ಆ್ಯಪ್ನಗರ

ಲೋಳಸೂರ- ಹುಣಶ್ಯಾಳ ರಸ್ತೆ ಸುಧಾರಣೆಗೆ ಕ್ರಮ

ಗೋಕಾಕ : ಲೋಳಸೂರದಿಂದ ಹುಣಶ್ಯಾಳ ಪಿಜಿವರೆಗಿನ ರಸ್ತೆ ಸುಧಾರಣೆ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯಿಂದ 6 ಕೋಟಿ ರೂ...

Vijaya Karnataka 9 Jul 2019, 5:00 am
ಗೋಕಾಕ : ಲೋಳಸೂರದಿಂದ ಹುಣಶ್ಯಾಳ ಪಿಜಿವರೆಗಿನ ರಸ್ತೆ ಸುಧಾರಣೆ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯಿಂದ 6 ಕೋಟಿ ರೂ.ಗಳ ಪ್ರಸ್ತಾವವನ್ನು ಸರಕಾರಕ್ಕೆ ಸಲ್ಲಿಸಲಾಗಿದ್ದು, ಇಷ್ಟರೊಳಗೇ ಕಾಮಗಾರಿಗೆ ಅನುಮೋದನೆ ದೊರೆಯಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
Vijaya Karnataka Web BEL-8GOK1


ತಾಲೂಕಿನ ಬಳೋಬಾಳ ಗ್ರಾಮದಲ್ಲಿ ಭಾನುವಾರ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಲೋಳಸೂರದಿಂದ ನಲ್ಲಾನಟ್ಟಿ, ಬಳೋಬಾಳ, ಬೀರನಗಡ್ಡಿ, ಹುಣಶ್ಯಾಳ ಪಿಜಿ ಗ್ರಾಮದವರೆಗಿನ ಆಯ್ದ 7.50 ಕಿ.ಮೀ ರಸ್ತೆ ಸುಧಾರಣೆಗೊಳ್ಳಲಿದೆ ಎಂದು ಹೇಳಿದರು.

ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ಕುರಿತೂ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಬಳೋಬಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಅನುಕೂಲವಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಮೂಲಕ ಇನ್ನೂ ಹೆಚ್ಚಿನ ಪ್ರಮಾಣದ ಚಿಕಿತ್ಸೆಗಳು ಬಡಕುಟುಂಬಗಳಿಗೆ ದೊರೆಯಲಿವೆ ಎಂದು ಹೇಳಿದರು.

ಡಾ. ಸುಗಂಧಾ ಶಿಂಗ್ಯಾಗೋಳಗೆ ಸತ್ಕಾರ: ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿವೃತ್ತರಾದ ಬಳೋಬಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಗಂಧಾ ಶಿಂಗ್ಯಾಗೋಳ ಅವರನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಸತ್ಕರಿಸಿದರು. ಮುತ್ತೆಪ್ಪ ಕುಳ್ಳೂರ, ವಿನೋದ ಪೂಜೇರಿ, ಭೀಮಪ್ಪ ಕಲ್ಲೋಳಿ, ರಾಮಪ್ಪ ದುರ್ಗಿ, ಪ್ರಧಾನಿ ಕಳಸನ್ನವರ, ಬಸವರಾಜ ಬೆಳವಿ, ಶ್ರೀಶೈಲ ಬೆಳವಿ, ಸಿದ್ದಯ್ಯಾ ಹೋಳಗಿ, ಗುರುಸಿದ್ಧ ಮೆಳವಂಕಿ, ಅವ್ವಣ್ಣ ಡಬ್ಬನವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ