ಆ್ಯಪ್ನಗರ

ನಾನಾ ಬೇಡಿಕೆ ಈಡೇರಿಸುವಂತೆ ಕೆಎಸ್‌ಆರ್‌ಟಿಸಿ ನೌಕರರ ಪ್ರತಿಭಟನೆ

ಬೆಳಗಾವಿ: ಸಾರಿಗೆ ಸಂಸ್ಥೆಯ ನೌಕರರಿಗೆ ಪಿಂಚಣಿ ಮಂಜೂರು ...

Vijaya Karnataka 11 Feb 2020, 5:00 am
ಬೆಳಗಾವಿ: ಸಾರಿಗೆ ಸಂಸ್ಥೆಯ ನೌಕರರಿಗೆ ಪಿಂಚಣಿ ಮಂಜೂರು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸೋಮವಾರ ಸಾರಿಗೆ ಸಂಸ್ಥೆ ನೌಕರರು ಮತ್ತು ನಿವೃತ್ತಿ ನೌಕರರ ಕ್ಷೇಮಾಭಿವೃದ್ಧಿ ಮಹಾ ಮಂಡಳದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪಗೆ ಮನವಿ ರವಾನಿಸಿದರು.
Vijaya Karnataka Web 10LBS3_53
ಸಾರಿಗೆ ಸಂಸ್ಥೆಯ ನೌಕರರಿಗೆ ಪಿಂಚಣಿ ಮಂಜೂರು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರ ಮತ್ತು ನಿವೃತ್ತಿ ನೌಕರರ ಕ್ಷೇಮಾಭಿವೃದ್ಧಿ ಮಹಾಮಂಡಳದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.


ಉತ್ತಮ ಸೇವೆಗೆ ಹೆಸರಾಗಿರುವ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ನಿವೃತ್ತಿ ನಂತರ ಸರಕಾರ ಯಾವುದೇ ಪಿಂಚಣಿ ನೀಡುತ್ತಿಲ್ಲ. ಸಿಬ್ಬಂದಿಯ ಸ್ವಂತ ವಂತಿಕೆಯಲ್ಲಿಭವಿಷ್ಯ ನಿಧಿ ಸಂಘಟನೆಯವರು ನೀಡುತ್ತಿರುವ ಕನಿಷ್ಠ ಪಿಂಚಣಿಯಿಂದ ಬದುಕು ಸಾಗಿಸಲು ಕಷ್ಟವಾಗುತ್ತಿದೆ. ಕಲಬುರ್ಗಿಯಲ್ಲಿಜರುಗಿದ ಸಾರಿಗೆ ಸಂಸ್ಥೆಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ದಿ ಸಂಘ ಮಹಾಸಭೆಯಲ್ಲಿಭಾಗವಹಿಸಿದ್ದ ಯಡಿಯೂರಪ್ಪನವರು ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ 10 ಸಾವಿರ ರೂ. ಪಿಂಚಣಿ, ಆರೋಗ್ಯ ವಿಮೆ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಯಡಿಯೂರಪ್ಪ ಅವರು ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಸಾರಿಗೆ ಸಂಸ್ಥೆಯ ನಿವೃತ್ತ ಸಿಬ್ಬಂದಿಯ ಕುಟುಂಬದವರಿಗೆ ಉಚಿತ ಬಸ್‌ಪಾಸ್‌ ನೀಡಬೇಕು. ಅಧಿಕಾರಿಗಳ ಕಿರಕುಳಕ್ಕೆ ರಾಜೀನಾಮೆ ನೀಡಿದ ನೌಕರರಿಗೂ ಉಚಿತ ಬಸ್‌ಪಾಸ್‌ ಸೌಲಭ್ಯ ಒದಗಿಸಬೇಕು ಎಂದು ಮನವಿ ಮೂಲಕ ಆಗ್ರಹಿಸಿದರು.

ಮಂಡಳಿಯ ಅಧ್ಯಕ್ಷ ಆರ್‌.ಪಿ. ಕೊಪರ್ಡೆ, ಉಪಾಧ್ಯಕ್ಷ ಎಸ್‌.ಎಸ್‌. ಮಹಾಜನ, ಎನ್‌.ಎಂ. ಕೊಟ್ಟುರಮಠ, ವೈ.ಎಸ್‌. ರಾಮಭದ್ರಯ್ಯ, ಸಿ.ಎಸ್‌. ಪುರದ, ಎಸ್‌.ಎನ್‌. ನಿಂಗನಗೌಡರ, ಆರ್‌.ಎಸ್‌. ಸಾಸನೂರ, ಪಿ.ಆರ್‌. ಕಾಂಬಳೆ, ಎಂ.ವೈ. ಮಗದಾಳ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ