ಆ್ಯಪ್ನಗರ

ಉತ್ತರ ಕರ್ನಾಟಕದಲ್ಲಿ ಹೆಚ್ಚು ಕೈಗಾರಿಕೆ ಸ್ಥಾಪನೆ: ಜಗದೀಶ್‌ ಶೆಟ್ಟರ್‌

ಈಗಾಗಲೇ ಆರು ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗಾರಿಕಾ ಮೂಲಸೌಕರ್ಯ ಒದಗಿಸುವ ಕಾಮಗಾರಿ ಆರಂಭಿಸಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದರು.

Vijaya Karnataka Web 1 Oct 2019, 8:43 pm
ಬೆಳಗಾವಿ: ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಕೈಗಾರಿಕಾ ಸ್ಥಾಪನೆ ಮತ್ತು ಬೆಳವಣಿಗೆಗೆ ಸರಕಾರ ಆದ್ಯತೆ ನೀಡಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
Vijaya Karnataka Web ಜಗದೀಶ್‌ ಶೆಟ್ಟರ್‌
ಜಗದೀಶ್‌ ಶೆಟ್ಟರ್‌


ಬೆಳಗಾವಿಯಲ್ಲಿ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಗದೀಶ್‌ ಶೆಟ್ಟರ್‌ ಮಾತನಾಡಿದರು.

''ಉತ್ತರ ಕರ್ನಾಟಕ ಭಾಗದಲ್ಲಿಕೈಗಾರಿಕೆಗಳನ್ನು ಬೆಳೆಸಲು ಹಾಗೂ ಅವುಗಳಿಗೆ ಮೂಲಸೌಕರ್ಯ ಒದಗಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿತೀರ್ಮಾನಿಸಲಾಗುವುದು'', ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್‌ ಶೆಟ್ಟರ್‌ ಭರವಸೆ ನೀಡಿದರು.

''ಉದ್ಯಮಬಾಗ ಪ್ರದೇಶ ಮೂಲಸೌಕರ್ಯಗಳಿಂದ ವಂಚಿತವಾಗಿದೆ. ರಸ್ತೆಗಳು ಹಾಳಾಗಿವೆ. ಇಂದಿನ ಭೇಟಿಯಲ್ಲಿನನಗೆ ಪೂರ್ಣ ಮನವರಿಕೆಯಾಗಿದೆ. ಸುಧಾರಣೆ ಮತ್ತು ಸೌಕರ್ಯ ಕಲ್ಪಿಸಲು ಶೀಘ್ರ ಕ್ರಮ ಜರುಗಿಸಲಾಗುವುದು'' ಎಂದು ತಿಳಿಸಿದರು. ಸಭೆಯಲ್ಲೇ ಪಾಲಿಕೆ ಆಯುಕ್ತರಿಂದ ಕೆಲ ಮಾಹಿತಿ ಪಡೆದುಕೊಂಡರು.

''ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕೊಪ್ಪಳ ಒಳಗೊಂಡು ಇತರೆ ಕಡೆಗೆ ಕೈಗಾರಿಕೆಗಳು ಬೆಳೆಯುತ್ತಿವೆ. ಇವುಗಳಿಗೆ ಕೇಂದ್ರ, ರಾಜ್ಯಗಳಿಂದ ಏನು ಸಿಗಬೇಕೋ ಅದನ್ನೆಲ್ಲಕೊಡಿಸಲಾಗುವುದು. ಆಯಾ ಜಿಲ್ಲಾಧಿಕಾರಿಗಳು ಸಕಾಲಕ್ಕೆ ಸಭೆಗಳನ್ನು ಮಾಡಿ ಕೈಗಾರಿಕೆ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಬೇಕು. ನಿಮ್ಮ ಪ್ರಸ್ತಾವಗಳು ರಾಜ್ಯದಿಂದ ಕೇಂದ್ರಕ್ಕೆ ಹೋಗುವುದಿದ್ದರೆ ಕಳುಹಿಸಿಕೊಡುತ್ತೇನೆ'', ಎಂದರು.

ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲಕರ ಮಾದರಿಯ ಕೈಗಾರಿಕಾ ನೀತಿಯನ್ನು ಶೀಘ್ರ ಜಾರಿಗೆ ತರಲಾಗುವುದು, ಏಕಗವಾಕ್ಷಿ ಪದ್ಧತಿಯಡಿ ಕೈಗಾರಿಕೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ್ ಅಂಗಡಿ ಮಾತನಾಡಿ, ದೇಶದ ತೆರಿಗೆಯಲ್ಲಿ ಶೇಕಡ 75ರಷ್ಟು ಪಾಲು ಸಣ್ಣ ಉದ್ದಿಮೆಗಾರರಿಂದ ಬರುತ್ತಿದ್ದು, ಈ ಕ್ಷೇತ್ರದ ಪ್ರಗತಿಗೆ ಸರಕಾರ ನೆರವು ನೀಡಲು ಸಿದ್ಧವಿದೆ ಎಂದು ಸಚಿವ ಜಗದೀಶ್ ಶೆಟ್ಟರ್‌ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ