ಆ್ಯಪ್ನಗರ

ಸಹನೆಯಿಂದ ಸಾರ್ವಜನಿಕರ ಸಮಸ್ಯೆ ಆಲಿಸಿ, ಪರಿಹರಿಸಿ

ಸವದತ್ತಿ: ತಾಲೂಕು ಮಟ್ಟದ ಎಲ್ಲಇಲಾಖೆಯ ...

Vijaya Karnataka 28 Sep 2019, 5:00 am
ಸವದತ್ತಿ: ತಾಲೂಕು ಮಟ್ಟದ ಎಲ್ಲಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಸಂಪೂರ್ಣವಾಗಿ ಅರಿತು ಸಹನೆಯಿಂದ ವರ್ತಿಸುವ ಜತೆಗೆ ಅವರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಪೊಲೀಸ್‌ ಅಧೀಕ್ಷಕ ಆರ್‌. ಶಿವಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.
Vijaya Karnataka Web 27SDT1_53


ಅವರು, ಸ್ಥಳೀಯ ತಾಪಂ ಸಭಾಭವನದಲ್ಲಿಲೋಕಾಯುಕ್ತ ಪೊಲೀಸ್‌ ಅಧಿಕಾರಿಗಳ ಸಮ್ಮುಖದಲ್ಲಿಸಾರ್ವಜನಿಕರ ಕುಂದು ಕೊರತೆ ಕುರಿತು ನಡೆದ ಸಭೆಯಲ್ಲಿಮಾತನಾಡಿದರು.

ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕೊಡಿಸುವುದೇ ಲೋಕಾಯುಕ್ತ ಇಲಾಖೆಯ ಉದ್ದೇಶ ಎಂದರು. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮೌಖಿಕವಾಗಿ ಹೇಳದೆ, ತಮಗೆ ಆಗಿರುವ ತೊಂದರೆಯನ್ನು ಲಿಖಿತ ರೂಪದಲ್ಲಿಕೊಟ್ಟರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ವಿಚಾರಿಸಿ ಪರಿಹಾರ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಸಾರ್ವಜನಿಕರು ನೀಡಿರುವ ದೂರಿನಲ್ಲಿಸತ್ಯಾಂಶವಿರಬೇಕು. ಇದರಲ್ಲಿಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದರೆ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.

ತಾಲೂಕಿನ ರೈತರು ಮತ್ತು ಸಾರ್ವಜನಿಕರು, ತಮ್ಮ ಸಮಸ್ಯೆಗಳ ಕುರಿತು ಅಧಿಕಾರಿಗಳಿಗೆ ಅಹವಾಲು ಸಲ್ಲಿಸಿದರು. ತಾಲೂಕಿನಲ್ಲಿನೆರೆ ಹಾಗೂ ಮಳೆಯಿಂದಾಗಿ ಮನೆಗಳು ಬಿದ್ದು ಬಡವರು ತೊಂದರೆ ಅನುಭವಿಸುತ್ತಿದ್ದಾರೆ. ಈ ಕುರಿತು ಪರಿಹಾರಕ್ಕಾಗಿ ತಹಸೀಲ್ದಾರರನ್ನು ಕೇಳಿದರೆ ಬೇಜವಾಬ್ದಾರಿಯಿಂದ ವರ್ತಿಸಿ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತಿಲ್ಲವಾದ್ದರಿಂದ ಅವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳನ್ನು ಒತ್ತಾಯಿಸಿದರು. ಭೂ-ಮಾಪನ, ಬೆಳೆ ವಿಮೆ, ವೃದ್ಧಾಪ್ಯ ವೇತನ ಸೇರಿದಂತೆ ಇನ್ನುಳಿದ ಸಮಸ್ಯೆಗಳ ಕುರಿತು ಸಾರ್ವಜನಿಕರು ಅಧಿಕಾರಿಗಳಿಗೆ ದೂರು ಸಲ್ಲಿಸಿದರು.

ಸಭೆಯಲ್ಲಿಡಿಎಸ್‌ಪಿ ಆರ್‌.ಆರ್‌. ಅಂಬಡಗಟ್ಟಿ, ಜಿಲ್ಲಾಲೋಕಾಯುಕ್ತ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂತೋಷ ಹಳ್ಳೂರ, ರಾಮದುರ್ಗ ಪೊಲೀಸ್‌ ಅಧಿಕಾರಿ ಬಿ.ಎಸ್‌. ಪಾಟೀಲ, ಸಿಪಿಐ ಮುತ್ತಣ್ಣ ಸರವ್ವಗೋಳ, ತಾಪಂ ಇಒ ಯಶವಂತಕುಮಾರ ಉಪಸ್ಥಿತರಿದ್ದರು.

ಸ್ಥಳೀಯವಾಗಿ ಕೆಲವು ಇಲಾಖೆಗಳಲ್ಲಾದ ತೊಂದರೆಗಳಿಗೆ ಸಾರ್ವಜನಿಕರು ಬೆಂಗಳೂರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿಸಭೆ ಆಯೋಜಿಸಿ ಸಾರ್ವಜನಿಕರಿಂದ ದೂರು ಅರ್ಜಿ ಪಡೆಯಲಾಗುತ್ತಿದೆ. ದೂರುಗಳ ಸತ್ಯಾಸತ್ಯತೆ ತಿಳಿದು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಗೊಳ್ಳಲಾಗುವುದು.
-ಆರ್‌. ಶಿವಕುಮಾರ್‌, ಲೋಕಾಯುಕ್ತ ಎಸ್‌ಪಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ