ಆ್ಯಪ್ನಗರ

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ ರಮೇಶ್‌ ಜಾರಕಿಹೊಳಿ

ಅಚ್ಚುಕಟ್ಟು ಭಾಗದ ರೈತರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ರಚಿಸಿರುವ 400 ಕೋಟಿ ರೂ. ಕ್ರಿಯಾ ಯೋಜನೆ ಹಾಗೂ ರೈತರಿಂದ ಬಂದ ಅರ್ಜಿಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿ ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಸಚಿವ ರಮೇಶ್‌ ಜಾರಕಿಹೊಳಿ, ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು.

Vijaya Karnataka Web 4 Dec 2020, 12:05 pm
ಬೆಳಗಾವಿ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರು ಗೋಕಾಕ ನಗರದಲ್ಲಿ ಜಲ ಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಗುರುವಾರ ಭೇಟಿ ಮಾಡಿ ಚರ್ಚಿಸಿದರು.
Vijaya Karnataka Web Ramesh Jarkiholi


ಜಮ್ಮು ಕಾಶ್ಮೀರದಲ್ಲಿ ಬೆಳಗಾವಿ ಮೂಲದ ಯೋಧ ಆತ್ಮಹತ್ಯೆ ಶಂಕೆ..!

ಪ್ರಾಧಿಕಾರ ವ್ಯಾಪ್ತಿಯ ಅಚ್ಚುಕಟ್ಟು ಭಾಗದ ರೈತರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ರಚಿಸಿರುವ 400 ಕೋಟಿ ರೂ. ಕ್ರಿಯಾ ಯೋಜನೆ ಹಾಗೂ ರೈತರಿಂದ ಬಂದ ಅರ್ಜಿಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿ ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಸಚಿವ ರಮೇಶ್‌ ಜಾರಕಿಹೊಳಿ, ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು ಮತ್ತು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಸೂಚಿಸಿದರು.

ವಿನಯ್ ಕುಲಕರ್ಣಿಗೆ ರಾಜಾತಿಥ್ಯ ಆರೋಪ; ಹಿಂಡಲಗಾ ಜೈಲಿಗೆ ಡಿಐಜಿ ದಿಢೀರ್ ಭೇಟಿ

ನೀರು ಬಳಕೆದಾರರ ಸಹಕಾರ ಸಂಘಗಳಿಗೆ ಹೆಚ್ಚಿನ ಪ್ರಾಶಸ್ತ್ಯ, ನನೆಗುದಿಗೆ ಬಿದ್ದಿರುವ ಕಾಮಗಾರಿಗಳ ಅನುಷ್ಠಾನ, ಕಾಲುವೆಗಳ ನಿರ್ಮಾಣ ಮತ್ತು ರೈತರಿಗೆ ಎಲ್ಲ ರೀತಿಯಲ್ಲಿಅನುಕೂಲ ಮಾಡಿಕೊಡುವಂತೆ ಪವಿತ್ರಾ ರಾಮಯ್ಯ ಅವರು ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ನೆಲ ಮತ್ತು ಜಲ ನಿರ್ವಹಣೆ ನಿರ್ದೇಶಕ ರಾಜೇಂದ್ರ ಪೋದ್ದಾರ್‌, ಮಲಪ್ರಭಾ ನೀರು ಬಳಕೆದಾರರ ಮಹಾ ಮಂಡಲದ ಅಧ್ಯಕ್ಷ ಅಶೋಕ ಕಂದ್ರತ್ತಿ, ನೆಲ ಮತ್ತು ಜಲ ನಿರ್ವಹಣೆ ಸಿಬ್ಬಂದಿ ಸುರೇಶ್‌ ಕುಲಕರ್ಣಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ