ಆ್ಯಪ್ನಗರ

ಚಪ್ಪರಕ್ಕೆ ಅಗ್ನಿಸ್ಪರ್ಶ ಮಾಡಿ ಲಕ್ಷ್ಮೇದೇವಿ ಜಾತ್ರೆ ಸಂಪನ್ನ

ಬಾವನ ಸೌಂದತ್ತಿ: ಸಮೀಪದ ಅಂಕಲಿ ಗ್ರಾಮದಲ್ಲಿ ಮೂರು ದಿನಗಳ ಕಾಲ ಲಕ್ಷ್ಮೀದೇವಿ ಜಾತ್ರೆ ವಿಜೃಂಭಣೆಯಿಂದ ನಡೆಯಿತು...

Vijaya Karnataka 13 May 2019, 5:00 am
ಬಾವನ ಸೌಂದತ್ತಿ : ಸಮೀಪದ ಅಂಕಲಿ ಗ್ರಾಮದಲ್ಲಿ ಮೂರು ದಿನಗಳ ಕಾಲ ಲಕ್ಷ್ಮೀದೇವಿ ಜಾತ್ರೆ ವಿಜೃಂಭಣೆಯಿಂದ ನಡೆಯಿತು.
Vijaya Karnataka Web BEL-12BSDT1


ಹಲವಾರು ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ದೇವಿಗೆ ಬಾಣ ಹಾಗೂ ಮಹಾನೈವೇದ್ಯ ನೆರವೇರಿತು. ಗ್ರಾಮದ ಪ್ರಮುಖ ಬೀದಿಯಲ್ಲಿ ದೇವಿಯ ಉತ್ಸವ ಮೆರವಣಿಗೆ ಹಾಗೂ ರಥೋತ್ಸವ ಜರುಗಿತು. ಚಪ್ಪರಕ್ಕೆ ಅಗ್ನಿ ಸ್ಪರ್ಶದೊಂದಿಗೆ ಜಾತ್ರೆ ಮುಕ್ತಾಯಗೊಂಡಿತು. ಚಪ್ಪರದ ಅಗ್ನಿ ಸ್ಪರ್ಶ ನೋಡಲು ಗ್ರಾಮಸ್ಥರು ಹಾಗೂ ಸುತ್ತಲಿನ ಗ್ರಾಮಸ್ಥರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಜಾತ್ರೆಯ ನಿಮಿತ್ತ ಕಮಿಟಿ ವತಿಯಿಂದ ಭಕ್ತಿ-ಸಂಗೀತ ಕಾರ್ಯಕ್ರಮ, ನಾಟಕ ಹಾಗೂ ಇನ್ನಿತರ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

ಜಾತ್ರೆ ಸಾಂಗವಾಗಿ ನಡೆಯಲು ಸಹಕರಿಸಿದ ಗ್ರಾಮದ ಶಿಥೋಳಿಕರ ಸಹಕಾರ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಡಿಕೆಎಸ್‌ ಅಧ್ಯಕ್ಷ ಅಮಿತ್‌ ಕೋರೆ, ಸುರೇಶ ಪಾಟೀಲ, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರಿಗೆ ಜಾತ್ರಾ ಕಮಿಟಿ ಕಾರ್ಯದರ್ಶಿ ತುಕಾರಾಮ್‌ ಪಾಟೀಲ ಅಭಿನಂದಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ