ಆ್ಯಪ್ನಗರ

ಲಾಕ್‌ಡೌನ್‌ ಸಡಿಲಿಸಿದರೂ ಕಟ್ಟುನಿಟ್ಟಿನ ನಿಯಮ ಪಾಲನೆಯಾಗಲಿ

ನಿಪ್ಪಾಣಿ: ಬೆಳಗಾವಿ ಜಿಲ್ಲೆಆರೆಂಜ್‌ ಝೋನ್‌ ಎಂದು ಘೋಷಿಸಿ ...

Vijaya Karnataka 4 May 2020, 5:00 am
ನಿಪ್ಪಾಣಿ: ಬೆಳಗಾವಿ ಜಿಲ್ಲೆಆರೆಂಜ್‌ ಝೋನ್‌ ಎಂದು ಘೋಷಿಸಿ ಲಾಕ್‌ಡೌನ್‌ ಸಡಿಲಿಕೆ ಮಾಡಿದ್ದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್‌ ಧರಿಸುವುದು ಇತ್ಯಾದಿ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಹೇಳಿದರು.
Vijaya Karnataka Web 3 NPN 1 P _53
ನಿಪ್ಪಾಣಿ ತಾಲ್ಲೂಕು ಆಡಳಿತದ ಅಧಿಕಾರಿಗಳೊಂದಿಗೆ ಸಚಿವೆ ಶಶಿಕಲಾ ಜೊಲ್ಲೆಮತ್ತು ಸಂಸದ ಅಣ್ಣಾಸಾಹೇಬ ಜೊಲ್ಲೆಭಾನುವಾರ ಸಭೆ ನಡೆಸಿದರು.


ಲಾಕ್‌ಡೌನ್‌ ನಿಯಮಗಳ ಸಡಿಲಿಕೆ ನಿಟ್ಟಿನಲ್ಲಿಸಾರ್ವಜನಿಕರಿಗೆ ಮಾರ್ಗದರ್ಶನ ಕುರಿತು ತಾಲೂಕು ಆಡಳಿತದ ಅಧಿಕಾರಿಗಳೊಂದಿಗೆ ಸ್ಥಳೀಯ ನಗರಸಭೆಯ ಸಭಾಂಗಣದಲ್ಲಿಭಾನುವಾರ ಆಯೋಜಿಸಿದ್ದ ಸಭೆಯಲ್ಲಿಅವರು ಮಾತನಾಡಿದರು. ಮೇ 30ರವರೆಗೆ ಅಂಗನವಾಡಿ ಕೇಂದ್ರಗಳನ್ನು ಆರಂಭಿಸುವುದಿಲ್ಲ. ಅಲ್ಲಿಯವರೆಗೆ ಆಹಾರ-ಧಾನ್ಯಗಳನ್ನು ಮನೆಮನೆಗೆ ಹೋಗಿ ಅಂಗನವಾಡಿ ಕಾರ್ಯಕರ್ತೆಯರು ವಿತರಿಸುವ ಕಾರ್ಯ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.

ಸಂಸದ ಅಣ್ಣಾಸಾಹೇಬ ಜೊಲ್ಲೆಮಾತನಾಡಿ, ಸೇವಾ ಸಿಂಧು ಆ್ಯಪ್‌ ಡೌನ್‌ಲೋಡ್‌ ಮಾಡಲು ಸಲಹೆ ನೀಡಿದರು. ತಹಸೀಲ್ದಾರ್‌ ಪ್ರಕಾಶ ಗಾಯಕವಾಡ ಮಾತನಾಡಿದರು.

ತಾಪಂ ಇಒ ಮಲ್ಲಿಕಾರ್ಜುನ ಉಳ್ಳಾಗಡ್ಡಿ, ತಾಲೂಕು ವೈದ್ಯಾಧಿಕಾರಿ ಡಾ. ವಿ.ವಿ. ಶಿಂಧೆ, ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸೀಮಾ ಗುಂಜಾಳ, ಸಿಪಿಐ ಸಂತೋಷ ಸತ್ಯನಾಯಿಕ, ಪಿಎಸ್‌ಐ ಕುಮಾರ ಹಾಡಕರ, ಪಿಎಸ್‌ಐ ಬಿ.ಜಿ. ಸುಬ್ಬಾಪುರಮಠ, ಸಿಡಿಪಿಒ ಸುಮಿತ್ರಾ ಡಿ.ಬಿ., ಮತ್ತಿತರರು ಉಪಸ್ಥಿತರಿದ್ದರು. ಪೌರಾಯುಕ್ತ ಮಹಾವೀರ ಬೋರಣ್ಣವರ ಸ್ವಾಗತಿಸಿ, ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ