ಆ್ಯಪ್ನಗರ

ದಲಿತ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ಮನವಿ

ಹುಕ್ಕೇರಿ: ದಲಿತ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ಸ್ಥಳೀಯ ಅಹಿಂದ ಬ್ರಿಗೇಡ್‌ ಹಾಗೂ ತಾಲೂಕಿನ ನಾನಾ ದಲಿತ ಮತ್ತು ಅಲ್ಪಸಂಖ್ಯಾತ ಸಂಘಟನೆಗಳ ಒಕ್ಕೂಟದಿಂದ ...

Vijaya Karnataka 16 Jun 2019, 5:00 am
ಹುಕ್ಕೇರಿ: ದಲಿತ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ಸ್ಥಳೀಯ ಅಹಿಂದ ಬ್ರಿಗೇಡ್‌ ಹಾಗೂ ತಾಲೂಕಿನ ನಾನಾ ದಲಿತ ಮತ್ತು ಅಲ್ಪಸಂಖ್ಯಾತ ಸಂಘಟನೆಗಳ ಒಕ್ಕೂಟದಿಂದ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web BEL-15 HUKKERI 03


ಪಟ್ಟಣದ ಹಳೆ ತಹಸೀಲ್ದಾರ್‌ ಕಚೇರಿಯಿಂದ ಮನಿ ವಿಧಾನಸೌಧದವರೆಗೆ ಪ್ರತಿಭಟನಾಕಾರರು ಮೆರವಣಿಗೆಯಲ್ಲಿ ಆಗಮಿಸಿದರು. ಅಹಿಂದ ಬ್ರಿಗೇಡ್‌ ರಾಜ್ಯಾಧ್ಯಕ್ಷ ಹಾಗೂ ಎಸ್ಸಿ, ಎಸ್ಟಿ ದೌರ್ಜನ್ಯ ಪರಿಶೀಲನಾ ಸಮಿತಿ ಜಿಲ್ಲಾ ಸದಸ್ಯ ಸುರೇಶ ತಳವಾರ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಘಟನೆಗೆ ಖಂಡನೆ ವ್ಯಕ್ತಪಡಿಸಿದ ದಲಿತ ಮುಖಂಡರು, ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಘಟನೆಗೆ ಕಾರಣರಾದವರ ವಿರುದ್ಧ ತಕ್ಷಣ ಕಠಿಣ ಕ್ರಮ ಜರುಗಿಸಬೇಕು. ಇಲ್ಲವಾದರೆ ತೀವ್ರ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.

ಮನವಿ ಪತ್ರ ಓದಿದ ಸಂಘಟಕ ಉದಯ ಹುಕ್ಕೇರಿ ತಹಸೀಲ್ದಾರ್‌ ಅವರಿಗೆ ಸಲ್ಲಿಸಿದರು. ಇದೇ ವೇಳೆ ಕೋರ್ಟ್‌ ವೃತ್ತದಲ್ಲಿ ಪ್ರತಿಭಟನಾಕಾರರು ರಸ್ತೆತಡೆ ನಡೆಸಿದರು.

ವಿವಿಧ ಬೇಡಿಕೆಗಳು :
ಇದೇ ವೇಳೆ, ತಾಲೂಕಿನ ವಿವಿಧ ಗ್ರಾಮಗಳಲ್ಲಿ ದಲಿತ ಸಮುದಾಯದವರಿಗೆ ಸ್ಮಶಾನ ಭೂಮಿ ನೀಡಿಕೆ, ತಾಲೂಕಿನ ಸಂಕೇಶ್ವರ ಹಾಗೂ ಹುಕ್ಕೇರಿಯಲ್ಲಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಪುತ್ಥಳಿ ನಿರ್ಮಾಣ ಹಾಗೂ ನರೇಗಾ ಯೋಜನೆಯಲ್ಲಿ ದಲಿತರಿಗೆ ಸೂಕ್ತ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ತಾಲೂಕಾಡಳಿತಕ್ಕೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಮೇಶ ಹುಂಜಿ, ಕೆಂಪಣ್ಣಾ ಶಿರಹಟ್ಟಿ, ಶಂಕರತಿಪ್ಪ ನಾಯಿಕ, ಸರೋಜಾ ಕಾಂಬಳೆ, ಶಾಂತಾ ಹೆಳವಿ, ಸದಾಶಿವ ಬಿ.ಕೆ, ಪುರಸಭೆ ಸದಸ್ಯ ಸದಾಶಿವ ಕರೆಪ್ಪಗೋಳ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ