ಆ್ಯಪ್ನಗರ

ಬ್ಲ್ಯಾಕ್‌ಮೇಲ್‌ ಮಾಡುವವರಿಗೆ ಹೆದರಿ ಬಿಜೆಪಿ ಸರ್ಕಾರ ನಡೆಸುತ್ತಿದೆ; ಜಾರಕಿಹೊಳಿಗೆ ಡಿಕೆಶಿ ಟಾಂಗ್‌

ಬೆಳಗಾವಿಯಲ್ಲಿ ಮತದಾರರನ್ನು ಹೆದರಿಸುವ ಪ್ರಯತ್ನ ನಡೆಸುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ. ನಾವು ಕಂಪ್ಲೆಂಟ್‌ ಕೊಡುತ್ತೇವೆ. ಗೋಕಾಕ, ರಾಯಬಾಗದಲ್ಲಿ ಮತದಾನ ಚೀಟಿ ಇಟ್ಟುಕೊಂಡು ಹೆದರಿಸುತ್ತಿದ್ದಾರೆ ಎಂದು ಕೇಳಿ ಬಂದಿದೆ. ಅಲ್ಲದೆ ಈ ಹಿಂದೆಯೂ ನಡೆದುಕೊಂಡು ಬಂದಿದೆ. ಈ ಕುರಿತು ಜಿಲ್ಲಾ ಚುನಾವಣಾ ಅಧಿಕಾರಿಗಳು ಆಯಾ ಮತಗಟ್ಟೆಯಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕೆಂದು ಡಿಕೆಶಿ ಒತ್ತಾಯಿಸಿದರು.

guest Basavaraj-Meeshi | Lipi 29 Nov 2021, 2:18 pm
ಬೆಳಗಾವಿ: ಬಿಜೆಪಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿರುವವರನ್ನು ಇಟ್ಟುಕೊಂಡು ಸರಕಾರ ನಡೆಸುತ್ತಿದೆಯಲ್ಲ. ನನಗೆ ಬಹಳ ಸಂತೋಷವಾಗುತ್ತಿದೆ ಎಂದು ಪರೋಕ್ಷವಾಗಿ ಮಾಜಿ ಸಚಿವ ರಮೇಶ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ತಮ್ಮದೆಯಾದ ಶೈಲಿಯಲ್ಲಿ ಚಾಟಿ ಬಿಸಿದರು.
Vijaya Karnataka Web DK-Shivakumar-bccl


ಸೋಮವಾರ ‌ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರಮೇಶ ಜಾರಕಿಹೊಳಿ, ಮೊದಲನೇ ಪ್ರಾಶಸ್ತ್ಯ ಮತ ಬಿಜೆಪಿಗೆ, ಎರಡನೇ ಪ್ರಾಶಸ್ತ್ಯ ಮತ ಕಾಂಗ್ರೆಸ್‌ ಸೋಲಿಸಲು ಎಂದು ಹೇಳಿಕೆ ನೀಡಿರುವುದಕ್ಕೆ ಉತ್ತರಿಸಿದ ಅವರು, ಬಿಜೆಪಿ ಶಿಸ್ತಿನ ಪಕ್ಷ ಅವರಿಗೆ ಸ್ವಾಭಿಮಾನ ಇದ್ದರೆ, ಅವರಿಗೆ ಶಿಸ್ತು ಇದ್ದರೆ ಇದಕ್ಕೆ‌ ಅವರು ಉತ್ತರ ಕೊಡಬೇಕು. ಅವರಿಗೆ ಶಿಸ್ತಿಲ್ಲ. ಬ್ಲಾಕ್ ಮಾಡುವವರಿಗೆ ಹೊಂದಾಣಿಕೆ ಮಾಡಿಕೊಂಡು ಹೋಗುತ್ತೇವೆ ಎಂದರೆ ಜನರು ಅವರನ್ನು ನೋಡುತ್ತಿರುತ್ತಾರೆ. ನನಗಂತೂ ಬಹಳ ಸಂತೋಷ ಬಿಜೆಪಿ ಬ್ಲ್ಯಾಕ್ ಮೇಲ್ ಮಾಡುವವರಿಗೆ ಹೆದರಿ ಸರಕಾರ ನಡೆಸುತ್ತಿದೆಯಲ್ಲ. ಇದು ನಮ್ಮ ಪಾರ್ಟಿಯಲ್ಲಿ ಏನಾದರೂ ಈ ರೀತಿಯಾಗಿದ್ದರೇ, ಒಂದು ಗಂಟೆನೂ ಇಟ್ಕೊತ್ತಿರಲಿಲ್ಲ ಎಂದು ಹೇಳಿದರು.
ಬಿಜೆಪಿಗೆ ಯಾವುದೇ ಕಾರಣಕ್ಕೂ ರಮೇಶ್ ಜಾರಕಿಹೊಳಿ ಮೋಸ ಮಾಡುವುದಿಲ್ಲ: ಸಚಿವ ಈಶ್ವರಪ್ಪ ಭರವಸೆ
ಮಹಿಳಾ ಶಾಸಕಿ ಹೆಬ್ಬಾಳ್ಕರ್‌ಗೆ ರಮೇಶ ಜಾರಕಿಹೊಳಿ ಥೂ.. ಥೂ.. ಎಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಬಿಜೆಪಿ ಸಂಸ್ಕೃತಿಯ ಪ್ರತಿಬಿಂಬ. ಬಿಜೆಪಿಯಲ್ಲಿ ಅರ್ಧದಷ್ಟು ಮಹಿಳೆಯರೇ ಇದ್ದಾರೆ. ಬಿಜೆಪಿ ಸಂಸ್ಕಾರ ಇರುವ ಪಕ್ಷ ಎಂದು ಹೇಳುತ್ತಾರೆ. ಇದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹಾಗೂ ಬಿಜೆಪಿ ಅಧ್ಯಕ್ಷ ನಳೀನಕುಮಾರ್ ಕಟೀಲ್ ಉತ್ತರ ಕೊಡಬೇಕೆಂದು ಒತ್ತಾಯಿಸಿದರು. ಬೆಳಗಾವಿಯಲ್ಲಿ ಮತದಾರರನ್ನು ಹೆದರಿಸುವ ಪ್ರಯತ್ನ ನಡೆಸುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ. ನಾವು ಕಂಪ್ಲೆಂಟ್‌ ಕೊಡುತ್ತೇವೆ. ಗೋಕಾಕ, ರಾಯಬಾಗದಲ್ಲಿ ಮತದಾನ ಚೀಟಿ ಇಟ್ಟುಕೊಂಡು ಹೆದರಿಸುತ್ತಿದ್ದಾರೆ ಎಂದು ಕೇಳಿ ಬಂದಿದೆ. ಅಲ್ಲದೆ ಈ ಹಿಂದೆಯೂ ನಡೆದುಕೊಂಡು ಬಂದಿದೆ. ಈ ಕುರಿತು ಜಿಲ್ಲಾ ಚುನಾವಣಾ ಅಧಿಕಾರಿಗಳು ಆಯಾ ಮತಗಟ್ಟೆಯಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕೆಂದು ಒತ್ತಾಯಿಸಿದರು.

ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಇದೆ. ಮಳೆಯ ಹವಾಮಾನವೂ ಉತ್ತಮವಾಗಿದೆ. ಕಾಂಗ್ರೆಸ್ ಪರ ಉತ್ತಮ ಫಸಲು ಸಿಗುವ ಸಾಧ್ಯತೆ ಇದ್ದು, ರಾಜ್ಯದ ಜನರು ಬದಲಾವಣೆ ಬಯಸಿದ್ದಾರೆ. ಕಳೆದ ಬಾರಿಯ ಚುನಾವಣೆಗಿಂತ ಹೆಚ್ಚಿನ ಸ್ಥಾನ ಗೆಲವು ಸಾಧಿಸುವ ವಿಶ್ವಾಸ ಇದೆ ಎಂದರು. ರಾಜ್ಯದಲ್ಲಿ ಡಬಲ್ ಇಂಜಿನ್ ಸರಕಾರದಿಂದ ಏನೂ ಉಪಯೋಗ ಆಗಿಲ್ಲ ಆದ್ದರಿಂದ ಮತದಾರರು ಯೋಗ್ಯ ಅಭ್ಯರ್ಥಿ ಕಾಂಗ್ರೆಸ್‌ಗೆ ಮತ ನೀಡುತ್ತಾರೆ ಎನ್ನುವ ವಿಶ್ವಾಸ ಇದೆ ಎಂದರು. ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಆರೋಪ‌ ಮಾಡುತ್ತಿರುವ ಬಿಜೆಪಿಗೆ ಪ್ರತ್ಯುತ್ತರ ನೀಡಿದ ಡಿ.ಕೆ.ಶಿವಕುಮಾರ್, ಯಡಿಯೂರಪ್ಪನವರು ಜೆಡಿಎಸ್ ಬೆಂಬಲ ಕೇಳಿದ್ದಾರೆ‌. ಸಿಎಂ ಬಸವರಾಜ ಬೊಮ್ಮಾಯಿ‌ ಕೇಳುತ್ತಿದ್ದಾರೆ ಎನ್ನುವ ಸುದ್ದಿ ಇದೆ. ಜೆಡಿಎಸ್ ನವರು ಏನಾದರೂ ಮಾಡಿಕೊಳ್ಳಲಿ. ಅರುಣ್ ಸಿಂಗ್ ಹೇಳಿಕೆ ನೀಡಿದ ಮೇಲೂ ಯಡಿಯೂರಪ್ಪನವರು ಜೆಡಿಎಸ್ ಬೆಂಬಲ ಕೇಳುತ್ತಿದ್ದಾರೆ. ಹಾಗಾದರೆ ಯಾವುದು ಮುಳುಗುವ ಹಡುಗು ಅವರು ಬಲಿಷ್ಠವಾಗಿದ್ದರೆ ಯಾಕೆ ಬೆಂಬಲ ಕೊಡಬೇಕು ಎಂದು ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ