ಆ್ಯಪ್ನಗರ

ಬೇಡಿಕೆ ಈಡೇರಿಕೆಗಾಗಿ ಪ್ರಧಾನಿಗೆ ಅಂಚೆ ನೌಕರರ ಮನವಿ

ರಾಯಬಾಗ: ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ಪ್ರಧಾನ ಅಂಚೆ ಕಚೇರಿ ಎದುರು ಗ್ರಾಮೀಣ ಅಂಚೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ 14ನೇ ...

Vijaya Karnataka 6 Jun 2018, 5:00 am
ರಾಯಬಾಗ: ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ಪ್ರಧಾನ ಅಂಚೆ ಕಚೇರಿ ಎದುರು ಗ್ರಾಮೀಣ ಅಂಚೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ 14ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಶಾಸಕ ಡಿ.ಎಂ. ಐಹೊಳೆ ಅವರ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಂಪರ್ಕ ಸಚಿವ ಮನೋಜ್‌ ಸಿನ್ಹಾ ಅವರಿಗೆ ಪ್ರತಿಭಟನಕಾರರು ಮನವಿ ಸಲ್ಲಿಸಿದರು.
Vijaya Karnataka Web BEL-5RAIBAG1PHOTO


ಗ್ರಾಮೀಣ ಅಂಚೆ ಇಲಾಖೆಯ ನೌಕರರಿಗೆ 7ನೇ ವೇತನ ನೀಡಬೇಕು. ಸೇವಾ ಭದ್ರತೆ ಒದಗಿಸಬೇಕು. ವೈದ್ಯಕೀಯ ನೆರವು ನೀಡಬೇಕು, ಪಿಂಚಣಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ನೀಡಬೇಕೆಂಬ ವಿಷಯನ್ನೊಳಗೊಂಡ ಮನವಿ ಸಲ್ಲಿಸಿಲಾಯಿತು.

ಈ ಸಂದರ್ಭದಲ್ಲಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಉಪಾಧ್ಯಕ್ಷ ವಿನಾಯಕ ಲೇಲೆ, ರವಿ ರಂಗೋಳೆ, ಆರ್‌.ಎಂ.ಕಾಂಬಳೆ, ಎಸ್‌.ಎಸ್‌.ಶಮನೇವಾಡಿ, ಮಹಾದೇವ ಜೋರಾಪುರೆ, ಲಕ್ಷ್ಮೀಕಾಂತ ಮುಳೆ, ಅಶೋಕ ದೇಶಪಾಂಡೆ, ವಿಜಯ ಕೆಳಗಡೆ, ಎಸ್‌.ಎಲ್‌.ನಿಲಜಗಿ ಅಶೋಕ ಮಗದುಮ್ಮ, ಇಸ್ಮಾಯಿಲ್‌ ಮಕಾಂದಾರ, ದಿಲೀಪ ಕಾಂಬಳೆ, ಚೇತನ ಮೋರೆ, ತಾನಾಜಿ ಹೊಸಕೋಟೆ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ