಟೆಲ್‌ ಮ್ಯಾನೇಜ್‌ಮೆಂಟ್‌ ಕೋರ್ಸ್‌ಗಳನ್ನು ಉತ್ತರ ಕರ್ನಾಟಕದಲ್ಲಿಯೇ ಪ್ರಥಮವಾಗಿ ಕೆಎಲ್‌ಇ ಸಂಸ್ಥೆ ಆರಂಭಿಸುತ್ತಿದೆ ಎಂದು ಡಾ. ಕೋರೆ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ