ಆ್ಯಪ್ನಗರ

ಆಯುಷ್ಮಾನ್‌ ಯೋಜನೆ ಕುರಿತು ಜನರಿಗೆ ತಿಳಿವಳಿಕೆ ನೀಡಿ

ಹುಕ್ಕೇರಿ: ಆರೋಗ್ಯ ಇಲಾಖೆಯಡಿ ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆಯ ಬಗ್ಗೆ ಜನರಿಗೆ ...

Vijaya Karnataka 18 Jun 2019, 5:00 am
ಹುಕ್ಕೇರಿ : ಆರೋಗ್ಯ ಇಲಾಖೆಯಡಿ ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆಯ ಬಗ್ಗೆ ಜನರಿಗೆ ಸರಿಯಾಗಿ ಮಾಹಿತಿ ತಿಳಿವಳಿಕೆ ನೀಡಿಲ್ಲ. ಇದರಿಂದ ಬಹಳಷ್ಟು ಜನ ವಂಚಿತರಾಗುತ್ತಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರಿಗೆ ತರಬೇತಿ ನೀಡಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Vijaya Karnataka Web BEL-17 HUKKERI 01 IMP


ಅವರು ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಜರುಗಿದ ನಾನಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಆಯುಷ್ಮಾನ್‌ ಯೋಜನೆಯಡಿ ಮಾರಣಾಂತಿಕ ಕಾಯಿಲೆಗಳ ಶಸ್ತ್ರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸುವ ಸಮಯದಲ್ಲಿ ಕೋಡ್‌ವರ್ಡ್‌ಗಳನ್ನು ಬಳಸುತ್ತಿದ್ದು ಇದರಿಂದ ಸಾರ್ವಜನರಿಕರು ಗೊಂದಲಕ್ಕೀಡಾಗಿದ್ದಾರೆ. ಕಾರಣ ಆಯಾ ರೋಗಕ್ಕೆ ನೇರವಾಗಿ ಚಿಕಿತ್ಸೆ ಸಿಗುವ ವ್ಯವಸ್ಥೆ ಮಾಡಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಉದಯ ಕುಡಚಿ ಅವರಿಗೆ ತಿಳಿಸಿದರು.

ಕೃಷಿ ಇಲಾಖೆಯಿಂದ ಮಳೆ, ಬೀಜಗಳ ಬಿತ್ತನೆಗಳ ಬಗ್ಗೆ ಮಾಹಿತಿ ಪಡೆದರು ರೈತರಿಗೆ ಬಿತ್ತನೆ ಬೀಜದ ಕೊರತೆಯಾಗದಂತೆ ನೋಡಿಕೊಂಡು ಬೆಳೆಗಳ ರೋಗಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕೆಂದು ಕೃಷಿ ಅಧಿಕಾರಿ ಎಂ.ಎಸ್‌. ಪಟಗುಂದಿ ಅವರಿಗೆ ಸೂಚಿಸಿದರು.

ತಾಲೂಕಿನಲ್ಲಿ ಬಹುಗ್ರಾಮ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಘಟಕಗಳಲ್ಲಿ ನೀರು ಸಿಗುವ ಹಾಗೆ ಶುದ್ಧೀಕರಣ ಘಟಕ ಹೆಚ್ಚಿಸಲು ನೀರು ನೈರ್ಮಲ್ಯ ಅಧಿಕಾರಿ ಎಂ.ಎಂ. ರುರಗಾಲಿ ಅವರಿಗೆ ಸೂಚಿಸಿದರು.

ಪರಿಸರದ ಉಳಿವಿನ ನಿಟ್ಟಿನಲ್ಲಿ ಎಲ್ಲರ ಸಹಭಾಗಿತ್ವದಿಂದ ಹಸಿರೀಕರಣಕ್ಕೆ ಪ್ರಯತ್ನ ಮಾಡಬೇಕಿದೆ. ಈ ಬಗ್ಗೆ ಸಾರ್ವಜನಿಕರ ಗಮನ ಸೆಳೆಯಲು ಮುಂದಾಗಬೇಕು. ಸಸಿ ಪಾಲನಾ ಕೇಂದ್ರಗಳನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಪ್ರತಿ ಮುಖ್ಯ ರಸ್ತೆಯ ಬದಿಯಲ್ಲಿ (ನರ್ಸರಿ) ಸಸ್ಯಪಾಲನೆ ಕೇಂದ್ರಗಳನ್ನು ತೆರೆಯಬೇಕು ಎಂದು ಸಚಿವರು ಹೇಳಿದರು.

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆ ಬದಿ ಅರಣ್ಯ ಸ್ಮಶಾನ, ಶಾಲೆ, ಆವರಣಗಳಲ್ಲಿ ಜತೆಗೆ ರೈತರ ಬದುಗಳಿಗೆ ನಾನಾ ಜಾತಿಯ ಸಸಿಗಳನ್ನು ನಾಟಿ ಮಾಡಲು ಗ್ರಾಪಂ ಆಡಳಿತ ಮಂಡಳಿ ಹಾಗೂ ಪಿಡಿಒ ಕಾರ್ಯೋನ್ಮುಖವಾಗಬೇಕು. ನರೇಗಾ ಯೋಜನೆಯಡಿ ಸಸಿಗಳ ನಿರ್ವಹಣೆಗೆ 15ಲಕ್ಷ ರೂ. ಮೀಸಲಿಟ್ಟುಕೊಂಡು ಕಾರ್ಯನಿರ್ವಹಿಸಬೇಕು ಎಂದರು.

ಜಿಪಂ ಸದಸ್ಯರಾದ ಗಂಗಾಧರಸ್ವಾಮಿ ತವಗಮಠ, ಮಂಜುನಾಥ ಪಾಟೀಲ, ತಾಪಂ ಅಧ್ಯಕ್ಷ ದಸ್ತಗೀರ ಬಸ್ಸಾಪುರೆ, ಉಪಾಧ್ಯಕ್ಷೆ ಲಕ್ಷ್ಮೀ ಪಾಟೀಲ, ಸ್ಥಾಯಿ ಸಮಿತಿ ಅಧ್ಯಕ್ಷೆ ಸುನೀತಾ ಬಿಸಿರೊಟ್ಟಿ, ಇಒ ಮಹಾದೇವ ಬಿರಾದಾರ ಪಾಟೀಲ, ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ