ಆ್ಯಪ್ನಗರ

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದು ಸತ್ತ

ಹೊನಗಾ ಗ್ರಾಮದ ಬಳಿ ಅಬಕಾರಿ ಪೊಲೀಸರ ಕಾರ್ಯಾಚರಣೆ ವೇಳೆ ತಪ್ಪಿಸಿಕೊಳ್ಳಲು ಹೋದ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದಾನೆ.

Vijaya Karnataka Web 2 Dec 2017, 11:58 am
ಬೆಳಗಾವಿ: ಹೊನಗಾ ಗ್ರಾಮದ ಬಳಿ ಅಬಕಾರಿ ಪೊಲೀಸರ ಕಾರ್ಯಾಚರಣೆ ವೇಳೆ ತಪ್ಪಿಸಿಕೊಳ್ಳಲು ಹೋದ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದಾನೆ.
Vijaya Karnataka Web man falls into well and died
ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದು ಸತ್ತ


ಸೋನಟ್ಟಿ ಗ್ರಾಮದ ಅಡಿವೆಪ್ಪಾ ಸಿದ್ದಪ್ಪಾ ಮುಚ್ಚಂಡಿ ಎಂಬಾತ ಕಳ್ಳಬಟ್ಟಿ ತಗೆದುಕೊಂಡು ಹೋಗುವಾಗ ಅಬಕಾರಿ ಪೊಲೀಸರು ಬೆನ್ನಟ್ಟಿದ್ದಾರೆ. ಆಗ ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದಿದ್ದಾರೆ.

ಅಡಿವೆಪ್ಪನನ್ನು ಕೊಲೆ ಮಾಡಿ ಅಬಕಾರಿ ಇಲಾಖೆಯವರು ಬಾವಿಗೆ ಹಾಕಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದು. ಯುವಕನ ಸಂಬಂಧಿಕರು ಅಬಕಾರಿ ಪೊಲೀಸರ ಮೇಲೆ ಕಲ್ಲೂ ತೂರಾಟಕ್ಕೆ ಮಾಡಿದ್ದಾರೆ.

ಏಕನಾಥ್ ಎಂಬ ಅಬಕಾರಿ ಪೊಲೀಸ್‌ ಮೇಲೆ ಹಲ್ಲೆ ಮಾಡಿ, ಪೊಲೀಸರ ಕಾರು ಜಖಂಗೊಳಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು ಶವಪರಿಕ್ಷೆ ನಡೆಸಲು ಅಡ್ಡಿಪಡಿಸುತ್ತಿದ್ದಾರೆ. ಕಾಕತಿ ಪೊಲೀಸರು ಆಗಮಿಸಿ ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ