ಬೆಳಗಾವಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಸಂಸದೀಯ ವ್ಯವಹಾರ ಸಚಿವ ಕೃಷ್ಣ ಭೈರೇಗೌಡ ಜು.24ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 7.40ಕ್ಕೆ ಬೆಳಗಾವಿಗೆ ಆಗಮಿಸುವ ಸಚಿವರು 10ರಿಂದ 1.30ರ ವರೆಗೆ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಕಾಮಗಾರಿ ನಡೆದಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.
24ರಂದು ಜಿಲ್ಲೆಗೆ ಕೃಷ್ಣಭೈರೇಗೌಡ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಸಂಸದೀಯ ವ್ಯವಹಾರ ಸಚಿವ ಕೃಷ್ಣ ಭೈರೇಗೌಡ ಜು24ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಅಂದು ಬೆಳಗ್ಗೆ 7...
Vijaya Karnataka 22 Jul 2018, 5:00 am