ಆ್ಯಪ್ನಗರ

ಈ ಬಾರಿ ಅಂಗಡಿ ಬದಲಾವಣೆ ನಿಶ್ಚಿತ

ಬೆಳಗಾವಿ: ನಗರದ ಅಭಿವೃದ್ಧಿಗೆ ಏನೂ ಮಾಡದ ಹಾಗೂ ...

Vijaya Karnataka 12 Apr 2019, 5:00 am
ಬೆಳಗಾವಿ : ನಗರದ ಅಭಿವೃದ್ಧಿಗೆ ಏನೂ ಮಾಡದ ಹಾಗೂ ಇಲ್ಲಿನ ಸಮಸ್ಯೆಗಳ ಬಗ್ಗೆ ಸಂಸತ್‌ನಲ್ಲಿ ಧ್ವನಿ ಎತ್ತದ ಸುರೇಶ ಅಂಗಡಿ ಜನರಿಗೆ ಬೇಡವಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಅವರ ಬದಲಾವಣೆ ನಿಶ್ಚಿತವೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಭವಿಷ್ಯ ನುಡಿದಿದ್ದಾರೆ.
Vijaya Karnataka Web BLG-1104-2-52-11RAJU-7


ಇಲ್ಲಿನ ಕಾಂಗ್ರೆಸ್‌ ಭವನದಲ್ಲಿ ಗುರುವಾರ ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್‌ ಪದಾಧಿಕಾರಿಗಳು ಹಾಗೂ ಪ್ರಮುಖರ ಸಭೆ ನಡೆಸಿದ ಅವರು, ''ಕಾಂಗ್ರೆಸ್‌ಗೆ ಈ ಬಾರಿ ಗೆಲುವು ಸಿಕ್ಕೇ ಸಿಗುತ್ತದೆ. ಅಭ್ಯರ್ಥಿ ಡಾ. ವಿ.ಎಸ್‌. ಸಾಧುನವರಿಗೆ ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಭೇಟಿ ನೀಡಲು ಆಗುವುದಿಲ್ಲ. ಹೀಗಾಗಿ ಪ್ರತಿಯೊಬ್ಬ ಕಾರ್ಯಕರ್ತ ತಾನೇ ಅಭ್ಯರ್ಥಿ ಎಂದು ತಿಳಿದು ಗೆಲುವಿಗೆ ಶ್ರಮಿಸಬೇಕು'', ಎಂದು ಸಲಹೆ ನೀಡಿದರು.

''ಕಾಂಗ್ರೆಸ್‌ ಕಾರ್ಯಕರ್ತರು ಒಗ್ಗಟ್ಟಿನಿಂದ ದುಡಿಯಬೇಕು. ಏನೇ ಸಮಸ್ಯೆಗಳು ಇದ್ದರೆ ಜಿಲ್ಲಾ ಮಂತ್ರಿ ಇಲ್ಲವೆ ನಾಯಕರ ಜತೆಗೆ ಚರ್ಚಿಸಿ ಬಗೆಹರಿಸಿಕೊಳ್ಳಬೇಕು'', ಎಂದು ವಿನಂತಿಸಿದರು.

ಸಚಿವ ಸತೀಶ್‌ ಜಾರಕಿಹೊಳಿ, ಶಾಸಕರಾದ ಲಕ್ಷ್ಮೇ ಹೆಬ್ಬಾಳಕರ್‌, ಅಂಜಲಿ ನಿಂಬಾಳ್ಕರ್‌, ಮಹಾಂತೇಶ ಕೌಜಲಗಿ, ಮಾಜಿ ಶಾಸಕರಾದ ಅಶೋಕ ಪಟ್ಟಣ, ಫಿರೋಜ್‌ ಸೇಠ್‌, ಈರಣ್ಣ ಮತ್ತಿಕಟ್ಟಿ, ವೀರಕುಮಾರ್‌ ಪಾಟೀಲ, ರಾಜು ಸೇಠ್‌, ವಿನಯ ನಾವಲಗಟ್ಟಿ ಒಳಗೊಂಡು ಕಾಂಗ್ರೆಸ್‌ನ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.

ಇಲ್ಲಿನ ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಮತ ಹಾಕಿದರೆ ಅದು ಪಾಕಿಸ್ತಾನಕ್ಕೆ ಹಾಕಿದಂತೆ ಎಂದು ಹೇಳುತ್ತಿದ್ದಾರೆ. ಆದರೆ ಪಾಕಿಸ್ತಾನದ ಪ್ರಧಾನಿಯೇ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದರೆ ಕಾಶ್ಮೀರ ವಿಚಾರವಾಗಿ ಶಾಂತಿ ಮಾತುಕತೆಗೆ ಅನುಕೂಲ ಎಂದಿದ್ದಾರೆ. ಹೀಗಾಗಿ ಪಾಕಿಸ್ತಾನಕ್ಕೆ ಯಾರ ಬೆಂಬಲ ಇದೆ ಎಂಬ ಬಗ್ಗೆ ಅನುಮಾನ ಮೂಡುತ್ತಿದೆ.
- ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ