ಆ್ಯಪ್ನಗರ

ವಿದ್ಯಾರ್ಥಿಗಳ ಮೇಲೆ ಬಸ್ ಹರಿಸಲು ಮುಂದಾಗಿದ್ದ ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೇಕವಾಡ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ನಿಲ್ಲಿಸುವಂತೆ ಕೈ ತೋರಿದರೂ, ಉದ್ಧಟನ ಪ್ರದರ್ಶಿಸಿದ ಚಾಲಕ ವಿದ್ಯಾರ್ಥಿಗಳ ಮೇಲೆ ಬಸ್ ಹರಿಸಲು ಯತ್ನಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Vijaya Karnataka Web 25 Sep 2019, 2:49 pm
ಖಾನಾಪುರ (ಬೆಳಗಾವಿ): ಬೇಕವಾಡ ಗ್ರಾಮದಲ್ಲಿ ಬಸ್ ನಿಲ್ಲಿಸುವಂತೆ ಕೈ ಮಾಡಿದ ವಿದ್ಯಾರ್ಥಿಗಳ ಮೇಲೆಯೇ ಬಸ್ ಹರಿಸಲು ಮುಂದಾಗಿದ್ದ ಚಾಲಕನ್ನು ಅಮಾನತು ಮಾಡಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ.
Vijaya Karnataka Web ksrtc


ದಾಂಡೇಲಿ ಘಟಕದ ಎಎಸ್‌ಎಫ್ ಶೇಖ್ ಅಮಾನತತುಗೊಂಡ ಚಾಲಕ.

ವಿದ್ಯಾರ್ಥಿಗಳು ಮಂಗಳವಾರ ನಂದಗಡ ಮತ್ತು ಖಾನಾಪುರದ ವಿವಿಧ ಕಾಲೇಜುಗಳಿಗೆ ತೆರಳಲು ಬಸ್‌ಗಾಗಿ ಕಾಯುತ್ತ ಬಸ್ ನಿಲ್ದಾಣದಲ್ಲಿ ನಿಂತಿದ್ದರು. ಈ ವೇಳೆ ಹಳಿಯಾಳದಿಂದ ಬೆಳಗಾವಿಗ ಮಾರ್ಗವಾಗಿ ಸಾಗುತ್ತಿದ್ದ ಬಸ್‌ಗೆ ನಿಲ್ಲಿಸುವಂತೆ ಕೈ ತೋರಿಸಿದ್ದರು. ಈ ವೇಳೆ ಬಸ್‌ನ ವೇಗ ಕಡಿಮೆ ಮಾಡಿ ನಿಲ್ಲಿಸಿದಂತೆ ಮಾಡಿದ ಚಾಲಕ, ವಿದ್ಯಾರ್ಥಿಗಳು ಬಸ್ ಏರಲು ಮುಂದಾದಾಗ ಏಕಾಏಕಿ ಚಾಲನೆ ಮಾಡಿಕೊಂಡ ಹೊರಟಿದ್ದಾನೆ. ಕೆಲ ವಿದ್ಯಾರ್ಥಿಗಳು ಬಸ್ ಎದುರು ಹೋಗಿ ತಡೆಯಲು ಪ್ರಯತ್ನಿಸಿದ್ದರು. ಆದರೆ, ಚಾಲಕ ಯಾವುದಕ್ಕೂ ಕ್ಯಾರೆ ಮಾಡದೆ, ಬಸ್ ಚಾಲನೆ ಮಾಡಿಕೊಂಡು ಹೋಗಿದ್ದಾನೆ ಎನ್ನಲಾಗಿದೆ.

ವಿದ್ಯಾರ್ಥಿಗಳ ಮೇಲೆಯೇ ಬಸ್‌ ಹರಿಸಲು ಮುಂದಾದ ಕೆಎಸ್‌ಆರ್‌ಟಿಸಿ ಚಾಲಕ!

ಈ ಘಟನೆಯನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಚಿತ್ರಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದರು. ಚಾಲಕನ ಉದ್ದಟತನ ಕ್ರಮಕ್ಕೆ ವಿದ್ಯಾರ್ಥಿಗಳ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ, ವಿದ್ಯಾರ್ಥಿಗಳ ಜೀವದ ಜತೆ ಚೆಲ್ಲಾಟ ಆಡುವ ಚಾಲಕನ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದರು.

ವಿದ್ಯಾರ್ಥಿಗಳ ಮೇಲೆ ಬಸ್ ಹರಿಸಲು ಯತ್ನಿಸಿದ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ವಾಯುವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ತಹಸೀಲ್ದಾರ್ ಶಿವಾನಂದ ಉಳ್ಳೇಗಡ್ಡಿ ಸೂಚಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ