ಆ್ಯಪ್ನಗರ

ಸರಕಾರದ ಉಳಿವಿಗಾಗಿ ಸವದತ್ತಿಯಲ್ಲಿ ಕೋನರೆಡ್ಡಿ ಪೂಜೆ

ಉಗರಗೋಳ (ಬೆಳಗಾವಿ): ಮೈತ್ರಿ ಸರಕಾರದ ಉಳಿವಿಗಾಗಿ ಮುಖ್ಯಮಂತ್ರಿಗಳ ...

Vijaya Karnataka 14 Jul 2019, 5:00 am
ಉಗರಗೋಳ (ಬೆಳಗಾವಿ) : ಮೈತ್ರಿ ಸರಕಾರದ ಉಳಿವಿಗಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್‌.ಎಚ್‌. ಕೋನರೆಡ್ಡಿ ಶನಿವಾರ ಸಂಜೆ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಿಗೆ ಪೂಜೆ ಸಲ್ಲಿಸಿದ್ದಾರೆ.
Vijaya Karnataka Web BEL-13UGL1


ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಸರಕಾರದ ಉಳಿವಿಗಾಗಿ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲೂ ಪೂಜೆ ಸಲ್ಲಿಸಲಾಗಿದ್ದು, ಸಿಎಂ ಕುಮಾರಸ್ವಾಮಿ ಅವರ ರಾಜಕೀಯ ಬದುಕಿಗೆ ಒಳ್ಳೆಯದಾಗಲಿ ಎಂದೂ ಪ್ರಾರ್ಥಿಸಿದ್ದೇನೆ'', ಎಂದರು.

ಪ್ರೇಮಾ ಕೋನರಡ್ಡಿ, ಮಲ್ಲಯ್ಯ ಹಿರೇಮಠ, ಅಲ್ಲಮಪ್ರಭು ಪ್ರಭುನವರ, ಪಂಡಿತ ಯಡೂರಯ್ಯ, ಗಣಪತಿಗೌಡ ಚನ್ನಪ್ಪಗೌಡ್ರ, ಜಗದನಗೌಡ ಪೊಲೇಶಿ, ದೇವಸ್ಥಾನದ ಸಿಬ್ಬಂದಿ ಉಪಸ್ಥಿತರಿದ್ದರು. ದೇವಸ್ಥಾನದ ವತಿಯಿಂದ ಕೋನರೆಡ್ಡಿ ದಂಪತಿಯನ್ನು ಶಾಲು ಹೊದಿಸಿ ಸತ್ಕರಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ