ಆ್ಯಪ್ನಗರ

ಉದ್ಧವ್‌ ಠಾಕ್ರೆ ಭೇಟಿ ಮಾಡಿದ ಎಂಇಎಸ್‌ ನಿಯೋಗ

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ ...

Vijaya Karnataka 16 Jul 2019, 5:00 am
ಬೆಳಗಾವಿ : ಮಹಾನಗರ ಪಾಲಿಕೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌)ಯ ನಾಡವಿರೋಧಿ ಚಟುವಟಿಕೆಗಳೂ ಆರಂಭಗೊಂಡಿವೆ.
Vijaya Karnataka Web BLG-1507-2-52-15MES


ಕರ್ನಾಟಕ ಸರಕಾರ ಮರಾಠಿಗರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಹೀಗಾಗಿ, ಗಡಿ ಸಮಸ್ಯೆಗೆ ಶೀಘ್ರ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಇಲ್ಲಿನ ಎಂಇಎಸ್‌ ಮುಖಂಡರ ನಿಯೋಗ ಸೋಮವಾರ ಮುಂಬೈಗೆ ತೆರಳಿ ಶಿವಸೇನಾ ನಾಯಕ ಉದ್ಧವ ಠಾಕ್ರೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಗಡಿ ವಿವಾದ ವಿಷಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಮಾತುಕತೆಗೆ ಅವಕಾಶ ನೀಡಬೇಕು ಎಂದು ಮುಖಂಡರು ಕೋರಿದ್ದಾರೆ.

ಉದ್ಯಮಿ ಕಿರಣ್‌ ಠಾಕೂರ್‌ ನೇತೃತ್ವದಲ್ಲಿ ಎಂಇಎಸ್‌ನ ಮಾಜಿ ನಗರಸೇವಕರು ನಿಯೋಗದಲ್ಲಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ