ಖಾನಾಪುರ: ತಾಲೂಕಿನ ಬೇಕವಾಡ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ನಿಲ್ಲಿಸುವಂತೆ ಕೈ ತೋರಿದರೂ ಉದ್ಧಟತನ ತೋರಿದ ಚಾಲಕ ವಿದ್ಯಾರ್ಥಿಗಳ ಮೇಲೆ ಬಸ್ ಹರಿಸಲು ಯತ್ನಿಸಿದ್ದಾನೆ. ಚಾಲಕನ ಈ ಕ್ರಮಕ್ಕೆ ಪಾಲಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳು ಎಂದಿನಂತೆ ಮಂಗಳವಾರ ನಂದಗಡ ಮತ್ತು ಖಾನಾಪುರದ ವಿವಿಧ ಕಾಲೇಜುಗಳಿಗೆ ತೆರಳಲು ಬಸ್ಗಾಗಿ ಕಾಯುತ್ತ ತಮ್ಮೂರಿನ ಬಸ್ ನಿಲ್ದಾಣದಲ್ಲಿನಿಂತಿದ್ದರು. ಈ ವೇಳೆ ಬಂದ ಹಳಿಯಾಳದಿಂದ ಬೆಳಗಾವಿಗೆ ತೆರಳುತ್ತಿದ್ದ ಬಸ್ಗೆ ಕೈ ತೋರಿಸಿದ್ದರು. ಆವಾಗ ಚಾಲಕ ಬಸ್ ಚಾಲನೆಯ ವೇಗ ಕಡಿಮೆ ಮಾಡಿ ನಿಲ್ಲಿಸಿದಂತೆ ಮಾಡಿದ. ವಿದ್ಯಾರ್ಥಿಗಳು ಬಸ್ ಏರಲು ಮುಂದಾದಾಗ ಏಕಾಏಕಿ ಬಸ್ ಚಾಲನೆ ಮಾಡಿಕೊಂಡು ಹೊರಟಿದ್ದಾರೆ. ಈ ವೇಳೆ ಕೆಲ ವಿದ್ಯಾರ್ಥಿಗಳು ಬಸ್ ಎದುರು ಹೋಗಿ ತಡೆಯಲು ಪ್ರಯತ್ನಿಸಿದರೂ ಚಾಲಕ ಬಸ್ ಚಾಲನೆ ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಇದನ್ನೆಲ್ಲಸ್ಥಳೀಯರೊಬ್ಬರು ಚಿತ್ರೀಕರಣ ಮಾಡಿದ್ದು ಸಾಮಾಜಿಕ ತಾಲತಾಣಗಳಲ್ಲಿಹರಿಬಿಟ್ಟಿದ್ದಾರೆ.
ಈ ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ತಹಸೀಲ್ದಾರ್ ಶಿವಾನಂದ ಉಳ್ಳೇಗಡ್ಡಿ, ವಿದ್ಯಾರ್ಥಿಗಳ ಮೇಲೆ ಬಸ್ ಹರಿಸಲು ಯತ್ನಿಸಿದ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ವಾಯವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ತಿಳಿಸಿದ್ದಾರೆ.
ಈ ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ತಹಸೀಲ್ದಾರ್ ಶಿವಾನಂದ ಉಳ್ಳೇಗಡ್ಡಿ, ವಿದ್ಯಾರ್ಥಿಗಳ ಮೇಲೆ ಬಸ್ ಹರಿಸಲು ಯತ್ನಿಸಿದ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ವಾಯವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ತಿಳಿಸಿದ್ದಾರೆ.