ಆ್ಯಪ್ನಗರ

ಮಕ್ಕಳ ರಕ್ಷ ಣಾ ಘಟಕಗಳಿಗೆ ಸೌಲಭ್ಯ ಕೊರತೆ

ಬೆಳಗಾವಿ : ಮಕ್ಕಳು ದೇಶದ ಆಸ್ತಿಯಾಗಿದ್ದು, ಮಕ್ಕಳ ರಕ್ಷ ಣೆ ಇಲಾಖೆ ಕರ್ತವ್ಯವಾಗಿದೆ...

Vijaya Karnataka 21 Nov 2018, 5:00 am
ಬೆಳಗಾವಿ : ಮಕ್ಕಳು ದೇಶದ ಆಸ್ತಿಯಾಗಿದ್ದು, ಮಕ್ಕಳ ರಕ್ಷ ಣೆ ಇಲಾಖೆ ಕರ್ತವ್ಯವಾಗಿದೆ. ಆದರೆ, ಸ್ಥಳೀಯ ಮಕ್ಕಳ ರಕ್ಷ ಣಾ ಘಟಕಗಳಿಗೆ ಸರಿಯಾದ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ರಾಜ್ಯ ಮಕ್ಕಳ ರಕ್ಷ ಣಾ ಆಯೋಗದ ಅಧ್ಯಕ್ಷ ವೈ.ಮರಿಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
Vijaya Karnataka Web lack of facilities for child protection units
ಮಕ್ಕಳ ರಕ್ಷ ಣಾ ಘಟಕಗಳಿಗೆ ಸೌಲಭ್ಯ ಕೊರತೆ


ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷ ಣಾ ಆಯೋಗ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಇಲಾಖೆ, ಜಿಲ್ಲಾ ಮಕ್ಕಳ ರಕ್ಷ ಣಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಮಕ್ಕಳ ರಕ್ಷ ಣಾ ವ್ಯವಸ್ಥೆ ಬಲವರ್ಧನೆ ಕುರಿತ ಕಾರ್ಯಾಗಾರ ಹಾಗೂ ಸಮಾಲೋಚನೆ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳ ರಕ್ಷ ಣೆಗೋಸ್ಕರ ಗ್ರಾಮಗಳಲ್ಲಿ ಶಿಕ್ಷ ಕರು ಗ್ರಾಮಸಭೆ ನಡೆಸುತ್ತಿದ್ದಾರೆ. ಸಭೆಗಳಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.

ಜಿಪಂ ಸಿಇಒ ಆರ್‌.ರಾಮಚಂದ್ರನ್‌ ಮಾತನಾಡಿ, ಮಕ್ಕಳ ರಕ್ಷ ಣೆಯ ಬಗ್ಗೆ ಪರಿಣಾಮಕಾರಿಯಾಗಿ ಕೆಲಸ ಮಾಡುವ ಅನಿವಾರ್ಯತೆ ಇದೆ. ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಮಕ್ಕಳ ರಕ್ಷ ಣಾಧಿಕಾರಿ ಜೆ.ಟಿ. ಲೋಕೇಶ, ಸದಸ್ಯ ಆನಂದ ಎಲ್‌., ಅರುಣ ನೀರಗಟ್ಟಿ, ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ