ಆ್ಯಪ್ನಗರ

ಗೌರಿ ಹತ್ಯೆ ಪ್ರಕರಣದ ತನಿಖೆಯಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳು

ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

Vijaya Karnataka Web 7 Oct 2017, 4:51 pm
ಬೆಳಗಾವಿ: ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
Vijaya Karnataka Web many officers in gauri murder case probe
ಗೌರಿ ಹತ್ಯೆ ಪ್ರಕರಣದ ತನಿಖೆಯಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳು


ನಗರದ ಪೊಲೀಸ್‌ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರ್ಗಿ ಅವರ ಹಂತಕರನ್ನು ಹಿಡಿದಿದ್ದರೆ ಗೌರಿ ಲಂಕೇಶ್ ಅವರ ಹತ್ಯೆ ಆಗುತ್ತಿರಲಿಲ್ಲ ಎಂದು ಜನರು ಅಭಿಪ್ರಾಯಪಟ್ಟಿದ್ದರು. ಅದಕ್ಕೆ ಗೌರಿ ಲಂಕೇಶ್ ಪ್ರಕರಣವನ್ನು ಎಸ್ಐಟಿಗೆ ವಹಿಸಿದ್ದೇವೆ. ಗೊಂದಲ ಸೃಷ್ಟಿಯಾಗದೆ ಇರಲಿ ಎಂದು ಪ್ರಕರಣದ ತನಿಖೆ ಬಗ್ಗೆ ಹೆಚ್ಚಿನ ವಿಷಯ ಹಂಚಿಕೊಳ್ಳುವುದಿಲ್ಲ ಎಂದರು.

ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿ ಕಾನೂನು ವ್ಯವಸ್ಥೆ ಚೆನ್ನಾಗಿದೆ. ಮಂಗಳೂರಿನಲ್ಲಿ ರಾಜಕೀಯ ಉದ್ದೇಶಕ್ಕೆ ಸಮಸ್ಯೆ ಆಗಿತ್ತು. ವಿರೋಧ ಪಕ್ಷಗಳು ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳಲು ನೋಡಿದ್ದವು. ತಮ್ಮ ಸರಕಾರ ಅದಕ್ಕೆ ಅವಕಾಶ ಕೊಟ್ಟಿಲ್ಲ ಎಂದು ಹೇಳಿದರು.

ಬೆಳಗಾವಿಯಲ್ಲಿ ಮಹಿಳೆ ಮತ್ತು ಮಕ್ಕಳ ಕಳ್ಳ ಸಾಗಣೆ, ವೇಶ್ಯಾವಾಟಿಕೆ ಇರುವುದು ನಿಜ. ಅದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಿದ್ದೇನೆ. ಬೆಳಗಾವಿಯಲ್ಲಿ ಆರಂಭಿಸಿರುವ ಕನ್ನಡ ಕವಾಯತನ್ನು ರಾಜ್ಯಾದ್ಯಂತ ಅಳವಡಿಸುವ ಬಗ್ಗೆ ಪರಿಶೀಲಿಸಲು ಆಡಳಿತ ವಿಭಾಗಕ್ಕೆ ಕಳುಹಿಸಲಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ