ಆ್ಯಪ್ನಗರ

ನೌಕರರ ಸಂಘದ ಮತದಾರರ ಪಟ್ಟಿಯಲ್ಲಿ ಲೋಪ: ಆರೋಪ

ಬೆಳಗಾವಿ: ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆಯ ಮತದಾರರ ಪಟ್ಟಿಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ವಿವಿಧ ಇಲಾಖೆಗಳ ಸರಕಾರಿ ನೌಕರರು ಶನಿವಾರ ...

Vijaya Karnataka 17 Feb 2019, 5:00 am
ಬೆಳಗಾವಿ : ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆಯ ಮತದಾರರ ಪಟ್ಟಿಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ವಿವಿಧ ಇಲಾಖೆಗಳ ಸರಕಾರಿ ನೌಕರರು ಶನಿವಾರ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
Vijaya Karnataka Web BLG-1602-2-52-16PRAMOD10


ಸಂಘದ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆದರೆ, ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ ಪಾಟೀಲ ಅವರು ಹೆಚ್ಚಿನ ಸಂಖ್ಯೆಯ ಸರಕಾರಿ ನೌಕರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟು ಅನ್ಯಾಯ ಮಾಡಿದ್ದಾರೆ ಎಂದು ಸರಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಮಹಾಂತೇಶ ಮಜತಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಶಿರಸ್ತೇದಾರ್‌ ಮೂಲಕ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಕರಡು ಮತದಾರರ ಪಟ್ಟಿ ಪ್ರಕಟಿಸಿದ ನಂತರ ಫೆ. 15ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇದ್ದರೂ, ನೌಕರರು ಸಂಘದ ಕಚೇರಿಗೆ ಹೋದರೆ ಅಲ್ಲಿ ಆಕ್ಷೇಪಣೆ ಸ್ವೀಕರಿಸಲು ಯಾರೂ ಲಭ್ಯವಿರುವುದಿಲ್ಲ. ಈ ಬಗ್ಗೆ ಅಧ್ಯಕ್ಷ ರನ್ನು ವಿಚಾರಿಸಿದರೆ ತಾನು ಯಾವುದೇ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ದೂರಿದರು.

ಸಂಘದ ಮತದಾರರ ಪಟ್ಟಿ ತಯಾರಿಸುವ ಜವಾಬ್ದಾರಿಯನ್ನು ಜಿಲ್ಲಾ ಘಟಕದ ಅಧ್ಯಕ್ಷ ರ ಬದಲು ಸಹಕಾರ ಸಂಘಗಳ ಇಲಾಖೆ ಅಧಿಕಾರಿಗಳಿಗೆ ವಹಿಸಿಕೊಡಬೇಕು. ಮತದಾರರ ಪಟ್ಟಿಯಲ್ಲಿ ಎಲ್ಲಾ ಸರಕಾರಿ ನೌಕರರ ಹೆಸರು ಸೇರ್ಪಡೆಗೊಳಿಸಬೇಕು. ಸಂಘದ ವಂತಿಗೆ ಸಲ್ಲಿಸಿದ ಎಲ್ಲಾ ಸರಕಾರಿ ನೌಕರರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಬೇಕು ಎಂದು ಆಗ್ರಹಿಸಿದರು.

ಮಹಾಂತೇಶ ಮಜತಿ, ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಸುಣಗಾರ, ರಾಜ್ಯ ಶಿಕ್ಷ ಕ ಸಂಘದ ಕೋಶಾಧ್ಯಕ್ಷ ಎಸ್‌.ಡಿ. ಗಂಗಣ್ಣವರ, ಎಸ್‌.ವೈ. ಬಡಿಗೇರ, ಮಹಾಂತೇಶ ಹಿರೇಮಠ, ಎನ್‌.ವಿ. ಓತಗೇರಿ, ನಿಂಗನಗೌಡ ಪಾಟೀಲ, ಶೇಖರ ಕರಂಬಳಕರ, ಬಿ.ಬಿ. ಮೇದಾರ, ಎಸ್‌.ಬಿ. ಜಕಾತಿ, ಶಿವಾನಂದ ಕುಡಸೋಮಣ್ಣವರ, ಎಂ.ಎಫ್‌. ಸಿದ್ದನಗೌಡರ, ಎಂ.ಎಸ್‌. ಕೋಳಿ, ಅನ್ವರ ಲಂಗೋಟಿ, ಬಿ.ಬಿ. ಬಸಕ್ರಿ, ಆಶೀಪ್‌ ಅತ್ತಾರ, ಐ.ಎಫ್‌. ಬಡಿಗೇರ, ಬಿ.ಬಿ. ಬಾನಿ, ಬಸವರಾಜ ಯಳ್ಳೂರ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ