ಆ್ಯಪ್ನಗರ

ಡ್ರಗ್ಸ್‌ ಜಾಲವನ್ನು ಬುಡಸಮೇತ ಕಿತ್ತು ಹಾಕಲು ಸರ್ಕಾರ ಪ್ರಯತ್ನ, ರಮೇಶ್ ಜಾರಕಿಹೊಳಿ

ಡ್ರಗ್ಸ್‌ ಜಾಲವನ್ನು ಬುಡಸಮೇತ ಕಿತ್ತು ಹಾಕಲು ಸರ್ಕಾರ ಪ್ರಯತ್ನ ಪಡಲಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತಾಗಿ ಮಾತನಾಡಿರುವ ಅವರು ಹೇಳಿದ್ದಿಷ್ಟು.

Vijaya Karnataka Web 6 Sep 2020, 2:27 pm
ಬೆಳಗಾವಿ: ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕಲು ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
Vijaya Karnataka Web ramesh jarakiholi


ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು ಡ್ರಗ್ಸ್‌ ಜಾಲವನ್ನು ಬುಡಸಮೇತ ಕಿತ್ತು ಹಾಕಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಕ್ತಿ ಮೀರಿ ಕೆಲಸ ಮಾಡುತ್ತಿವೆ ಎಂದರು.

ಡ್ರಗ್ಸ್‌ ದೇಹವನ್ನು ಮಾತ್ರವಲ್ಲ, ದೇಶವನ್ನೂ ದುರ್ಬಲ ಮಾಡುತ್ತದೆ. ಹಾಗಾಗಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಯುವಜನಾಂಗದಲ್ಲಿ ಡ್ರಗ್ಸ್‌ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ರಮೇಶ್ ಜಾರಕಿಹೊಳಿ ಕರೆ ನೀಡಿದರು.

ಮೈಸೂರಿಗೆ ಡ್ರಗ್ಸ್ ಡಬಲ್ ಅಟ್ಯಾಕ್..! ಗಾಂಜಾ ಗಮ್ಮತ್ತಿನ ಜೊತೆ ಆಫ್ರಿಕನ್ 'ಖಾಟ್'‌ ಕಾಟ..!

ರಾಜ್ಯದಲ್ಲಿ ಡ್ರಗ್ಸ್ ಜಾಲವನ್ನು ಎನ್‌ಸಿಬಿ ಅಧಿಕಾರಿಗಳ ಭೇದಿಸಿದ್ದು ಮೂವರು ಪೆಡ್ಲರ್‌ಗಳನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ಈ ನಡುವೆ ಡ್ರಗ್ಸ್‌ ನಂಟಿನ ಆರೋಪದಲ್ಲಿ ಸ್ಯಾಂಡಲ್‌ ವುಡ್ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ ರಾಗಿಣಿ ನೀಡಿರುವ ಮಾಹಿತಿಯ ಆಧಾರದಲ್ಲಿ ಮತ್ತಷ್ಟು ಮಂದಿಗೆ ನೋಟಿಸ್‌ ನೀಡುವ ಸಾಧ್ಯತೆ ಇದೆ. ಅಲ್ಲದೆ ಬೆಂಗಳೂರಿನ ಕಾರ್ಪೊರೇಟರ್‌ ಒಬ್ಬರ ಪುತ್ರನಿಗೂ ಎನ್‌ಸಿಬಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ ಎಂಬ ಮಾಹಿತಿ ಇದೆ. ಸರ್ಕಾರ ಕೂಡಾ ಡ್ರಗ್ಸ್ ಮಾಫಿಯಾವನ್ನು ಗಂಭೀರವಾಗಿ ಪರಿಗಣಿಸಿದ್ದು ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ