ಆ್ಯಪ್ನಗರ

ಮಕ್ಕಳಿಗೆ ಪಾಠ ಮಾಡಿದ ಶಾಸಕ ಅಭಯ ಪಾಟೀಲ

Vijaya Karnataka 16 Jun 2018, 5:00 am
ಬೆಳಗಾವಿ: ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು ಮತ್ತು ಪಾಠ ಮಾಡಿದರು.
Vijaya Karnataka Web abhaypatil


ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ಹಿರಿಯ ಮರಾಠಿ ಶಾಲೆ ನಂ.27, ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ.17 ಸೇರಿದಂತೆ ವಿವಿಧ ಶಾಲೆಗಳಿಗೆ ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿದರು. ಇದೇ ವೇಳೆ ವಿದ್ಯಾರ್ಥಿಗಳು ಶಾಲೆಗೆ ಕಂಪ್ಯೂಟರ್‌, ಬೇಂಚ್‌, ಲೈಬ್ರರಿ, ಲ್ಯಾಬ್‌ ಸೇರಿದಂತೆ ಇನ್ನಿತರ ಸೌಲಭ್ಯ ಕಲ್ಪಿಸಿಕೊಡುವಂತೆ ಮನವಿ ಮಾಡಿದರು.

ನಂತರ ಶಿಕ್ಷಕರೊಂದಿಗೆ ಮಾತನಾಡಿದ ಶಾಸಕ ಅಭಯ ಪಾಟೀಲ, ಸರಕಾರಿ ಶಾಲೆಗಳು ಖಾಸಗಿ ಶಾಲೆಗಳನ್ನು ಮೀರಿಸಬೇಕು. ಸರಕಾರಿ ಶಾಲೆಗಳ ವಿದ್ಯಾರ್ಥಿಗಳು ಖಾಸಗಿ ಶಾಲೆಯ ವಿದ್ಯಾರ್ಥಿಗಳಿಂತ ಉತ್ತಮ ಸಾಧನೆ ಮಾಡಬೇಕು. ಬಡವರ ಮಕ್ಕಳು ಪ್ರತಿಭಾವಂತರಾಗಬೇಕು. ಕ್ಷೇತ್ರದ ಸರಕಾರಿ ಶಾಲೆಗಳಿಗೆ ಸ್ಮಾರ್ಟ್‌ ಬೋರ್ಡ್‌, ಗ್ರೀನ್‌ ಬೋರ್ಡ್‌, ಬೇಂಚ್‌, ಗ್ರಂಥಾಲಯ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ