ಆ್ಯಪ್ನಗರ

ನಿರಂತರ ನೀರು ಪೂರೈಕೆ ಯೋಜನೆ ಅನುಷ್ಠಾನ ಕುರಿತು ಸಭೆ

ಗೋಕಾಕ: ನಗರಕ್ಕೆ ನಿರಂತರ ನೀರು ಪೂರೈಕೆ ಯೋಜನೆ ಕುರಿತಂತೆ ಗುರುವಾರ ಬೆಳಗಾವಿಯ ಕೆಯುಐಡಿಎಫ್‌ಸಿ ವಿಭಾಗೀಯ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ಜರುಗಿತು...

Vijaya Karnataka 4 May 2019, 5:00 am
ಗೋಕಾಕ : ನಗರಕ್ಕೆ ನಿರಂತರ ನೀರು ಪೂರೈಕೆ ಯೋಜನೆ ಕುರಿತಂತೆ ಗುರುವಾರ ಬೆಳಗಾವಿಯ ಕೆಯುಐಡಿಎಫ್‌ಸಿ ವಿಭಾಗೀಯ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.
Vijaya Karnataka Web BEL-3GOK1


ಕೆಯುಐಡಿಎಫ್‌ಸಿ ವಿಭಾಗೀಯ ಕಚೇರಿಯ ಸಹಾಯಕ ಎಂಜಿನಿಯರ್‌ ಹಾದಿಮನಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಗೋಕಾಕ ನಗರಸಭೆ ಆಯುಕ್ತ ಎಂ.ಎಚ್‌. ಅತ್ತಾರ ಹಾಗೂ ಗುತ್ತಿಗೆದಾರ ಕಂಪನಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಗೋಕಾಕ ನಗರದ ಝೋನ್‌ ನಂ. 3ರಲ್ಲಿ ಹೆಚ್ಚುವರಿ ಸಂಪರ್ಕ ಕಲ್ಪಿಸಿ, ಅಲ್ಲಿನ ನಿವಾಸಿಗಳಿಗೆ ಅನುಕೂಲ ಮಾಡಿಕೊಡುವ ಕುರಿತು ಚರ್ಚಿಸಲಾಯಿತು. ಇದೇ ವೇಳೆ ಆಯುಕ್ತರು ಇತರೆ ಕಾಮಗಾರಿಗಳ ವಿವರ ಪಡೆದು, ಶೀಘ್ರ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ಈಗಾಗಲೆ ಘಟಪ್ರಭಾ ನದಿಯಿಂದ ಕಾಲುವೆಗಳಿಗೆ ನೀರು ಬಿಟ್ಟಿದ್ದರಿಂದ ಸಾಕಷ್ಟು ನೀರು ಸಂಗ್ರಹವಾಗಿದೆ. ಬರುವ ದಿನಗಳಲ್ಲಿ ಮಳೆಯಾದಲ್ಲಿ ನೀರು ಪೂರೈಸಲು ಮತ್ತಷ್ಟು ಅನುಕೂಲವಾಗಲಿದೆ. ನಿರಂತರ ನೀರು ಪೂರೈಕೆ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಪೌರಾಯುಕ್ತರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ