ಬೆಳಗಾವಿ : ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಬೆದರಿಕೆ ಹಾಕಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಲ್ಲಿನ 3ನೇ ಅಧಿಕ ಮತ್ತು ಸತ್ರ ನ್ಯಾಯಾಲಯ ಮಂಗಳವಾರ ಅಪರಾಧಿಗೆ ದಂಡ ಸಹಿತ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಅಥಣಿ ತಾಲೂಕಿನ ಉಗಾರ್ ಕೆ.ಎಚ್.ಗ್ರಾಮದ ಶಿವರಾಜ ಮಹಾದೇವ ಬನಸೋಡೆ (26) ಶಿಕ್ಷೆಗೆ ಗುರಿಯಾದ ಅಪರಾಧಿ.
2015 ಸೆ.24ರಂದು ಶಿವರಾಜ ಬನಸೋಡೆ 13 ವರ್ಷದ ಬಾಲಕಿಯನ್ನು ಸುಟ್ಟಟ್ಟಿ ಗ್ರಾಮಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ. ನಂತರ ಸುಟ್ಟಟ್ಟಿಯಿಂದ ಮಹಾರಾಷ್ಟ್ರದ ಗಣಪತಿಪುಳೆ ಗ್ರಾಮಕ್ಕೆ ಕರೆದೊಯ್ದು ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಬಳಿಕ ಬಾಲಕಿ ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದ ತನಿಖೆ ಕೈಗೊಂಡ ಅಂದಿನ ತನಿಖಾಧಿಕಾರಿ ಆರ್.ಎಸ್.ಬಡೆದೆಸಾರ್ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಜಿ. ನಂಜುಂಡಯ್ಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿವರಾಜ ಬನಸೋಡೆಗೆ 24 ಸಾವಿರ ರೂ.ದಂಢ ವಿಧಿಸಿ 10 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಅಭಿಯೋಜಕ ಎಲ್.ವಿ.ಪಾಟೀಲ ವಕಾಲತ್ತು ನಡೆಸಿದ್ದರು.
ಅಥಣಿ ತಾಲೂಕಿನ ಉಗಾರ್ ಕೆ.ಎಚ್.ಗ್ರಾಮದ ಶಿವರಾಜ ಮಹಾದೇವ ಬನಸೋಡೆ (26) ಶಿಕ್ಷೆಗೆ ಗುರಿಯಾದ ಅಪರಾಧಿ.
2015 ಸೆ.24ರಂದು ಶಿವರಾಜ ಬನಸೋಡೆ 13 ವರ್ಷದ ಬಾಲಕಿಯನ್ನು ಸುಟ್ಟಟ್ಟಿ ಗ್ರಾಮಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ. ನಂತರ ಸುಟ್ಟಟ್ಟಿಯಿಂದ ಮಹಾರಾಷ್ಟ್ರದ ಗಣಪತಿಪುಳೆ ಗ್ರಾಮಕ್ಕೆ ಕರೆದೊಯ್ದು ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಬಳಿಕ ಬಾಲಕಿ ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದ ತನಿಖೆ ಕೈಗೊಂಡ ಅಂದಿನ ತನಿಖಾಧಿಕಾರಿ ಆರ್.ಎಸ್.ಬಡೆದೆಸಾರ್ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಜಿ. ನಂಜುಂಡಯ್ಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿವರಾಜ ಬನಸೋಡೆಗೆ 24 ಸಾವಿರ ರೂ.ದಂಢ ವಿಧಿಸಿ 10 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಅಭಿಯೋಜಕ ಎಲ್.ವಿ.ಪಾಟೀಲ ವಕಾಲತ್ತು ನಡೆಸಿದ್ದರು.