ಆ್ಯಪ್ನಗರ

ಮತ್ತೆ ಗಡಿ ಕ್ಯಾತೆ ತೆಗೆದ ಎಂಇಎಸ್

ಈ ಬಾರಿಯ ಕನ್ನಡ ರಾಜ್ಯೋತ್ಸವದಂದು ಕರಾಳ ದಿನಾಚರಣೆ ಆಯೋಜನೆಗೆ ಅವಕಾಶ ನೀಡಬಾರದು ಎನ್ನುವ ಮನವಿಗೆ ಜಿಲ್ಲಾಡಳಿತ ಸ್ಪಷ್ಟ ನಿಲುವು ತೋರದ ಹಿನ್ನೆಲೆಯಲ್ಲಿ ನಾರಾಯಣಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟಕ್ಕೆ ಅಣಿಯಾಗುತ್ತಿದೆ.

Vijaya Karnataka 21 Oct 2018, 10:04 am
ಬೆಳಗಾವಿ: ಕನ್ನಡ ರಾಜ್ಯೋತ್ಸವದಂದು 'ಕರಾಳ ದಿನಾಚರಣೆ'ಗೆ ಅವಕಾಶ ನೀಡಬಾರದು ಎನ್ನುವ ಕನ್ನಡಿಗರ ಒತ್ತಾಯದ ನಡುವೆಯೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಮತ್ತೆ ಮರಾಠಿಗರಲ್ಲಿ ಭಾಷಾ ಪ್ರಚೋದನೆ ನೀಡುವ ಕೃತ್ಯ ಆರಂಭಿಸಿದೆ.
Vijaya Karnataka Web mes


ಬೆಳಗಾವಿ ಸೇರಿದಂತೆ ಗಡಿ ಭಾಗದ ಕನ್ನಡ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವ ಘೋಷಣೆಗಳಿರುವ ಕಪ್ಪು ಟೀ ಶರ್ಟ್‌ ತಯಾರಿಸಿರುವ ಎಂಇಎಸ್‌ ಯುವ ಘಟಕ ಕಾರ್ಯಕರ್ತರು ಅವುಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಮಾರಾಟಕ್ಕೆ ಮುಂದಾಗಿದ್ದಾರೆ. ಕಳೆದ ವರ್ಷವೂ ಇದೇ ರೀತಿ ಮಾಡಲು ಮುಂದಾಗಿದ್ದ ಎಂಇಎಸ್‌ ಕಿಡಿಗೇಡಿಗಳಿಗೆ ಪೊಲೀಸರು ತಕ್ಕ ಪಾಠ ಕಲಿಸಿದ್ದರು. ಪ್ರಚೋದನಕಾರಿ ಹೇಳಿಕೆಗಳಿರುವ ಟೀ ಶರ್ಟ್‌ ಸೇರಿದಂತೆ ಪ್ರಚಾರ ಪರಿಕರಗಳ ಮಾರಾಟ ಮತ್ತು ಪ್ರದರ್ಶನಕ್ಕೆ ಕಡಿವಾಣ ಹಾಕಿದ್ದರು. ಈ ವರ್ಷ ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಗಡಿ ಭಾಗದಲ್ಲಿ ಭಾಷಾ ಸೌಹಾರ್ದತೆಗೆ ಧಕ್ಕೆ ತರಲು ಮುಂದಾಗಿರುವ ಎಂಇಎಸ್‌ ಕಾರ್ಯಕರ್ತರ ಮೇಲೆ ಕ್ರಮ ಕೈಗೊಳ್ಳುವಂತೆ ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ.

ಇಂದು ಸಭೆ: ಈ ಬಾರಿಯ ಕನ್ನಡ ರಾಜ್ಯೋತ್ಸವದಂದು ಕರಾಳ ದಿನಾಚರಣೆ ಆಯೋಜನೆಗೆ ಅವಕಾಶ ನೀಡಬಾರದು ಎನ್ನುವ ಮನವಿಗೆ ಜಿಲ್ಲಾಡಳಿತ ಸ್ಪಷ್ಟ ನಿಲುವು ತೋರದ ಹಿನ್ನೆಲೆಯಲ್ಲಿ ನಾರಾಯಣಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟಕ್ಕೆ ಅಣಿಯಾಗುತ್ತಿದೆ. ಸ್ವತಃ ಕರವೇ ಅಧ್ಯಕ್ಷ ನಾರಾಯಣಗೌಡ ಶನಿವಾರ ರಾತ್ರಿ ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದು, ಹೋರಾಟ ಕುರಿತು ರೂಪುರೇಷೆ ಸಿದ್ಧತೆಗಾಗಿ ಸಭೆ ನಡೆಸಲು ಮುಂದಾಗಿದ್ದಾರೆ. ಇದರ ನಡುವೆಯೇ ಎಂಇಎಸ್‌ ಕೂಡ ರಾಜ್ಯೋತ್ಸವದಂದೇ ಕರಾಳ ದಿನ ಆಚರಿಸಲು ನಗರದ ಮರಾಠಾ ಮಂದಿರ ಸೇರಿದಂತೆ ಹಲವು ಕಡೆ ಗುಪ್ತಸಭೆ ನಡೆಸುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ