ಆ್ಯಪ್ನಗರ

ವರ್ಗಾವಣೆಗೊಂಡಿದ್ದ ಹಲವು ಅಧಿಕಾರಿಗಳು ಮೂಲ ಸ್ಥಾನಕ್ಕೆ

ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ನಡೆದಿದ್ದ ಅಧಿಕಾರಿಗಳ ವರ್ಗಾವಣೆ, ಚುನಾವಣೆ ನಂತರ ...

Vijaya Karnataka 7 Jun 2018, 5:00 am
ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ನಡೆದಿದ್ದ ಅಧಿಕಾರಿಗಳ ವರ್ಗಾವಣೆ, ಚುನಾವಣೆ ನಂತರ ಮತ್ತೊಮ್ಮೆ ಕಾಣಿಸಿಕೊಂಡಿದೆ. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ವರ್ಗಾವಣೆಗೊಂಡಿದ್ದ ಅಧಿಕಾರಿಗಳು ಮತ್ತೆ ಮೂಲ ಸ್ಥಾನಕ್ಕೆ ಮರಳುತ್ತಿದ್ದಾರೆ.
Vijaya Karnataka Web many officers transferred to the original position
ವರ್ಗಾವಣೆಗೊಂಡಿದ್ದ ಹಲವು ಅಧಿಕಾರಿಗಳು ಮೂಲ ಸ್ಥಾನಕ್ಕೆ


ಕಾಯ್ದಿರಿಸಿದ ಹುದ್ದೆಗೆ ವರ್ಗಾವಣೆಗೊಂಡಿದ್ದ ಪ್ರಾದೇಶಿಕ ಆಯುಕ್ತ ಪಿ.ಎ.ಮೇಘಣ್ಣವರ ಬುಧವಾರ ಮರಳಿ ಅಧಿಕಾರ ಸ್ವೀಕರಿಸಿದ್ದಾರೆ. ರೈಲ್ವೆ ಇಲಾಖೆಗೆ ವರ್ಗಾವಣೆಗೊಂಡಿದ್ದ ಬೆಳಗಾವಿ ನಗರ ಪೊಲೀಸ್‌ ಆಯುಕ್ತ ಡಾ.ಡಿ.ಸಿ.ರಾಜಪ್ಪ ಕೂಡ ಮರಳಿ ಅಧಿಕಾರ ವಹಿಸಿಕೊಂಡಿದ್ದಾರೆ.

ಜಿಲ್ಲಾ ಪಂಚಾಯಿತಿಯ ಆಡಳಿತ ಮತ್ತು ಅಭಿವೃದ್ಧಿ ವಿಭಾಗದ ಉಪ ಕಾರ್ಯದರ್ಶಿ ಹುದ್ದೆಗಳಿಗೆ ಬಂದಿದ್ದ ವಸಂತ ಕುಲಕರ್ಣಿ ಮತ್ತು ಅಮರೇಶ ನಾಯಕ್‌ ಬುಧವಾರ ಮರಳಿ ಮೂಲ ಸ್ಥಳಗಳಿಗೆ ಹೋಗಿದ್ದಾರೆ. ಈ ಹುದ್ದೆಯಲ್ಲಿ ಮೊದಲು ಕಾರ್ಯನಿರ್ವಹಿಸುತ್ತಿದ್ದ ಎ.ಎಂ.ಪಾಟೀಲ ಮತ್ತು ಎಸ್‌.ಬಿ.ಮುಳ್ಳಳ್ಳಿ ಎರಡ್ಮೂರು ದಿನಗಳಲ್ಲಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ. ಜಿಪಂ ಯೋಜನಾಧಿಕಾರಿ ಮತ್ತು ಯೋಜನಾ ನಿರ್ದೇಶಕ ಎರಡೂ ಹುದ್ದೆಗಳನ್ನು ನಿರ್ವಹಣೆ ಮಾಡುತ್ತಿದ್ದ ಎ.ವಿ.ಹೊಸಮನಿ ಸೇವಾ ಬಡ್ತಿಯೊಂದಿಗೆ ವರ್ಗಾವಣೆಗೊಂಡಿರುವುದರಿಂದ ತೆರವಾದ ನಾಲ್ಕೂ ಸ್ಥಾನಗಳ ಪ್ರಭಾರವನ್ನು ಜಿಪಂ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ ವಹಿಸಿಕೊಂಡಿದ್ದಾರೆ. ಕಾರವಾರಕ್ಕೆ ವರ್ಗಾವಣೆಗೊಂಡಿದ್ದ ಅಪರ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ, ಮಹಾನಗರ ಪಾಲಿಕೆ ಆಯುಕ್ತ ಶಶಿಧರ ಕುರೇರ ಕೂಡ ಮರು ನಿಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ