ಬೆಳಗಾವಿ: ಹೊಲದಲ್ಲಿ ಸರಸ ಸಲ್ಲಾಪದಲ್ಲಿ ತೊಡಗಿದ್ದ ವಿವಾಹಿತೆ ಹಾಗೂ ಆತನ ಪ್ರಿಯಕರನಿಗೆ ಧರ್ಮದೇಟು ನೀಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುರಕಟನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾತ್ರೋರಾತ್ರಿ ತನ್ನ ಪತಿಯ ಕಣ್ಣ ತಪ್ಪಿಸಿ ಗದ್ದೆಯೊಂದರಲ್ಲಿ ಸರಸ ಸಲ್ಲಾಪದಲ್ಲಿ ತೊಡಗಿದ್ದ ವಿವಾಹಿತೆಯನ್ನು ಪತಿಯ ಕುಟುಂಬಸ್ಥರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಬಳಿಕ, ಅವಳನ್ನೂ ಮತ್ತು ಆಕೆಯ ಪ್ರಿಯಕರನ್ನು ಟ್ರ್ಯಾಕ್ಟರ್ಗೆ ಕಟ್ಟಿ ಕುಟುಂಬಸ್ಥರು ಶಿಕ್ಷೆ ವಿಚಿತ್ರ ಶಿಕ್ಷೆ ನೀಡಿದ್ದಾರೆ.
ನಾಲ್ಕು ಗಂಟೆಗಳ ಕಾಲ ಸಾರ್ವಜನಿಕವಾಗಿ ಇಬ್ಬರನ್ನೂ ಟ್ರ್ಯಾಕ್ಟರ್ಗೆ ಕಟ್ಟಿ ಶಿಕ್ಷೆ ನೀಡಲಾಗಿದೆ. ಪತಿಯ ಕಣ್ತಪ್ಪಿಸಿ ಮನೆಯಿಂದ ಹೊರಬಂದ ವಿವಾಹಿತೆ, ನೇರವಾಗಿ ಗ್ರಾಮದ ಹೊರವಲಯದ ಹೊಲದಲ್ಲಿ ಪ್ರಿಯಕರನ ಜೊತೆಗೆ ಸಲ್ಲಾಪದಲ್ಲಿ ತೊಡಗಿದ್ದಳು. ಆಕೆಯನ್ನು ಹಿಂಬಾಲಿಸಿದ ಕುಟುಂಬಸ್ಥರು, ಸಲ್ಲಾಪದಲ್ಲಿ ತೊಡಗಿದ್ದ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಯುವಕ ಹಾಗೂ ಮುರಕಟನಾಳ ಗ್ರಾಮದ ವಿವಾಹಿತೆ ಈ ವೇಳೆ ಸಿಕ್ಕಿಬಿದ್ದಿದ್ದಾರೆ. ಇಬ್ಬರನ್ನೂ ಟ್ರ್ಯಾಕ್ಟರ್ಗೆ ಕಟ್ಟಿ ಮುಂದೆ ಹೀಗೆ ಮಾಡದಂತೆ ಎಚ್ಚರಿಕೆ ನೀಡಿ ಕುಟುಂಬಸ್ಥರು ಬಿಡುಗಡೆ ಮಾಡಿದ್ದಾರೆ.
ಈ ಫೋಟೋ ಮತ್ತು ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಭಾರೀ ಚರ್ಚೆಯಾಗುತ್ತಿದೆ. ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಾಲ್ಕು ಗಂಟೆಗಳ ಕಾಲ ಸಾರ್ವಜನಿಕವಾಗಿ ಇಬ್ಬರನ್ನೂ ಟ್ರ್ಯಾಕ್ಟರ್ಗೆ ಕಟ್ಟಿ ಶಿಕ್ಷೆ ನೀಡಲಾಗಿದೆ. ಪತಿಯ ಕಣ್ತಪ್ಪಿಸಿ ಮನೆಯಿಂದ ಹೊರಬಂದ ವಿವಾಹಿತೆ, ನೇರವಾಗಿ ಗ್ರಾಮದ ಹೊರವಲಯದ ಹೊಲದಲ್ಲಿ ಪ್ರಿಯಕರನ ಜೊತೆಗೆ ಸಲ್ಲಾಪದಲ್ಲಿ ತೊಡಗಿದ್ದಳು. ಆಕೆಯನ್ನು ಹಿಂಬಾಲಿಸಿದ ಕುಟುಂಬಸ್ಥರು, ಸಲ್ಲಾಪದಲ್ಲಿ ತೊಡಗಿದ್ದ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಯುವಕ ಹಾಗೂ ಮುರಕಟನಾಳ ಗ್ರಾಮದ ವಿವಾಹಿತೆ ಈ ವೇಳೆ ಸಿಕ್ಕಿಬಿದ್ದಿದ್ದಾರೆ. ಇಬ್ಬರನ್ನೂ ಟ್ರ್ಯಾಕ್ಟರ್ಗೆ ಕಟ್ಟಿ ಮುಂದೆ ಹೀಗೆ ಮಾಡದಂತೆ ಎಚ್ಚರಿಕೆ ನೀಡಿ ಕುಟುಂಬಸ್ಥರು ಬಿಡುಗಡೆ ಮಾಡಿದ್ದಾರೆ.
ಈ ಫೋಟೋ ಮತ್ತು ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಭಾರೀ ಚರ್ಚೆಯಾಗುತ್ತಿದೆ. ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.