ಆ್ಯಪ್ನಗರ

ಬಿಜೆಪಿಗೆ ಯಾವುದೇ ಕಾರಣಕ್ಕೂ ರಮೇಶ್ ಜಾರಕಿಹೊಳಿ ಮೋಸ ಮಾಡುವುದಿಲ್ಲ: ಸಚಿವ ಈಶ್ವರಪ್ಪ ಭರವಸೆ

ರಮೇಶ್‌ ಕಾಂಗ್ರೆಸ್‌ನಲ್ಲಿದ್ದಾಗ ಅವರು ತಮ್ಮ ಪಕ್ಷಕ್ಕೆ ಮೋಸ ಮಾಡಿದ್ದರು ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ಆರೋಪ ಮಾಡಿರಲಿಲ್ಲ, ಈಗ ರಮೇಶ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಮೇಲೆ ಲಕ್ಷ್ಮಿ ಹೆಬ್ಬಾಳಕರ್‌ಗೆ ಅವರು ಮೊದಲು ಮೋಸ ಮಾಡಿದ್ದು ನೆನಪಾಗುತ್ತಿದೆ. ಅವರಿಗೆ ರಮೇಶ್‌ ಜಾರಕಿಹೊಳಿ ಬಿಜೆಪಿಗೆ ಬಂದಿದ್ದು ತಡೆಯಲಾಗುತ್ತಿಲ್ಲ ಎಂದು ಕಿಡಿಕಾರಿದರು.

guest Basavaraj-Meeshi | Lipi 28 Nov 2021, 2:06 pm
ಬೆಳಗಾವಿ: ಬಿಜೆಪಿಗೆ ಯಾವುದೇ ಕಾರಣಕ್ಕೂ ರಮೇಶ್ ಜಾರಕಿಹೊಳಿ ಮೋಸ ಮಾಡುವುದಿಲ್ಲ ಸಚಿವ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ.
Vijaya Karnataka Web Ks Eshwarappa


ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿ, ರಮೇಶ್‌ ಜಾರಕಿಹೊಳಿ ಕಾಂಗ್ರೆಸ್‌ನಲ್ಲಿದ್ದಾಗ ಕಾಂಗ್ರೆಸ್‌ಗೆ ಮೋಸ ಮಾಡಿದ್ದರು, ಬಿಜೆಪಿಗೆ ಬಂದ ಮೇಲೆ ಬಿಜೆಪಿಗೂ ಮೋಸ ಮಾಡುತ್ತಿದ್ದಾರೆ ಎಂಬ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಆರೋಪದ ಬಗ್ಗೆ ಉತ್ತರಿಸಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಮೊದಲ ಮತವನ್ನು ಬಿಜೆಪಿಗೆ ಮತ್ತು ಎರಡನೆ ಮತವನ್ನು ತನ್ನ ಸಹೋದರನಿಗೆ ನೀಡುವಂತೆ ರಮೇಶ್‌ ಜಾರಕಿಹೊಳಿ ಪ್ರಚಾರ ಮಾಡುತ್ತಿದ್ದಾರೆ. ಇದನ್ನು ಅವರೇನು ಗುಟ್ಟಾಗಿ ಹೇಳುತ್ತಿಲ್ಲ, ಆದರೆ ರಮೇಶ್‌ ಕಾಂಗ್ರೆಸ್‌ನಲ್ಲಿದ್ದಾಗ ಅವರು ತಮ್ಮ ಪಕ್ಷಕ್ಕೆ ಮೋಸ ಮಾಡಿದ್ದರು ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ಆರೋಪ ಮಾಡಿರಲಿಲ್ಲ, ಈಗ ರಮೇಶ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಮೇಲೆ ಲಕ್ಷ್ಮಿ ಹೆಬ್ಬಾಳಕರ್‌ಗೆ ಅವರು ಮೊದಲು ಮೋಸ ಮಾಡಿದ್ದು ನೆನಪಾಗುತ್ತಿದೆ. ಅವರಿಗೆ ರಮೇಶ್‌ ಜಾರಕಿಹೊಳಿ ಬಿಜೆಪಿಗೆ ಬಂದಿದ್ದು ತಡೆಯಲಾಗುತ್ತಿಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್‌ಗೆ ತೊಂದರೆ ಮಾಡಲು ಬಿಜೆಪಿ- ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ: ಜಿ. ಪರಮೇಶ್ವರ್
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯ ಸರಕಾರದಲ್ಲಿ ಎಲ್ಲ ರೀತಿಯ ಅಭಿವೃದ್ದಿ ಕಾರ್ಯಗಳು ಆಗುತ್ತಿವೆ. ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಡಿಸೆಂಬರ್12 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಎಲ್ಲಾ ವಿಧಾಸಭಾ ಮತ ಕ್ಷೇತ್ರದ ಹಿಂದುಳಿದ ವರ್ಗದ ನಾಯಕರು ಭಾಗವಹಿಸುವರು. ಈ ನಿಟ್ಟಿನಲ್ಲಿ ಬೆಳಗಾವಿ ಸೇರಿ ವಿವಿಧೆಡೆ ವಿಭಾಗ ಮಟ್ಟದ ಸಮಾವೇಶ ಮಾಡುತ್ತಿದ್ದೇವೆ. ಇದು ಇಡೀ ರಾಜ್ಯದಲ್ಲಿ ಹಿಂದುಳಿದ ವರ್ಗದವರಿಗೆ ಕೇಂದ್ರ, ರಾಜ್ಯ ಸರ್ಕಾರದ ನೀಡುವ ಸೌಲಭ್ಯಗಳನ್ನು ತಿಳಿಸುವ ಕೆಲಸ ಆಗಲಿದೆ. ಪರಿಷತ್ ಚುನಾವಣೆಯಲ್ಲಿ ಹಿಂದುಳಿದ ವರ್ಗದ ಹೆಚ್ಚಿನ ಮತ ಪಡೆಯಲು ಪ್ರಯತ್ನ ಮಾಡ್ತೀವಿ. ಮತ್ತು ಪರಿಷತ್ ಚುನಾವಣೆಯಲ್ಲಿ ನುರಿತ ಅಭ್ಯರ್ಥಿಗಳನ್ನ ಹಾಕಿದ್ದೇವೆ ಎಂದರು.

ಇನ್ನು ‘ಕಾಂಗ್ರೆಸ್ ಪಕ್ಷದಲ್ಲಿ ಸಂಬಂಧವೇ ಇಲ್ಲದವರಿಗೆ ಹುಡುಕಿ ಹುಡುಕಿ ಅಭ್ಯರ್ಥಿ ಹಾಕಿದ್ದಾರೆ ಎಂದು ಗೇಲಿ ಮಾಡಿದ ಈಶ್ವರಪ್ಪ, ಅಷ್ಟೇ ಅಲ್ಲ ಕಾಂಗ್ರೆಸ್ ಪಕ್ಷದಲ್ಲಿ ಯಾರ ಹತ್ತಿರ ದುಡ್ಡಿದೆ ಅಂತವರನ್ನ ಅಭ್ಯರ್ಥಿಯಾಗಿ ಹಾಕ್ತಿದ್ದಾರೆ. ಉದಾಹರಣೆಗೆ ವಿರೋಧ ಪಕ್ಷದ ನಾಯಕ ಎಸ್‌.ಆರ್‌ ಪಾಟೀಲ್ ಅವರಿಗೆ ಟಿಕೆಟ್ ನೀಡಿಲ್ಲ ಯಾರು ಹಣವಂತರು ಇದ್ದಾರೆ, ಅವರಿಗೆ ಬೇಕಾದವರಿಗೆ, ಸಂಬಂಧಿಕರಿಗೆ ಕಾಂಗ್ರೆಸ್‌ ಟಿಕೆಟ್ ನೀಡಿದ್ದಾರೆ ಎಂದು ವ್ಯಂಗ್ಯವಾಡಿದರು. ಇದು ಮತದಾರರಿಗೆ, ಚುನಾಯಿತ ಪ್ರತಿನಿಧಿಗಳಿಗೆ ಬೇಸರವಾಗಿದೆ. ಹೀಗಾಗಿ ಈ ಬಾರಿ ಪರಿಷತ್ ಚುನಾವಣೆಯಲ್ಲಿ 15 ರಿಂದ 16 ಸ್ಥಾನವನ್ನ ಬಿಜೆಪಿ ಗೆಲುವು ಸಾಧಿಸುವ ಮೂಲಕ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭರವಸೆಯ ವ್ಯಕ್ತಪಡಿಸಿದರು.
ಸಂವಿಧಾನ ಬದಲಾವಣೆ ಮಾಡಲು ಮುಂದಾದರೆ ರಕ್ತಕ್ರಾಂತಿ ಆಗುತ್ತೆ; ಸಿದ್ದರಾಮಯ್ಯ ಎಚ್ಚರಿಕೆ
ಬಿಜೆಪಿ ಸರಕಾರ ಪರ್ಸಂಟೇಜ್ ಸರಕಾರ ಎಂಬ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿ, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ತನಿಖೆಗೆ ಆದೇಶ ನೀಡಿದ್ದಾರೆ. ವಿರೋಧ ಪಕ್ಷದವರು ಆಡಳಿತ ಪಕ್ಷವನ್ನು ಟೀಕೆ ಮಾಡುವುದು ಸಹಜ. ಅವರ ಆರೋಪದಲ್ಲಿ ಸತ್ಯ ಇದ್ದರೆ ನಾವು ರಿಪೇರಿ ಮಾಡಿಕೊಳ್ಳುತ್ತೇವೆ. ಸತ್ಯ ಇಲ್ಲದಿದ್ದರೆ ಅದರ ಬಗ್ಗೆ ಗಮನ ಕೊಡುವುದಿಲ್ಲ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ