ಆ್ಯಪ್ನಗರ

ಸಚಿವ ರಮೇಶ ಜಾರಕಿಹೊಳಿ‌ ದಿಲ್ಲಿ ಭೇಟಿ ಸಾಮಾನ್ಯ, ಡಾ.ಕೆ. ಸುಧಾಕರ್‌ ಸಮರ್ಥನೆ

ಬಿಎಲ್ ಸಂತೋಷ್‌ ನಮ್ಮ ಪಕ್ಷದ ದೊಡ್ಡ ನಾಯಕರು. ಅವರನ್ನು ಭೇಟಿ ಮಾಡೋದು ಅಪರಾಧವಲ್ಲ. ನಮ್ಮ ಪಕ್ಷದ ಸಂಘಟನಾ ಕಾರ್ಯದರ್ಶಿಯನ್ನು ರಮೇಶ್‌ ಜಾರಕಿಹೊಳಿ ಭೇಟಿ ಮಾಡಿದರೆ ತಪ್ಪೇನು? ಎಂದು ಸುಧಾಕರ್‌ ಪ್ರಶ್ನಿಸಿದ್ದಾರೆ.

Vijaya Karnataka 21 Nov 2020, 1:34 pm
ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ‌ ಅವರ ದಿಲ್ಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನೀರಾವರಿ ಇಲಾಖೆಗೆ ಸಂಬಂಧಿಸಿದ ಕೆಲಸಗಳಿಗೆ ದಿಲ್ಲಿಗೆ ಭೇಟಿ ನೀಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.
Vijaya Karnataka Web Sudhakar K
ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌


ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದಂತೆ ಕೋರ್ಟ್ ಕೆಲಸ ಇರುತ್ತದೆ. ಹೀಗಾಗಿ ಭೇಟಿ ಆಗಿರಬಹುದು. ಅದಕ್ಕೆ ಬೇರೆ ಅರ್ಥವನ್ನು ಕಲ್ಪಿಸಬಾರದು ಎಂದು ವಿನಂತಿಸಿಕೊಂಡರು.

ಬಿಎಲ್ ಸಂತೋಷ್‌ ಹಾಗೂ ರಮೇಶ ಜಾರಕಿಹೊಳಿ‌ ಭೇಟಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಬಿಎಲ್ ಸಂತೋಷ್‌ ನಮ್ಮ ಪಕ್ಷದ ದೊಡ್ಡ ನಾಯಕರು. ಅವರನ್ನು ಭೇಟಿ ಮಾಡೋದು ಅಪರಾಧ ಅಲ್ಲ. ನಮ್ಮ ಪಕ್ಷದ ಸಂಘಟನಾ ಕಾರ್ಯದರ್ಶಿಯನ್ನು ಭೇಟಿ ಮಾಡಿದರೆ ತಪ್ಪೇನು?" ಎಂದು ಪ್ರಶ್ನಿಸಿದರು.

ಸಚಿವ ಸಂಪುಟ ವಿಸ್ತರಣೆಯ ಕೌತುಕದ ಮಧ್ಯೆ ಕುತೂಹಲ ಮೂಡಿಸಿದ ಬಿಎಲ್‌ ಸಂತೋಷ್‌-ರಮೇಶ್‌ ಜಾರಕಿಹೊಳಿ ಭೇಟಿ!
ಎಂಟಿಬಿ ನಾಗರಾಜ್‌, ಆರ್. ಶಂಕರ್‌, ಮುನಿರತ್ನ, ಹಾಗೂ ಎಚ್‌ ವಿಶ್ವನಾಥ್‌ ಅವರಿಗೆ ಸಚಿವ ಸ್ಥಾನ ಸಿಗುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲರೂ ಮಂತ್ರಿಗಳು ಆಗೋ ವಿಶ್ವಾಸವಿದೆ‌. ಸಿಎಂ ಈ ಬಗ್ಗೆ ಹಲವು ಸಲ ಸ್ಪಷ್ಟವಾಗಿ ಹೇಳಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ವಿಶ್ವಾಸವಿದೆ. ಉಪಚುನಾವಣೆ ಸೋತವರು ಎಂಎಲ್ಸಿ ಆಗಿದ್ದಾರೆ. ಮುಂದೆ ಮಂತ್ರಿಗಳು ಆಗೋ ವಿಶ್ವಾಸವಿದೆ‌ ಎಂದರು.

ಕೊರೊನಾ ಲಸಿಕೆ ಅಧಿಕೃತವಾಗಿ ಬಿಡುಗಡೆಯಾಗಿಲ್ಲ

ಕೊರೊನಾ ಲಸಿಕೆ ಇನ್ನೂ ಅಧಿಕೃತವಾಗಿ ಬಿಡುಗಡೆ ಆಗಿಲ್ಲ. ಲಸಿಕೆ ಸಿದ್ದಪಡಿಸುವ ಕಂಪನಿ ಜೊತೆಗೆ ಕೇಂದ್ರ ಸರಕಾರ ಸಂಪರ್ಕ ಸಾಧಿಸಿದೆ. ಶೀಘ್ರದಲ್ಲಿಯೇ ದೊಡ್ಡ ಪ್ರಮಾಣದಲ್ಲಿ ಲಸಿಕೆ ದೇಶಕ್ಕೆ ಸಿಗಲಿದೆ ಎಂದರು.

ಆರೋಗ್ಯ ಇಲಾಖೆಯ ಸುಧಾರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ‌. ಲಸಿಕೆ ಸಂಗ್ರಹಕ್ಕೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೇಂದ್ರ ಆರೋಗ್ಯ ಸಚಿವರ ಜೊತೆಗೆ ಈಗಾಗಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಲಾಗಿದೆ ಎಂದು ವೈದ್ಯಕೀಯ ಸಚಿವ ಸುಧಾಕರ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ