ವಿಟಿಯು ವಿಭಜನೆ ವಿರೋಧಿಸಿ ಕರವೇ ಮನವಿ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿಭಜನೆ ವಿರೋಧಿಸಿ ಶನಿವಾರ ಕರವೇ ಚಿಕ್ಕೋಡಿ ತಾಲೂಕಾ ಘಟಕದಿಂದ ತಹಸೀಲ್ದಾರರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು...
Vijaya Karnataka 17 Feb 2019, 5:00 am
ಚಿಕ್ಕೋಡಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿಭಜನೆ ವಿರೋಧಿಸಿ ಶನಿವಾರ ಕರವೇ ಚಿಕ್ಕೋಡಿ ತಾಲೂಕಾ ಘಟಕದಿಂದ ತಹಸೀಲ್ದಾರರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ವಿಟಿಯು ವಿಭಜನೆ ಮಾಡುವುದರಿಂದ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಎಂಬ ಭೇದಭಾವವನ್ನು ಸರಕಾರವೇ ಹುಟ್ಟು ಹಾಕಿದಂತಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ವಿಭಜನೆ ಮಾಡಬಾರದು. ಕೈಬಿಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ದಾರಿ ತುಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕರವೇ ಜಿಲ್ಲಾ ಸಂಚಾಲಕ ಸಂಜು ಬಡಿಗೇರ, ನಾಗೇಶ ಮಾಳಿ, ಪ್ರತಾಪ ಪಾಟೀಲ, ಸಂಜು ಲಟ್ಟೆ, ಸಂಜು ಹಿರೇಮಠ, ಜೀತೇಂದ್ರ ಬಾಬಣ್ಣವರ ಮುಂತಾದವರು ಉಪಸ್ಥಿತರಿದ್ದರು.
ವಿಟಿಯು ವಿಭಜನೆ ಮಾಡುವುದರಿಂದ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಎಂಬ ಭೇದಭಾವವನ್ನು ಸರಕಾರವೇ ಹುಟ್ಟು ಹಾಕಿದಂತಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ವಿಭಜನೆ ಮಾಡಬಾರದು. ಕೈಬಿಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ದಾರಿ ತುಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕರವೇ ಜಿಲ್ಲಾ ಸಂಚಾಲಕ ಸಂಜು ಬಡಿಗೇರ, ನಾಗೇಶ ಮಾಳಿ, ಪ್ರತಾಪ ಪಾಟೀಲ, ಸಂಜು ಲಟ್ಟೆ, ಸಂಜು ಹಿರೇಮಠ, ಜೀತೇಂದ್ರ ಬಾಬಣ್ಣವರ ಮುಂತಾದವರು ಉಪಸ್ಥಿತರಿದ್ದರು.