ಆ್ಯಪ್ನಗರ

ಪಾಲಿಕೆ ವಾರ್ಡ್‌ ಮೀಸಲು: ವಿಚಾರಣೆ ಮುಂದೂಡಿಕೆ

ಇಲ್ಲಿನ ವಾರ್ಡ್‌ಗಳ ಪುನರ್‌ವಿಂಗಡಣೆ ಹಾಗೂ ಅವುಗಳ ಮೀಸಲಾತಿ ದಾವೆ ಕುರಿತ ತೀರ್ಪನ್ನು ಧಾರವಾಡ ಹೈಕೋರ್ಟ್‌ ಪೀಠ ಎರಡು ವಾರಗಳ ಕಾಲ ಮುಂದೂಡಿದೆ...

Vijaya Karnataka 13 Jul 2019, 5:00 am
ಬೆಳಗಾವಿ: ಇಲ್ಲಿನ ವಾರ್ಡ್‌ಗಳ ಪುನರ್‌ವಿಂಗಡಣೆ ಹಾಗೂ ಅವುಗಳ ಮೀಸಲಾತಿ ದಾವೆ ಕುರಿತ ತೀರ್ಪನ್ನು ಧಾರವಾಡ ಹೈಕೋರ್ಟ್‌ ಪೀಠ ಎರಡು ವಾರಗಳ ಕಾಲ ಮುಂದೂಡಿದೆ. ವಾರ್ಡ್‌ಗಳ ಪುನರ್‌ವಿಂಗಡಣೆ ಹಾಗೂ ಅವುಗಳ ಮೀಸಲಾತಿ ನಿಗದಿ ಅವೈಜ್ಞಾನಿಕವಾಗಿ ನಡೆದಿದೆ ಎಂದು ಮಾಜಿ ನಗರಸೇವಕರು ನ್ಯಾಯಾಲಯದ ಕಟ್ಟೆ ಏರಿದ್ದರು. ಇದರ ವಿಚಾರಣೆ ನಡೆಸಿದ್ದ ನ್ಯಾಯಾಪೀಠ ಇಂದು ತೀರ್ಪು ನೀಡುವುದಾಗಿ ದಿನಾಂಕ ನಿಗದಿಪಡಿಸಿತ್ತು. ಆದರೆ ರಾಜ್ಯದಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ದಿನೇಶ್‌ರಾವ್‌ ನ್ಯಾಯಾಲಯದ ಕಲಾಪಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ತೀರ್ಪನ್ನು ಮುಂದೂಡಲಾಗಿದೆ.
Vijaya Karnataka Web municipal ward reserve postponement of inquiry
ಪಾಲಿಕೆ ವಾರ್ಡ್‌ ಮೀಸಲು: ವಿಚಾರಣೆ ಮುಂದೂಡಿಕೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ